spot_img

ಭಾರತವೆನ್ನುವುದು ಪುಣ್ಯಕ್ಷೇತ್ರ : ಅಕ್ಷಯ ಗೋಖಲೆ ಕಾರ್ಗಿಲ್ ವಿಜಯ ದಿವಸ ‘ಮೌಲ್ಯಸುಧಾ’ದಲ್ಲಿ ಅಭಿಮತ

Date:

ಗಣಿತನಗರ: ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮರ್ಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ ಮಾಲಿಕೆ 38’ರಲ್ಲಿ ‘ಕಾರ್ಗಿಲ್ ವಿಜಯ ದಿವಸ’ದ ಶುಭ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ‘ಬಹುರತ್ನ ಪ್ರಸವೀ ಭಾರತೀ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ನಮ್ಮ ಬದುಕು ಸಮಾಜಕ್ಕೆ ಸಮರ್ಪಿತವಾಗಿರಲಿ, ಒಳ್ಳೆಯ ಆದರ್ಶದ ಅಡಿಗಲ್ಲಿನ ಮೇಲೆ ನಮ್ಮ ಭವಿಷ್ಯವನ್ನು ನಾವು ಕಟ್ಟಿಕೊಳ್ಳಬೇಕು. ಭಾರತವನ್ನು ಬೆಳಗಿಸುವಂತಹ ಮುತ್ತು ರತ್ನಗಳು ನಾವಾಗಬೇಕು. ಅದ್ಭುತ ಸೈನಿಕ ಪರಂಪರೆ ನಮ್ಮದು. ನಮ್ಮ ಸೈನಿಕರೇ ನಮಗೆ ಸ್ಫೂರ್ತಿ ಎಂದು ನುಡಿಯುತ್ತಾ, ಕಾರ್ಗಿಲ್ ವಿಜಯದಲ್ಲಿ ಬಲಿದಾನಗೈದ ವೀರ ಯೋಧರ ಯಶೋಗಾಥೆಯನ್ನು ತೆರೆದಿಟ್ಟರು.

ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲರಾದ ಶ್ರೀ ದಿನೇಶ್‌ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ ಮತ್ತು ಶ್ರೀಮತಿ ಉಷಾ ರಾವ್ ಯು, ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು, ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಮುಖ್ಯಸ್ಥ ಶ್ರೀ ಸಂದೀಪ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಪ್ರಜ್ವಲ್ ಕುಲಾಲ್ ನಿರೂಪಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ: ಟ್ರಕ್‌ಗೆ ಸಿಲುಕಿ ಆರು ಮಂದಿ ಸಾವು, ಹಲವರಿಗೆ ಗಾಯ!

ಹಾಸನದ ಮೊಸಳೆಹೊಸಳ್ಳಿ ಬಳಿ ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಟ್ರಕ್ ಹರಿದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೆಕ್ಕಡ್ಕ ಮಠ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ಸಾರ್ವಜನಿಕ ಸೋಣಾರ್ಥಿ ಹೂವಿನ ಪೂಜೆ

ಹೆಕ್ಕಡ್ಕ ಮಠದ ಶ್ರೀ ಲಕ್ಷ್ಮೀನಾರಾಯಣ ದೇವರ ಸನ್ನಿಧಿಯಲ್ಲಿ ದಿನಾಂಕ 12/09/2025ರ ಶುಕ್ರವಾರದಂದು ಸಾರ್ವಜನಿಕ ಸೋಣಾರ್ಥಿ ಹೂವಿನ ಪೂಜೆಯು ವಿಜೃಂಭಣೆಯಿಂದ ಜರುಗಿತು.

ಪಡುಬೈಲೂರು ಶ್ರೀ ಇಷ್ಟ ಮಹಾಲಿಂಗೇಶ್ವರ ಹುಲಿವೇಷ ತಂಡದ ದಶಮಾನೋತ್ಸವ ಸಂಭ್ರಮದ ಕಾರ್ಯಕ್ರಮ

ಸೆ. 15 ವಿಟ್ಲಪಿಂಡಿಯಂದು ರಥಬೀದಿಯಲ್ಲಿ ಹಾಗೂ ರಾಜಾಂಗಣದಲ್ಲಿ ಸುಮಾರು 45 ವೇಷಧಾರಿಗಳನ್ನೊಳಗೊಂಡ ಶ್ರೀ ಇಷ್ಟ ಮಹಾಲಿಂಗೇಶ್ವರ ಹುಲಿವೇಷ ತಂಡದಿಂದ ಈ ಬಾರಿ ಅದ್ದೂರಿಯ ಪ್ರದರ್ಶನ ನಡೆಯಲಿದೆ ಎಂದು ಪತ್ರಿಕಾ ಗೋಷ್ಟಿಯಲ್ಲಿ ವಿವರಿಸಲಾಯಿತು.

ಪ್ರಮೋದ ಮುತಾಲಿಕ್: ‘ಪಾಕ್ ಜೊತೆಗಿನ ಕ್ರಿಕೆಟ್ ಪಂದ್ಯ ದೇಶಕ್ಕೆ ದ್ರೋಹ’

ಪಾಕಿಸ್ತಾನದ ಜೊತೆಗಿನ ಕ್ರಿಕೆಟ್ ಪಂದ್ಯಗಳನ್ನು ವಿರೋಧಿಸಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.