ಇರಾನ್ ದಾಳಿಗೆ ಅಮೇರಿಕ ಭಾರತದ ನೌಕಾ ನೆಲೆಯನ್ನು ಬಳಸುತ್ತಿದೆಯೆಂಬ ಸುಳ್ಳು ವರದಿಯನ್ನು ತಿರಸ್ಕರಿಸಿದ ಸಚಿವಾಲಯ

Date:

spot_img

ಹೊಸದಿಲ್ಲಿ: ಇರಾನ್ ವಿರುದ್ಧದ ಯುದ್ಧದ ಅಬ್ಬರ ಜೋರಾಗಿರುವ ನಡುವೆಯೇ, ಅಮೆರಿಕವು ಭಾರತದ ನೌಕಾ ನೆಲೆಗಳನ್ನು ಬಳಸುತ್ತಿದೆ ಎಂಬ ಅಂತಾರಾಷ್ಟ್ರೀಯ ವರದಿಗಳನ್ನು ಭಾರತ ಸರ್ಕಾರವು ಬಲವಾಗಿ ತಳ್ಳಿಹಾಕಿದೆ. ಅಮೆರಿಕದ ಮಾಜಿ ಸೇನಾ ಅಧಿಕಾರಿ ನೀಡಿದ್ದ ಈ ಹೇಳಿಕೆಯು ಸಂಪೂರ್ಣ ‘ಸುಳ್ಳು ಮತ್ತು ಕಟ್ಟುಕಥೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಸ್ಪಷ್ಟಪಡಿಸಿದೆ.

ಅಮೆರಿಕ ಮೂಲದ ‘ಚಾನೆಲ್ ಒನ್ ಅಮೇರಿಕಾ ನ್ಯೂಸ್ ನೆಟ್‌ವರ್ಕ್’ (OAN) ಗೆ ನೀಡಿದ ಸಂದರ್ಶನವೊಂದರಲ್ಲಿ ಅಮೆರಿಕದ ಮಾಜಿ ಸೇನಾ ಕರ್ನಲ್ ಡೌಗ್ಲಾಸ್ ಮ್ಯಾಕ್‌ಗ್ರೆಗರ್, “ಇರಾನ್ ವಿರುದ್ಧದ ಸಂಘರ್ಷದಲ್ಲಿ ಅಮೆರಿಕದ ನೆಲೆಗಳು ಹಾನಿಗೊಳಗಾಗಿವೆ, ಹೀಗಾಗಿ ಅಮೆರಿಕದ ನೌಕಾಪಡೆಯು ಭಾರತೀಯ ಬಂದರುಗಳನ್ನು ಅವಲಂಬಿಸಿದೆ” ಎಂಬ ಅಚ್ಚರಿಯ ಹೇಳಿಕೆ ನೀಡಿದ್ದರು. ಈ ವಿಡಿಯೋ ತುಣುಕುಗಳು ಜಾಗತಿಕ ಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು.

ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಾಲಯದ ಫ್ಯಾಕ್ಟ್‌ಚೆಕ್ ಘಟಕವು, ಇಂತಹ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದೆ. “OAN ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ಈ ವರದಿಯು ನಕಲಿ ಹಾಗೂ ಆಧಾರರಹಿತವಾಗಿದೆ. ಇಂತಹ ಸುಳ್ಳು ಮಾಹಿತಿಗಳ ಬಗ್ಗೆ ಸಾರ್ವಜನಿಕರು ಎಚ್ಚರದಿಂದಿರಬೇಕು” ಎಂದು ಎಕ್ಸ್ (X) ಮೂಲಕ ಎಚ್ಚರಿಕೆ ನೀಡಿದೆ. ಇನ್ನು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಭಾರತವು ಆತಂಕ ವ್ಯಕ್ತಪಡಿಸಿದ್ದು, ಎರಡೂ ರಾಷ್ಟ್ರಗಳು ಸಂಯಮ ಕಾಯ್ದುಕೊಳ್ಳಬೇಕು ಮತ್ತು ನಾಗರಿಕರ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ