ಕೊಚ್ಚಿಯಲ್ಲಿ ಐಟಿ ಉದ್ಯೋಗಿ ಅಪಹರಣ: ನಟಿ ಲಕ್ಷ್ಮಿ ಮೆನನ್ ಸೇರಿ ಇತರರ ವಿರುದ್ಧ ಎಫ್‌ಐಆರ್

Date:

spot_img

ಕೊಚ್ಚಿ : ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಖ್ಯಾತ ನಟಿ ಲಕ್ಷ್ಮಿ ಮೆನನ್ ಸೇರಿದಂತೆ ಇತರರ ವಿರುದ್ಧ ಕೊಚ್ಚಿ ಪೊಲೀಸರು ದೂರು ದಾಖಲಿಸಿದ್ದಾರೆ. ಬಾರ್‌ನಲ್ಲಿ ನಡೆದ ಜಗಳದ ಪ್ರತೀಕಾರವಾಗಿ ಐಟಿ ಉದ್ಯೋಗಿಯೊಬ್ಬರನ್ನು ಅಪಹರಿಸಿ, ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಘಟನೆ ವಿವರ: ಆಗಸ್ಟ್ 24ರ ರಾತ್ರಿ ಕೊಚ್ಚಿಯ ಬಾರ್ ಒಂದರಲ್ಲಿ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿದೆ. ಈ ಜಗಳ ರಸ್ತೆಯಲ್ಲಿಯೂ ಮುಂದುವರೆದಿದ್ದು, ಈ ವೇಳೆ ನಟಿ ಲಕ್ಷ್ಮಿ ಮೆನನ್ ಮತ್ತು ಅವರ ಸ್ನೇಹಿತರಾದ ಮಿಥುನ್, ಅನೀಶ್ ಹಾಗೂ ಸೋನಮೋಲ್ ಎಂಬುವವರು ಆಲುವಾ ನಿವಾಸಿ ಅಲಿಯಾರ್ ಷಾ ಸಲೀಮ್ ಎಂಬುವವರನ್ನು ಬಲವಂತವಾಗಿ ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಆತನನ್ನು ಬೆದರಿಸಿ ಆಲುವಾ-ಪರವೂರ್ ಜಂಕ್ಷನ್‌ನಲ್ಲಿ ಬಿಟ್ಟಿದ್ದಾರೆ.

ಪೊಲೀಸ್ ತನಿಖೆ: ಹಲ್ಲೆಗೊಳಗಾದ ಅಲಿಯಾರ್ ಷಾ ಸಲೀಮ್ ಎಫ್‌ಐಆರ್ ದಾಖಲಿಸಿದ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯ ವಿಡಿಯೋ ಸಾಕ್ಷ್ಯದಲ್ಲಿ ನಟಿಯ ಉಪಸ್ಥಿತಿ ತಿಳಿದುಬಂದಿದೆ. ಪೊಲೀಸರು ಮಿಥುನ್, ಅನೀಶ್ ಮತ್ತು ಸೋನಮೋಲ್ ಅವರನ್ನು ಬಂಧಿಸಿದ್ದು, ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟಿ ಲಕ್ಷ್ಮಿ ಮೆನನ್ ತಲೆಮರೆಸಿಕೊಂಡಿದ್ದಾರೆ. ನಟಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತೆ ಸೋನಮೋಲ್ ಕೂಡ ಹಲ್ಲೆಗೆ ಒಳಗಾದ ವ್ಯಕ್ತಿಯ ಗುಂಪಿನ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಲಕ್ಷ್ಮಿ ಮೆನನ್ ಅವರು ಮಲಯಾಳಂ ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು, ʻಕುಮ್ಕಿʼ, ʻಜಿಗರ್ತಾಂಡʼ, ʻವೇದಾಲಂʼ ಮತ್ತು ʻಚಂದ್ರಮುಖಿ 2ʼ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ