spot_img

ಭಾರತೀಯರು ಕಳೆದ ವರ್ಷ ಸ್ಮಾರ್ಟ್‌ಫೋನ್‌ನೊಂದಿಗೆ 1.1 ಲಕ್ಷ ಕೋಟಿ ತಾಸು ಕಳೆದಿದ್ದಾರೆ !

Date:

spot_img

ಹೊಸದಿಲ್ಲಿ: ಭಾರತದ ಜನತೆ ಕಳೆದ ವರ್ಷ ಒಟ್ಟು 1.1 ಲಕ್ಷ ಕೋಟಿ ತಾಸುಗಳನ್ನು ಸ್ಮಾರ್ಟ್‌ಫೋನ್‌ ವೀಕ್ಷಣೆಯಲ್ಲಿ ಕಳೆದಿದ್ದಾರೆ ಎಂದು ಅರ್ನೆಸ್ಟ್ ಆ್ಯಂಡ್ ಯಂಗ್ (E&Y) ಸಂಸ್ಥೆಯ 2024ರ ಮನೋರಂಜನೆ ಮತ್ತು ಮಾಧ್ಯಮ ವರದಿ ತಿಳಿಸಿದೆ.

ಅತ್ಯಲ್ಪ ದರದಲ್ಲಿ ಡೇಟಾ ಲಭ್ಯವಾಗುತ್ತಿರುವುದರಿಂದ, ಡಿಜಿಟಲ್ ಮನೋರಂಜನೆ, ಗೇಮಿಂಗ್ ಮತ್ತು ಸೋಶಿಯಲ್ ಮೀಡಿಯಾ ಬಳಕೆ ಸಾಕಷ್ಟು ಹೆಚ್ಚಾಗಿದೆ.

ವರದಿ ಪ್ರಕಾರ, ಒಬ್ಬ ಭಾರತೀಯ ದಿನಕ್ಕೆ ಸರಾಸರಿ 5 ತಾಸು ಮೊಬೈಲ್‌ ಫೋನ್ ಬಳಸಿ ವ್ಯತೀತ ಮಾಡುತ್ತಿದ್ದಾನೆ.ಈ ಪೈಕಿ 70% ಸಮಯ ಸೋಶಿಯಲ್ ಮೀಡಿಯಾ, ಗೇಮಿಂಗ್ ಮತ್ತು ವೀಡಿಯೋ ವೀಕ್ಷಣೆಗೆ ಮೀಸಲಾಗಿರುವುದು ಗಮನಾರ್ಹ.ಭಾರತದ ಜನರು ಮೊಬೈಲ್‌ ಫೋನ್‌ ಬಳಕೆಯಲ್ಲಿ ಇಂಡೋನೇಷ್ಯಾ ಮತ್ತು ಬ್ರೆಜಿಲ್ ಬಳಿಕ ಮೂರನೇ ಸ್ಥಾನದಲ್ಲಿದ್ದಾರೆ.ಭಾರತದ ಮೊಬೈಲ್ ಬಳಕೆದಾರರು ಪ್ರತಿ ವರ್ಷ ತಾವು ಬಳಸುವ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದಾರೆ.

ಡಿಜಿಟಲ್ ಸ್ಮಾರ್ಟ್‌ಫೋನ್ ಬಳಕೆಯ ಹೆಚ್ಚಳದೊಂದಿಗೆ, ಮಾನಸಿಕ ಆರೋಗ್ಯ ಮತ್ತು ಉತ್ಪಾದಕತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಮತ್ತು ಸಮಯದ ಸಮತೋಲನ ಮತ್ತು ಸ್ಮಾರ್ಟ್‌ಫೋನ್ ಬಳಕೆಯ ಬಗ್ಗೆ ಜಾಗೃತಿಯ ಅಗತ್ಯವಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

ಈ ಮಾಹಿತಿ ಶಿಬಿರದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಭಾಗವಹಿಸಲಿದ್ದು, ಉದ್ಯೋಗ ಮೇಳದ ಸಮಗ್ರ ವಿವರಗಳನ್ನು ನೀಡಲಿದ್ದಾರೆ.

ಮಂಗಳೂರು: ಔಷಧಿಯೆಂದು ಇಲಿಪಾಷಾಣ ಸೇವಿಸಿದ್ದ ಹೆಡ್ ಕಾನ್ಸ್‌ಟೇಬಲ್ ದುರ್ಮರಣ!

ಔಷಧಿಯೆಂದು ತಪ್ಪಾಗಿ ಭಾವಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಧರ್ಮಸ್ಥಳ : ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಬಳಕೆಯಾದರೂ ಸಿಗದ ಕಳೇಬರ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ,ಮೊದಲು ಗುರುತಿಸಿದ ಸ್ಥಳದಲ್ಲಿ ಮಿನಿ ಹಿಟಾಚಿ ಯಂತ್ರವನ್ನು ಬಳಸಿದರೂ ಇದುವರೆಗೆ ಕಳೇಬರ ಪತ್ತೆಯಾಗಿಲ್ಲ.

ಮರವಂತೆಯಲ್ಲಿ ಮಳೆಗಾಲದಲ್ಲೂ ಅಪಾಯಕಾರಿ ಬೋಟಿಂಗ್: ಪ್ರವಾಸಿಗರ ಪ್ರಾಣದೊಂದಿಗೆ ಚೆಲ್ಲಾಟ!

ಬೈಂದೂರು ತಾಲೂಕಿನ ಮರವಂತೆ ಗ್ರಾಮದಲ್ಲಿ ಮಳೆಗಾಲದ ನಡುವೆಯೂ ಸೌಪರ್ಣಿಕಾ ನದಿಯಲ್ಲಿ ಅಪಾಯಕಾರಿ ಬೋಟಿಂಗ್ ನಡೆಸಲಾಗುತ್ತಿದ್ದು, ಇದು ಪ್ರವಾಸಿಗರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.