spot_img

ಭಾರತದ ಆಪರೇಷನ್ ಸಿಂಧೂರ್ ದಾಳಿ: ‘ಸಿಂಧೂರ’ ಅರ್ಥ ಹುಡುಕಿದ ಪಾಕಿಸ್ತಾನೀಯರು!

Date:

ನವದೆಹಲಿ: ಪಹಲ್ಗಾಮ್‌ನಲ್ಲಿ ಭಾರತೀಯ ಯೋಧರ ಮೇಲೆ ನಡೆದ ಉಗ್ರರ ಹತ್ಯಾಕಾಂಡಕ್ಕೆ ತೀರಾ ತೀಕ್ಷ್ಣ ಪ್ರತೀಕಾರವಾಗಿ ಭಾರತೀಯ ಸೇನೆ “ಆಪರೇಷನ್ ಸಿಂಧೂರ್” ಹೆಸರಿನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ. ಮಂಗಳವಾರ ತಡರಾತ್ರಿ 1.30ರ ಸುಮಾರಿಗೆ ನಡೆದ ಈ ದಾಳಿಯಲ್ಲಿ ಕನಿಷ್ಠ 9 ಉಗ್ರ ಶಿಬಿರಗಳು ನಾಶವಾಗಿದ್ದು, ಇದರಿಂದ ಪಾಕಿಸ್ತಾನದ ಭದ್ರತಾ ವ್ಯವಸ್ಥೆ ಬೆಚ್ಚಿಬಿದ್ದಂತಾಗಿದೆ.

ಈ ದಾಳಿಯ ಬಳಿಕ ಪಾಕಿಸ್ತಾನ ಪ್ರಜೆಗಳು ‘ಸಿಂಧೂರ’ ಎಂಬ ಶಬ್ದದ ಅರ್ಥವೇನು ಎಂಬುದರ ಕುರಿತು ಗೂಗಲ್‌ನಲ್ಲಿ ತಲೆಕೆಡಿಸಿಕೊಳ್ಳುತ್ತಿದ್ದಾರೆ. “ಆಪರೇಷನ್ ಸಿಂಧೂರ್”, “ಇಂಡಿಯಾ ಮಿಸೈಲ್ ಅಟ್ಯಾಕ್”, “ಬಿಳಿಧ್ವಜ”, “ಸಿಂಧೂರ್ ಅಟ್ಯಾಕ್ ಮೀನಿಂಗ್”, “ಆಪರೇಷನ್ ಸಿಂಧೂರ್ ವಿಕಿಪೀಡಿಯಾ” ಮುಂತಾದ ವಿಷಯಗಳನ್ನು ಗೂಗಲ್‌ನಲ್ಲಿ ಶೋಧಿಸುತ್ತಿರುವುದಾಗಿ ಟ್ರೆಂಡ್ ವರದಿ ಮಾಡಿದೆ.

ಭಾರತೀಯ ಸೇನೆ ಈ ದಾಳಿ ಮೂಲಕ ಪಹಲ್ಗಾಮ್ ಉಗ್ರ ದಾಳಿಯ ದುಃಖದ ಪ್ರತೀಕಾರವನ್ನು ತೀರಿಸಿ ದೇಶದ ಭದ್ರತೆಗೆ ಮತ್ತೆ ಬಲ ನೀಡಿದೆ. ‘ಸಿಂಧೂರ್’ ಎಂಬ ಶಬ್ದವೇ ಪಾಕಿಸ್ತಾನದಲ್ಲಿ ಆತಂಕದ ಹೆಸರಾಗಿ ಪರಿಣಮಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ದಾಳಿ ಬಗ್ಗೆ ಚರ್ಚೆ ಜೋರಾಗಿರುವುದು ಗಮನ ಸೆಳೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದೇಶದ ಭದ್ರತೆ ವಿಚಾರದಲ್ಲೂ ಗೋಸುಂಬೆಗಳ ತರಹ ವರ್ತಿಸುವ ಕಾಂಗ್ರೆಸ್: ರಾಕೇಶ್ ಶೆಟ್ಟಿ ಕುಕ್ಕುಂದೂರು

ಕಾಶ್ಮಿರದ ಪೆಹಲ್ಗಾಮ್ ನಲ್ಲಿ ಹಿಂದೂಗಳ ಹತ್ಯೆ ದೇಶದ ಭದ್ರತೆ ಮತ್ತು ಭಯೋತ್ಪಾದಕರ ವಿರುದ್ಧದ ಕಠಿಣ ನಿರ್ಧಾರಗಳ ಕುರಿತು ಕಾಂಗ್ರೆಸ್ ಪಕ್ಷ ಗೋಸುಂಬೆ ರೀತಿ ವರ್ತಿಸುತ್ತಿದೆ.

ಪಾಕಿಸ್ತಾನಕ್ಕೆ ರಾಜನಾಥ್ ಎಚ್ಚರಿಕೆ: ಭಾರತದ ತಾಳ್ಮೆ ಪರೀಕ್ಷಿಸಿದರೆ ಗುಣಮಟ್ಟದ ಪ್ರತಿಕ್ರಿಯೆ ಅನಿವಾರ್ಯ!

ಭಾರತದ ತಾಳ್ಮೆಯನ್ನು ಪಾಕಿಸ್ತಾನ ಮತ್ತೆ ಪರೀಕ್ಷಿಸುವ ಪ್ರಯತ್ನ ಮಾಡಿದರೆ, ಇದು ದೇಶದಿಂದ 'ಗುಣಮಟ್ಟದ ಪ್ರತಿಕ್ರಿಯೆ'ಗೆ ದಾರಿ ಮಾಡಿಕೊಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ದಿನ ವಿಶೇಷ – ಯುರೋಪ್ ದಿನ

ಪ್ರತಿ ವರ್ಷ ಮೇ 9 ರಂದು ಯುರೋಪ್ ದಿನವನ್ನು ಆಚರಿಸಲಾಗುತ್ತದೆ, ಇದು ಯುರೋಪಿನಲ್ಲಿ ಶಾಂತಿ ಮತ್ತು ಏಕತೆಯನ್ನು ಆಚರಿಸುತ್ತದೆ.

ಮಂಗಳೂರಿನಲ್ಲಿ ಬೆಂಕಿ ಹಚ್ಚಲು ಬಿಜೆಪಿ ಮಾಡಿದ ಪ್ರಯತ್ನ ವಿಫಲ : ಸಚಿವ ಗುಂಡೂರಾವ್ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಸುಹಾಸ್ ಶೆಟ್ಟಿ ಪ್ರಕರಣದ ಹಿನ್ನಲೆಯಲ್ಲಿ ಬಿಜೆಪಿ ಮಂಗಳೂರಿನಲ್ಲಿ ಕೋಮು ಅಶಾಂತಿ ಉಂಟುಮಾಡುವ ಯತ್ನಕ್ಕೆ ಮುಂದಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.