ಅಂತರಜಾತಿ ಹಾಗೂ ಸಾಮೂಹಿಕ ವಿವಾಹಗಳಿಂದ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ: ಸಿಎಂ ಸಿದ್ದರಾಮಯ್ಯ

Date:

spot_img

ದಾವಣಗೆರೆ : ಜಾತಿ ಭೇದ, ಲಿಂಗ ತಾರತಮ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಅಂತರ್ಜಾತಿ ಹಾಗೂ ಸಾಮೂಹಿಕ ವಿವಾಹಗಳು ಪ್ರಮುಖವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ 95ನೇ ಜನ್ಮದಿನದ ಅಂಗವಾಗಿ ದಾವಣಗೆರೆದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದ ಅವರು, “ಬಸವಣ್ಣನವರೂ ಸೇರಿದಂತೆ ಶರಣ ಪರಂಪರೆ ಜಾತ್ಯತೀತ ಸಮಾಜದ ಕನಸು ಕಂಡಿತ್ತು. ಅದನ್ನು ಸಾಕಾರಗೊಳಿಸಲು ಸರ್ಕಾರ ಪ್ರತಿಬದ್ಧವಾಗಿದೆ” ಎಂದರು.

“ನಮ್ಮ ಸರ್ಕಾರ ಮಹಿಳೆಯರನ್ನು ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲಗೊಳಿಸುವ ನಿಟ್ಟಿನಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಅಂತರ್ಜಾತಿ ವಿವಾಹಗಳು ಹೆಚ್ಚಾದರೆ ಸಮಾಜದಲ್ಲಿ ಜಾತಿ ತಾರತಮ್ಯ ,ಲಿಂಗ ತಾರತಮ್ಯ ನಿವಾರಣೆಯಾಗುತ್ತದೆ” ಎಂದು ತಿಳಿಸಿದರು.

ಇದೇ ವೇದಿಕೆಯಲ್ಲಿ ಶಾಮನೂರು ಶಿವಶಂಕರಪ್ಪರ ಕುರಿತು ಮಾತನಾಡಿದ ಸಿಎಂ, “ಅವರ ಆರೋಗ್ಯ ಉತ್ತಮವಾಗಿದೆ. ಇಂತಹ ಶಕ್ತಿಯುತ ನಾಯಕರು ಇನ್ನೊಂದು ಚುನಾವಣೆಗೆ ಸಹ ಸ್ಪರ್ಧಿಸಬಹುದಾದಷ್ಟು ಚೈತನ್ಯದಿಂದಿದ್ದಾರೆ. ಅವರು ಆಸಕ್ತಿ ತೋರಿಸಿದರೆ ಕಾಂಗ್ರೆಸ್ ಮತ್ತೆ ಟಿಕೆಟ್ ನೀಡಲು ಸಿದ್ಧ” ಎಂದು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.