
ಬೆಂಗಳೂರು: ವಿಧಾನಸಭೆಯಲ್ಲಿ ನಡೆದ ಗದ್ದಲದ ಬೆನ್ನಲ್ಲೇ ಸ್ಪೀಕರ್ ಯು.ಟಿ. ಖಾದರ್ 18 ಬಿಜೆಪಿ ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ್ದಾರೆ.
ಹನಿಟ್ರಾಪ್ ಪ್ರಕರಣದ ಕುರಿತು ನಡೆದ ಚರ್ಚೆಯ ವೇಳೆ, ಬಿಜೆಪಿಯ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದು, ಸ್ಪೀಕರ್ ಪೀಠಕ್ಕೆ ಪೇಪರ್ಗಳನ್ನೆಸೆದಿದ್ದಾರೆ. ಸ್ಪೀಕರ್ಗೆ ಅವಮಾನ ತೋರಿದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡಲಾಗಿದೆ.
ಅಮಾನತುಗೊಂಡ ಶಾಸಕರ ಪಟ್ಟಿಯಲ್ಲಿ ದೊಡ್ಡನಗೌಡ ಪಾಟೀಲ್, ಅಶ್ವಥ್ ನಾರಾಯಣ್, ಭರತ್ ಶೆಟ್ಟಿ, ಶರಣು ಸಲಗರ್, ಬಿ. ಸುರೇಶ್ ಗೌಡ, ಮುನಿರತ್ನ, ಚನ್ನಬಸಪ್ಪ, ಉಮಾನಾಥ್ ಕೋಟ್ಯಾನ್, ಬಿ.ಪಿ. ಹರೀಶ್, ಧೀರಜ್ ಮುನಿರಾಜು, ಶೈಲೆಂದ್ರ ಬೆಲ್ದಾಳೆ, ಬಸವರಾಜ್ ಮತ್ತಿಮೂಡ್, ಯಶ್ ಪಾಲ್ ಸುವರ್ಣ, ಚಂದ್ರು ಲಮಾಣಿ, ಭೈರತಿ ಬಸವರಾಜ್ ಸೇರಿದ್ದಾರೆ.
ಶಾಸಕರ ಅಮಾನತಿನ ನಂತರ, ಕಲಾಪವನ್ನು ಕೆಲಕಾಲ ಮುಂದೂಡಲಾಗಿದ್ದು, ನಂತರ ಸ್ಪೀಕರ್ ಆದೇಶದಂತೆ ಮಾರ್ಷಲ್ಸ್ ಮೂಲಕ ಅವರನ್ನು ಹೊರಹಾಕಲಾಯಿತು.