ರಾಷ್ಟ್ರಪತಿಯ ಅವಮಾನ: ಸೋನಿಯಾ ಗಾಂಧಿ ವಿರುದ್ಧ ಪ್ರಧಾನಿ ಮೋದಿ ಕಿಡಿ!

Date:

spot_img

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ಪೂರ್ ಲೇಡಿ’ ಎಂದು ಕರೆಯುವ ಮೂಲಕ ಅವಮಾನಿಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಾಷ್ಟ್ರಪತಿಯನ್ನೇ ಅವಮಾನಿಸಲು ಎಷ್ಟು ಧೈರ್ಯ ನಿಮಗೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಸಂಸತ್ ಬಜೆಟ್ ಅಧಿವೇಶನ ಪ್ರಾರಂಭಗೊಂಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿದರು. ಅವರ ಭಾಷಣ ಮುಗಿದ ನಂತರ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, “ಪೂರ್ ಲೇಡಿ, ಭಾಷಣ ಮುಗಿಸುವ ಹೊತ್ತಿಗೆ ಅವರು ತುಂಬಾ ಸುಸ್ತಾಗಿದ್ದರು” ಎಂದು ವ್ಯಂಗ್ಯವಾಡಿದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, “ದೇಶದ ಮೊದಲ ಆದಿವಾಸಿ ಮಹಿಳಾ ರಾಷ್ಟ್ರಪತಿಯನ್ನು ಕಾಂಗ್ರೆಸ್ ಲೇವಡಿ ಮಾಡುತ್ತಿದೆ. ಶ್ರೀಮಂತ ಕುಟುಂಬ ರಾಜಕಾರಣ ಮಾಡುತ್ತಿದ್ದು, ಬಡವರು ಹಾಗೂ ಬುಡಕಟ್ಟು ಸಮುದಾಯದಿಂದ ಬಂದವರನ್ನು ಕೆಳಗೆ ತಳ್ಳಲು ಯತ್ನಿಸುತ್ತಿದೆ” ಎಂದು ಆರೋಪಿಸಿದರು.

ಕಾಂಗ್ರೆಸ್ ನವರು ಸಂಸದೀಯ ಶಿಷ್ಟಾಚಾರ ಮರೆತು, ನಗರ ನಕ್ಸಲ್ ಮನೋಭಾವದ ಭಾಷೆ ಬಳಸುತ್ತಿದ್ದಾರೆ ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಪತಿಯ ಸ್ಥಾನಕ್ಕೆ ಗೌರವವಿಲ್ಲದೆ, ಅವಮಾನಿಸುವ ಮೂಲಕ ಅವರು ಭಾರತ ದೇಶದ ಪರಂಪರೆ ಹಾಗೂ ಸಂವಿಧಾನವನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.