spot_img

ಭಾರತಕ್ಕೆ ಮರಳಿ ಬರುತ್ತಿದೆಯೇ ಟಿಕ್‌ಟಾಕ್‌?

Date:

spot_img

ಬೆಂಗಳೂರು : ಐದು ವರ್ಷಗಳ ಹಿಂದೆ ಭಾರತದಲ್ಲಿ ನಿಷೇಧಗೊಂಡಿದ್ದ ಜನಪ್ರಿಯ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಟಿಕ್‌ಟಾಕ್ (TikTok) ಮತ್ತೆ ದೇಶಕ್ಕೆ ಮರಳಲಿದೆಯೇ ಎಂಬ ಪ್ರಶ್ನೆ ಈಗ ಇಂಟರ್‌ನೆಟ್‌ ಲೋಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕೆಲವು ಬಳಕೆದಾರರಿಗೆ ಈ ಅಪ್ಲಿಕೇಶನ್‌ನ ವೆಬ್‌ಸೈಟ್ ಈಗ ತೆರೆದುಕೊಳ್ಳುತ್ತಿರುವುದು ಈ ವದಂತಿಗೆ ಮುಖ್ಯ ಕಾರಣವಾಗಿದೆ.

ಇದು ಅಧಿಕೃತ ರೀ-ಎಂಟ್ರಿಯಲ್ಲ!

2020ರ ಜೂನ್ 29ರಂದು ರಾಷ್ಟ್ರೀಯ ಭದ್ರತೆ ಮತ್ತು ಡೇಟಾ ಗೌಪ್ಯತೆಯ ಕಳವಳಗಳ ಕಾರಣದಿಂದಾಗಿ (ಮಾಹಿತಿ ತಂತ್ರಜ್ಞಾನ ಕಾಯ್ದೆ 2000, ಸೆಕ್ಷನ್ 69ಎ ಅಡಿಯಲ್ಲಿ) ಟಿಕ್‌ಟಾಕ್ ಅನ್ನು ಬ್ಯಾನ್ ಮಾಡಲಾಗಿತ್ತು. ಪ್ರಸ್ತುತ, ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಅಥವಾ ಆಪ್ ಸ್ಟೋರ್‌ಗಳಲ್ಲಿ ಲಭ್ಯವಿಲ್ಲ. ಕೇವಲ ವೆಬ್‌ಸೈಟ್ ಮಾತ್ರ ಕೆಲವು ಬಳಕೆದಾರರಿಗೆ ಪ್ರವೇಶ ನೀಡುತ್ತಿರುವುದರಿಂದ ಈ ಕುತೂಹಲ ಹುಟ್ಟಿಕೊಂಡಿದೆ. ಆದರೆ, ಈ ಬಗ್ಗೆ ಚೀನಾದ ಬೈಟ್‌ಡ್ಯಾನ್ಸ್ ಕಂಪನಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹಾಗಾಗಿ, ಸದ್ಯಕ್ಕೆ ಈ ಅಪ್ಲಿಕೇಶನ್ ಭಾರತಕ್ಕೆ ಹಿಂತಿರುಗುವ ಸಾಧ್ಯತೆಗಳು ಕಡಿಮೆ ಎಂದು ಹೇಳಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಎಲ್ಲ ಆರೋಪಗಳಿಂದ ತೊಳೆದಂತಾಗಿದೆʼ: ಮಾಸ್ಕ್​ಮ್ಯಾನ್​ ಬಂಧನಕ್ಕೆ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದಾಗಿ ಸುಳ್ಳು ಹೇಳಿಕೆ ನೀಡಿದ್ದ ಚಿನ್ನಯ್ಯ ಅಲಿಯಾಸ್ ಮಾಸ್ಕ್​ಮ್ಯಾನ್​ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯಿಸಿದ್ದಾರೆ.

ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ “ಅಷ್ಟಮಿದ ಕೆಸರ್ದ ಓಕುಳಿ ” ಕಾರ್ಯಕ್ರಮ

' ಕಾರ್ಕಳ ಟೈಗರ್ಸ್ ' ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ, ಎಸ್ ಆರ್ ಎಜುಕಷನ್ ಟ್ರಸ್ಟ್ (ರಿ ) ಹೆಬ್ರಿ ಮತ್ತು ಜಿ. ಎಸ್. ಬಿ ಯುವಜನ ಸಭಾ ಹೆಬ್ರಿ ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ "ಅಷ್ಟಮಿದ ಕೆಸರ್ದ ಓಕುಳಿ " ಎಂಬ ವಿಭಿನ್ನ ಕಾರ್ಯಕ್ರಮವನ್ನು ಆಗಸ್ಟ್ 24 ರಂದು ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದೆ .

ಧರ್ಮಸ್ಥಳ ವಿವಾದ: ಎರಡು ಹಿಂದುತ್ವ ಶಕ್ತಿಗಳ ನಡುವಿನ ಹೋರಾಟ ಎಂದು ಬಿ.ಕೆ. ಹರಿಪ್ರಸಾದ್ ಬಣ್ಣನೆ

ಧರ್ಮಸ್ಥಳ ಪ್ರಕರಣದ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಮಹತ್ವದ ಹೇಳಿಕೆ

ವೈದ್ಯರು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಚಿಕಿತ್ಸೆ ವಿಳಂಬ: ಅಮಾಯಕ ನವಜಾತ ಶಿಶುವಿನ ಸಾವು

ಹೆರಿಗೆ ಸಮಯದಲ್ಲಿ ವೈದ್ಯರು ಹಣಕ್ಕೆ ಬೇಡಿಕೆಯಿಟ್ಟು ಚಿಕಿತ್ಸೆಯಲ್ಲಿ ವಿಳಂಬ ಮಾಡಿದ್ದರಿಂದ, ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ, ತಂದೆಯೊಬ್ಬರು ಮಗುವಿನ ಮೃತದೇಹವನ್ನು ಚೀಲದಲ್ಲಿ ಇರಿಸಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ