spot_img

ಪಾಕ್ ಪರ ಬೇಹುಗಾರಿಕೆ ಆರೋಪದಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿ ಅರೆಸ್ಟ್!

Date:

spot_img
spot_img

ದೆಹಲಿ : ಭಾರತದ ನೌಕಾಪಡೆಯ ಪ್ರಮುಖ ಕಚೇರಿಯಿಂದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಸೂಕ್ಷ್ಮ ಮಾಹಿತಿ ರವಾನಿಸಿದ ಆರೋಪದ ಮೇಲೆ ನೌಕಾ ಸಿಬ್ಬಂದಿಯೊಬ್ಬನನ್ನು ರಾಜಸ್ಥಾನ ಪೊಲೀಸರು ದೆಹಲಿಯಲ್ಲಿ ಬಂಧಿಸಿರುವ ಘಟನೆ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ.

ಬಂಧಿತನನ್ನು ಹರಿಯಾಣ ಮೂಲದ ವಿಶಾಲ್ ಯಾದವ್ ಎಂದು ಗುರುತಿಸಲಾಗಿದೆ. ಈತ ನೌಕಾಪಡೆಯ ಕೇಂದ್ರ ಕಚೇರಿಯಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದನು. ಅಧಿಕಾರಿಗಳ ಪ್ರಕಾರ, ಈತ ಹಲವು ವರ್ಷಗಳಿಂದ “ಪ್ರಿಯಾ ಶರ್ಮಾ” ಎಂದು ಗುರುತಿಸಿಕೊಂಡಿದ್ದ ಪಾಕಿಸ್ತಾನದ ಐಎಸ್‌ಐ ಏಜೆಂಟ್ ಮಹಿಳೆಗೆ ಮಾಹಿತಿ ಲೀಕ್ ಮಾಡುತ್ತಿದ್ದನು. ಈ ಮಾಹಿತಿಗೆ ಪ್ರತಿಯಾಗಿ ಹಣವನ್ನು ಪಡೆದುಕೊಂಡಿದ್ದನು ಎಂಬುದು ತನಿಖೆಯಿಂದ ಸ್ಪಷ್ಟವಾಗಿದೆ.

“ಆಪರೇಷನ್ ಸಿಂಧೂರ” ಸೇರಿದಂತೆ ಹಲವಾರು ಕಾರ್ಯಾಚರಣೆಗಳ ರಹಸ್ಯ ಮಾಹಿತಿ ಯಾದವ್ ಹಂಚಿಕೊಂಡಿದ್ದನು. ಈ ಆರೋಪದ ಬಗ್ಗೆ ಭದ್ರತಾ ಸಂಸ್ಥೆಗಳು ವಿಶಾಲ್‌ನ ಮೊಬೈಲ್ ಪರಿಶೀಲಿಸಿದಾಗ ಸಾಕಷ್ಟು ಪುರಾವೆಗಳು ಲಭಿಸಿವೆ. ಸಾಮಾಜಿಕ ಮಾಧ್ಯಮದ ಮೂಲಕ ಈ ಸಂಪರ್ಕ ನಡೆದಿದ್ದು, ಅದು ಐಎಸ್‌ಐಯ ತಂತ್ರದ ಭಾಗವಾಗಿ ಪರಿಣಮಿಸಿದೆ.

ಈ ಕುರಿತು ವಿವರಣೆ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ವಿಷ್ಣುಕಾಂತ್ ಗುಪ್ತಾ, “ಸಾಮಾಜಿಕ ಜಾಲತಾಣಗಳನ್ನು ಬಳಸಿ ಐಎಸ್‌ಐ ಕಾರ್ಯಕರ್ತರು ಭಾರತೀಯ ಸಿಬ್ಬಂದಿಗಳನ್ನು ಬಲೆಗೆ ಬೀಳಿಸುತ್ತಿದ್ದಾರೆ. ಯಾವುದೇ ಅನುಮಾನಾಸ್ಪದ ಸಂಪರ್ಕದ ಬಗ್ಗೆ ಸಾರ್ವಜನಿಕರು ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು” ಎಂದು ತಿಳಿಸಿದ್ದಾರೆ.

ಈ ಹಿಂದೆ ಕೂಡ ಜ್ಯೋತಿ ಮಲ್ಲೋತ್ರಾ ಎಂಬ ಯೂಟ್ಯೂಬರ್‌ ರನ್ನು ಈ ರೀತಿಯ ಬೇಹುಗಾರಿಕೆ ಆರೋಪದ ಮೇಲೆ ಬಂಧಿಸಲಾಗಿತ್ತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.