spot_img

ಇರಾನ್‌ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕಾದ ದಾಳಿ: ಸೋರಿಕೆ ಇಲ್ಲವೆಂದು ದೃಢೀಕರಣ

Date:

spot_img

ಇರಾನ್‌ನ ಮೂರು ಪರಮಾಣು ಸಂಶೋಧನಾ ಕೇಂದ್ರಗಳನ್ನು ಗುರಿಯಾಗಿರಿಸಿಕೊಂಡು ಅಮೆರಿಕ ನಡೆಸಿದ ವಾಯುದಾಳಿಯಿಂದ ಯಾವುದೇ ಪರಮಾಣು ವಿಕಿರಣ ಸೋರಿಕೆ ಆಗಿಲ್ಲ ಎಂದು ಇರಾನ್ ಸರ್ಕಾರ ಸ್ಪಷ್ಟಪಡಿಸಿದೆ. ದಾಳಿಗೆ ಮುಂಚೆಯೇ ಈ ಸೌಲಭ್ಯಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಕಾನೂನು ಉಲ್ಲಂಘನೆ ಎಂದು ಇರಾನ್ ಆರೋಪ
ಈ ಕ್ರಮವನ್ನು ಕಟುವಾಗಿ ಖಂಡಿಸಿದ ಇರಾನ್, ಅಮೆರಿಕದ ಈ ಕಾರ್ಯವಿಧಾನವು ವಿಶ್ವ ಶಾಂತಿಗೆ ಬೆದರಿಕೆ ಹಾಕುವುದರ ಜೊತೆಗೆ ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ದೂರಿದೆ. “ಅಮೆರಿಕಾ ತನ್ನ ದಾಳಿಯನ್ನು ಪ್ರಾರಂಭಿಸಿದೆ, ಆದರೆ ಅದನ್ನು ನಾವೇ ಅಂತ್ಯಗೊಳಿಸುತ್ತೇವೆ” ಎಂದು ಇರಾನ್ ಸರ್ಕಾರ ಹೇಳಿದೆ.

ವಿದೇಶಾಂಗ ಸಚಿವರ ತೀವ್ರ ಪ್ರತಿಕ್ರಿಯೆ
ಇರಾನ್‌ನ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್, ತಮ್ಮ ದೇಶದ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ನಡೆಸಿದ ವಾಯು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಏಕಪಕ್ಷೀಯ ಕ್ರಮಗಳು ಪ್ರಪಂಚದ ಸ್ಥಿರತೆಗೆ ಹಾನಿಕಾರಕವೆಂದು ಅವರು ಟೀಕಿಸಿದ್ದಾರೆ.

ಇರಾನ್ ತನ್ನ ಪರಮಾಣು ಕಾರ್ಯಕ್ರಮಗಳು ಶಾಂತಿಯುತ ಉದ್ದೇಶಗಳಿಗಾಗಿ ಮಾತ್ರ ಎಂದು ಪುನರಾವರ್ತಿಸಿದೆ ಮತ್ತು ಯಾವುದೇ ಸೋರಿಕೆಯ ಸಂಭವವಿಲ್ಲ ಎಂದು ಖಚಿತಪಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಲಕ್ಷಾಂತರ ರೂ. ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ.

ಕಲಾಪದ ವೇಳೆ ಮೊಬೈಲ್‌ನಲ್ಲಿ ‘ರಮ್ಮಿ’ ಆಟದಲ್ಲಿ ಮುಳುಗಿದ ಕೃಷಿ ಸಚಿವ

ಮಹಾರಾಷ್ಟ್ರ ವಿಧಾನಸಭೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಓರ್ವ ಸಚಿವರು ತಮ್ಮ ಮೊಬೈಲ್ ಫೋನ್‌ನಲ್ಲಿ 'ರಮ್ಮಿ' ಗೇಮ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಆಧಾರ್ ಕಾರ್ಡ್‌ಗೆ ಅವಧಿ ಇದೆಯೇ? ನಿಮ್ಮ ಆಧಾರ್ ಸಿಂಧುತ್ವವನ್ನು ಪರಿಶೀಲಿಸುವುದು ಹೇಗೆ?

ಸಾಮಾನ್ಯವಾಗಿ ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್‌ನಂತಹ ಗುರುತಿನ ಚೀಟಿಗಳಿಗೆ ನಿರ್ದಿಷ್ಟ ಅವಧಿ ಇರುತ್ತದೆ. ಆದರೆ, ಬಹುತೇಕರಿಗೆ ಆಧಾರ್ ಕಾರ್ಡ್‌ಗೆ ಎಕ್ಸ್‌ಪೈರಿ ದಿನಾಂಕದ ಬಗ್ಗೆ ಗೊಂದಲವಿದೆ.

ಉಪರಾಷ್ಟ್ರಪತಿ ಧಂಖರ್: ಭಾರತದ ಸಾರ್ವಭೌಮತೆಗೆ ಸವಾಲಿಲ್ಲ, ವಿದೇಶಿ ಹಸ್ತಕ್ಷೇಪ ಅಸಾಧ್ಯ

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳ ಕುರಿತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳ ಹಿನ್ನೆಲೆಯಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೇಶದ ಸಾರ್ವಭೌಮತ್ವ ಮತ್ತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ