spot_img

ಛತ್ತೀಸ್‌ಗಢದಲ್ಲಿ ಅಮಾನವೀಯ ಘಟನೆ: ‘ರಾಧೇ ರಾಧೇ’ ಎಂದ ನರ್ಸರಿ ಮಗುವಿಗೆ ಥಳಿಸಿ, ಬಾಯಿಗೆ ಟೇಪ್‌ ಅಂಟಿಸಿದ ಶಿಕ್ಷಕಿ ಬಂಧನ!

Date:

spot_img

ರಾಯ್‌ಪುರ : ‘ರಾಧೇ.. ರಾಧೇ..’ ಎಂದು ಶುಭ ಕೋರಿದ ತಪ್ಪಿಗೆ ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿಗೆ ಶಿಕ್ಷಕಿಯೊಬ್ಬಳು ಥಳಿಸಿ, ಆಕೆಯ ಬಾಯಿಗೆ ಟೇಪ್ ಅಂಟಿಸಿದ ಅಮಾನವೀಯ ಘಟನೆ ಛತ್ತೀಸ್‌ಗಢದ ದುರ್ಗ್‌ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಈ ಪ್ರಕರಣದ ಸಂಬಂಧ ಆರೋಪಿ ಶಿಕ್ಷಕಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗುವಿಗೆ ಥಳಿಸಿ, ಬಾಯಿಗೆ ಟೇಪ್‌ ಅಂಟಿಸಿದ ಪ್ರಾಂಶುಪಾಲೆ

ದುರ್ಗ್‌ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ನರ್ಸರಿ ತರಗತಿಯಲ್ಲಿ ಓದುತ್ತಿರುವ ಮೂರೂವರೆ ವರ್ಷದ ಬಾಲಕಿಯೊಬ್ಬಳು ತನ್ನ ಶಿಕ್ಷಕಿಯನ್ನು ‘ರಾಧೇ.. ರಾಧೇ..’ ಎಂದು ಸಂಬೋಧಿಸಿದ್ದಾಳೆ. ಇದರಿಂದ ಕೋಪಗೊಂಡ ಶಾಲೆಯ ಪ್ರಾಂಶುಪಾಲೆ ಇಲಾ ಎವನ್‌ ಕಾಲ್ವಿನ್‌, ಆ ಬಾಲಕಿಗೆ ಥಳಿಸಿದ್ದಾರೆ. ಆ ನಂತರ ಅವಳ ಬಾಯಿಗೆ ಟೇಪ್‌ ಅಂಟಿಸಿ ಕ್ರೌರ್ಯ ಮೆರೆದಿದ್ದಾರೆ.

ಪೊಲೀಸರಿಂದ ಬಂಧನ, ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲು

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಪ್ರಾಂಶುಪಾಲೆ ಇಲಾ ಎವನ್‌ ಕಾಲ್ವಿನ್‌ ಅವರನ್ನು ಬಂಧಿಸಲಾಗಿದೆ. ಬಾಲಕಿಯ ಮೇಲೆ ಹಲ್ಲೆ, ಧಾರ್ಮಿಕ ಭಾವನೆಗಳಿಗೆ ಅಡ್ಡಿ, ಮಗುವಿನ ಮೇಲೆ ಕ್ರೌರ್ಯ ಹಾಗೂ ಇತರ ಅಪರಾಧಗಳ ಕಾರಣಕ್ಕಾಗಿ ಅವರನ್ನು ಭಾರತೀಯ ನ್ಯಾಯ ಸಂಹಿತೆಯ (ಬಿ.ಎನ್‌.ಎಸ್.) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡ್ರ‍್ಯಾಗನ್ ಫ್ರೂಟ್: ಆರೋಗ್ಯ ಪ್ರಯೋಜನಗಳು ಮತ್ತು ಅದನ್ನು ಬಳಸುವ ವಿಧಾನ

ಪಿಟಾಯ ಅಥವಾ ಪಿಟಾಹಯಾ ಎಂದೂ ಕರೆಯಲ್ಪಡುವ ಡ್ರ‍್ಯಾಗನ್ ಫ್ರೂಟ್, ಅದರ ಆಕರ್ಷಕ ನೋಟ, ಸೌಮ್ಯವಾದ ಸಿಹಿ ರುಚಿ ಮತ್ತು ಸಮೃದ್ಧ ಪೌಷ್ಟಿಕಾಂಶಗಳಿಂದ ವಿಶ್ವದಾದ್ಯಂತ ಜನಪ್ರಿಯತೆಯನ್ನು ಗಳಿಸಿದೆ.

ಸಂಗೀತ ಕಲಾವಿದೆ ಮಹಿಮಾ ಬಜಗೋಳಿ ಅವರು “ಚಂದನ ಸಂಗೀತ ರತ್ನ ಪ್ರಶಸ್ತಿ” ಗೆ ಆಯ್ಕೆ

ವಿಶಿಷ್ಟ ಕಂಠದ ಸಂಗೀತಗಾರ್ತಿ, ಗಾಯಕಿ ಹಾಗೂ ನಿರೂಪಕಿಯಾದ ಮಹಿಮಾ ಬಜಗೋಳಿ ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಚಂದನ ಸಂಗೀತ ರತ್ನ ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ.

ಛತ್ತೀಸ್ಗಡದಲ್ಲಿ ಬಂಧಿಸಿರುವ ಸಿಸ್ಟರ್ ಗಳ ಬಿಡುಗಡೆಗೆ ಒತ್ತಾಯ, ಕ್ರೈಸ್ತ ಸಂಘಟನೆಯ ಸಮಯ ಸಾಧಕ ನಡೆ ಖಂಡನೀಯ : ರುಡಾಲ್ಪ್ ಡಿ’ಸೋಜ

ಇತ್ತೀಚಿಗೆ ಛತ್ತೀಸ್ಗಡದಲ್ಲಿ ನಡೆದ ಎರಡು ಸಿಸ್ಟರ್ ಗಳ ಬಂಧನಕ್ಕೆ ಸಂಬಂಧಿಸಿದಂತೆ ಸರಕಾರ ಕೂಡಲೇ ತನಿಖೆಯನ್ನು ತೀವ್ರಗೊಳಿಸಿ ಬಂಧಿತರಾಗಿರುವ ಸಿಸ್ಟರ್ ಗಳನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ'ಸೋಜ ಒತ್ತಾಯಿಸಿದ್ದಾರೆ.

ಧರ್ಮಸ್ಥಳ ಪ್ರಕರಣದ ವರದಿ ಪ್ರಸಾರಕ್ಕೆ ಹೈಕೋರ್ಟ್‌ ಗ್ರೀನ್ ಸಿಗ್ನಲ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದು!

ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತು ಹಾಕಿರುವ ಕುರಿತು ಅನಾಮಧೇಯ ಸಾಕ್ಷಿದಾರರು ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಮೇಲೆ ವಿಧಿಸಲಾಗಿದ್ದ ಸುದ್ದಿ ಪ್ರಸಾರ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಮಹತ್ವದ ತೀರ್ಪು ನೀಡಿದೆ.