ಜಗನ್ನಾಥ ದೇವರ ಟ್ಯಾಟೂ ವಿವಾದ: ವಿದೇಶಿ ಮಹಿಳೆ ವಿರುದ್ಧ ಕಾನೂನು ಕ್ರಮ

Date:

spot_img

ಭುವನೇಶ್ವರ: ಜಗನ್ನಾಥ ದೇವರ ಟ್ಯಾಟೂ ವಿವಾದ ಒಡಿಶಾದಲ್ಲಿ ಸಂಚಲನ ಮೂಡಿಸಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ವಿದೇಶಿ ಮಹಿಳೆಯೊಬ್ಬರು ತಮ್ಮ ತೊಡೆಯ ಮೇಲೆ ಶ್ರೀ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡಿದ್ದು, ಇದರಿಂದ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಲುಪಿದೆಯೆಂಬ ಆರೋಪ ಕೇಳಿ ಬಂದಿದೆ.

ಈ ಕುರಿತು ಭುವನೇಶ್ವರದ ಸಹಿದ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 299 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸೆಕ್ಷನ್ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡುವ ಕೃತ್ಯಗಳಿಗೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡುತ್ತದೆ.

ಭಕ್ತರ ಆಕ್ರೋಶ: ಭಕ್ತರ ಪರವಾಗಿ ದೂರು ದಾಖಲಿಸಿದ ಸುಬ್ರತ್ ಮೋಹಾನಿ, “ಶ್ರೀ ಜಗನ್ನಾಥನ ಟ್ಯಾಟೂವನ್ನು ಅಸಭ್ಯ ಸ್ಥಳದಲ್ಲಿ ಹಾಕಿಸಿಕೊಂಡಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ಮಾಡಿದ ಅಪಮಾನ. ಈ ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಮಹಿಳೆಯ ಕ್ಷಮಾಪಣೆ: ವಿವಾದ ತೀವ್ರಗೊಂಡ ನಂತರ, ವಿದೇಶಿ ಮಹಿಳೆ ಹಾಗೂ ಟ್ಯಾಟೂ ಪಾರ್ಲರ್ ಮಾಲೀಕರು ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ. ಮಹಿಳೆ, “ನಾನು ಜಗನ್ನಾಥನ ಭಕ್ತೆ. ಪ್ರತಿದಿನ ದೇವಾಲಯಕ್ಕೆ ಹೋಗುತ್ತೇನೆ. ನಾನು ಯಾರನ್ನೂ ಅಪಮಾನಿಸಲು ಉದ್ದೇಶಿಸಿಲ್ಲ. ಇದರಿಂದ ಇಷ್ಟರ ಮಟ್ಟಿಗೆ ವಿವಾದ ಉಂಟಾಗುತ್ತದೆ ಎಂಬುದನ್ನು ಊಹಿಸಿರಲಿಲ್ಲ. ಶೀಘ್ರದಲ್ಲೇ ಈ ಟ್ಯಾಟೂ ತೆಗೆಸಿಕೊಳ್ಳುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಘಟನೆ ಜಗನ್ನಾಥ ದೇವರ ಭಕ್ತರಲ್ಲಿ ಭಾರೀ ಅಸಮಾಧಾನ ಮೂಡಿಸಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.