spot_img

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ: ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿದ ಚೀನಾ

Date:

spot_img
spot_img

ಪಹಲ್ಗಾಮ್ ದಾಳಿ ಬಳಿಕ ಭಾರತ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಸಜ್ಜಾಗಿದೆ. ಈಗಾಗಲೇ ಪಾಕಿಸ್ತಾನ ವಿರುದ್ಧ ಭಾರತ ಹಲವಾರು ಮಾಸ್ಟರ್ ಸ್ಟ್ರೋಕ್ ನಡೆಸಿದ್ದು, ಯುದ್ಧದ ಕಾರ್ಮೋಡಗಳು ತೀವ್ರಗೊಂಡಿವೆ. ಅಮೆರಿಕ ಮತ್ತು ಇಸ್ರೇಲ್‌ನ ಯುದ್ಧ ವಿಮಾನಗಳು ಭಾರತದಲ್ಲಿ ಇಳಿದಿರುವುದರಿಂದ ಪರಿಸ್ಥಿತಿ ಮತ್ತಷ್ಟು ರಣರಂಗ ರೂಪಿಸುತ್ತಿರುವುದು ಸ್ಪಷ್ಟವಾಗಿದೆ.

ಈ ನಡುವೆ ಪಾಕಿಸ್ತಾನಕ್ಕೆ ಚೀನಾ ಬೆಂಬಲ ಘೋಷಣೆ ನೀಡಿದ್ದು, ಪರಿಸ್ಥಿತಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಭಾರತ ಮತ್ತು ಪಾಕಿಸ್ತಾನ ಎರಡೂ ಶಾಂತಿಯನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಅಲ್ಲದೆ, ಪಾಕಿಸ್ತಾನದ ಸಾರ್ವಭೌಮತ್ವ ಹಾಗೂ ಭದ್ರತಾ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಚೀನಾ ಸದಾ ಬದ್ಧವಾಗಿದೆ ಎಂದು ವಾಂಗ್ ಯಿ ಪುನರುಚ್ಚರಿಸಿದ್ದಾರೆ. ಪಾಕಿಸ್ತಾನದ ಭದ್ರತಾ ಕಾಳಜಿಗಳನ್ನು ಚೀನಾ ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದು, ಭಯೋತ್ಪಾದನೆ ವಿರುದ್ಧದ ಪಾಕ್ ಕ್ರಮಗಳಿಗೆ ಬೆಂಬಲ ನೀಡಿದೆ ಎಂದು ಚೀನಾ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ

ಪ್ರತಿ ವರ್ಷ ಅಕ್ಟೋಬರ್ 17 ರಂದು ಜಗತ್ತಿನಾದ್ಯಂತ 'ಬಡತನ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ' (International Day for the Eradication of Poverty) ವನ್ನು ಆಚರಿಸಲಾಗುತ್ತದೆ.

ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ

ಅತ್ಯುತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಪೆರ್ವಾಜೆ ಸರ್ಕಾರಿ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ SDMC ಪ್ರಶಸ್ತಿ ಲಭಿಸಿತು.

ದೀಪಾವಳಿ ಪ್ರಯುಕ್ತ: ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಿಂದ ಕೊಂಡಾಡಿ ಭಜನೆಕಟ್ಟೆಯಲ್ಲಿ ಗೂಡುದೀಪ ಸ್ಪರ್ಧೆ

ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ, ಹಿರಿಯಡಕ ಇವರ ವತಿಯಿಂದ ಗೂಡುದೀಪ ಸ್ಪರ್ಧೆಯು ನಡೆಯಲಿದೆ.

ನೋಡೋಕಷ್ಟೆ ಮುಳ್ಳು; ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಪಾಪಸ್​ ಕಳ್ಳಿ!

ಪಾಪಸ್ ಕಳ್ಳಿ (Cereus Night Bloom Cactus) ನೋಡುವುದಕ್ಕೆ ಮುಳ್ಳುಗಳಿಂದ ಕೂಡಿದ್ದರೂ, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.