spot_img

ರಾಷ್ಟ್ರಪತಿಯ ಅವಮಾನ: ಸೋನಿಯಾ ಗಾಂಧಿ ವಿರುದ್ಧ ಪ್ರಧಾನಿ ಮೋದಿ ಕಿಡಿ!

Date:

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂರ್ ಲೇಡಿ’ ಎಂದು ಕರೆಯುವ ಮೂಲಕ ಅವಮಾನಿಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಾಷ್ಟ್ರಪತಿಯನ್ನೇ ಅವಮಾನಿಸಲು ಎಷ್ಟು ಧೈರ್ಯ ನಿಮಗೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಸಂಸತ್ ಬಜೆಟ್ ಅಧಿವೇಶನ ಪ್ರಾರಂಭಗೊಂಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದರು. ಅವರ ಭಾಷಣ ಮುಗಿದ ನಂತರ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, “ಪೂರ್ ಲೇಡಿ, ಭಾಷಣ ಮುಗಿಸುವ ಹೊತ್ತಿಗೆ ಅವರು ತುಂಬಾ ಸುಸ್ತಾಗಿದ್ದರು” ಎಂದು ವ್ಯಂಗ್ಯವಾಡಿದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, “ದೇಶದ ಮೊದಲ ಆದಿವಾಸಿ ಮಹಿಳಾ ರಾಷ್ಟ್ರಪತಿಯನ್ನು ಕಾಂಗ್ರೆಸ್ ಲೇವಡಿ ಮಾಡುತ್ತಿದೆ. ಶ್ರೀಮಂತ ಕುಟುಂಬ ರಾಜಕಾರಣ ಮಾಡುತ್ತಿದ್ದು, ಬಡವರು ಹಾಗೂ ಬುಡಕಟ್ಟು ಸಮುದಾಯದಿಂದ ಬಂದವರನ್ನು ಕೆಳಗೆ ತಳ್ಳಲು ಯತ್ನಿಸುತ್ತಿದೆ” ಎಂದು ಆರೋಪಿಸಿದರು.

ಕಾಂಗ್ರೆಸ್ ನವರು ಸಂಸದೀಯ ಶಿಷ್ಟಾಚಾರ ಮರೆತು, ನಗರ ನಕ್ಸಲ್ ಮನೋಭಾವದ ಭಾಷೆ ಬಳಸುತ್ತಿದ್ದಾರೆ ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಪತಿಯ ಸ್ಥಾನಕ್ಕೆ ಗೌರವವಿಲ್ಲದೆ, ಅವಮಾನಿಸುವ ಮೂಲಕ ಅವರು ಭಾರತ ದೇಶದ ಪರಂಪರೆ ಹಾಗೂ ಸಂವಿಧಾನವನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ನಾರಾಯಣ ಗುರು ಜಯಂತಿ

ಜ್ಞಾನ ಮತ್ತು ಸಮಾನತೆಯ ಪುನರುತ್ಥಾನಕ್ಕೆ ಪ್ರೇರಣೆಯ ದಿನಪ್ರತಿ ವರ್ಷ ಸೆಪ್ಟೆಂಬರ್ 7, ಭಾರತದ ಕರಾವಳಿ ತೀರದ ಜನತೆಗೆ ಒಂದು ಪವಿತ್ರ ಮತ್ತು ಮಹತ್ವದ ದಿನ

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಂಗ ಬಂಧನಕ್ಕೆ, ಶಿವಮೊಗ್ಗ ಜೈಲಿಗೆ ರವಾನೆ

'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಐಸಿಸಿ ಮತ್ತು Google Pay ಜಂಟಿ ಪ್ರಯತ್ನ: ಮಹಿಳಾ ವಿಶ್ವಕಪ್ ಟಿಕೆಟ್ ಮಾರಾಟಕ್ಕೆ ಹೊಸ ಡಿಜಿಟಲ್ ಸ್ಪರ್ಶ

ವಿಶೇಷ ಟಿಕೆಟ್‌ಗಳು ಗೂಗಲ್ ಪೇ ಮೂಲಕ ಸೆಪ್ಟೆಂಬರ್ 8ರವರೆಗೆ ಲಭ್ಯವಿರಲಿದ್ದು, ಸೆಪ್ಟೆಂಬರ್ 9 ರಿಂದ ಎಂದಿನಂತೆ ಟಿಕೆಟ್ ಮಾರಾಟ ಪ್ರಾರಂಭವಾಗಲಿದೆ ಎಂದು ICC ತಿಳಿಸಿದೆ.

ಸೈನಸ್ ಸಮಸ್ಯೆ: ಕರಿಮೆಣಸಿನ ಆವಿಯಿಂದ ಪರಿಹಾರ ಸಾಧ್ಯವೇ?

ಮೂಗು ಕಟ್ಟಿಕೊಂಡಾಗ ಅಥವಾ ಸೈನಸ್‌ಗಳಿಂದ ತಲೆನೋವು ಬಂದಾಗ ಬಿಸಿ ನೀರಿನ ಆವಿಗೆ ಕರಿಮೆಣಸು ಸೇರಿಸಿ ಉಸಿರಾಡುವುದು ಒಂದು ಜನಪ್ರಿಯ ವಿಧಾನ.