spot_img

ಜೈಪುರದಲ್ಲಿ 2,000 ಕೋಟಿ ರೂ. ಸೈಬರ್ ವಂಚನೆ: ಕಿಂಗ್ ಪಿನ್ ಬಂಧನ

Date:

spot_img
spot_img

ರಾಜಸ್ಥಾನ ಪೊಲೀಸರು ಮಂಗಳವಾರ 2,000 ಕೋಟಿಗೂ ಹೆಚ್ಚು ಮೊತ್ತದ ಸೈಬರ್ ವಂಚನೆ ನಡೆಸಿದ ತಂಡದ ಕಿಂಗ್‌ಪಿನ್‌ನನ್ನು ಶ್ರೀಗಂಗಾನಗರದಲ್ಲಿ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಅಜಯ್ ಆರ್ಯ ಅವರ ವಿರುದ್ಧ ದೇಶಾದ್ಯಂತ ಹಲವಾರು ಸೈಬರ್ ವಂಚನೆಯ ದೂರುಗಳು ದಾಖಲಾಗಿವೆ, ವಿಶೇಷವಾಗಿ ಕರ್ನಾಟಕದಲ್ಲಿ ಹೆಚ್ಚು ಸಂಖ್ಯೆಯಲ್ಲಿ ದೂರು ದಾಖಲಾಗಿದೆ.

ಗಂಗಾನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಯಾದವ್ ರವರು ಮಾತನಾಡಿ ಬಂಧಿತ ಆರೋಪಿಗಳು ಸಾವಿರಾರು ಜನರಿಗೆ ಸುಮಾರು 2,000 ಕೋಟಿ ರೂಪಾಯಿಗಳ ಸೈಬರ್ ವಂಚನೆ ಮಾಡಿದ್ದಾರೆ.ಕರ್ನಾಟಕದ ನಿವಾಸಿ ಕಾಂತಪ್ಪ ಬಾಬು ಚವ್ಹಾಣ್ ಅವರು ಮಂಗಳವಾರ ಪುರಾಣಿ ಅಬಾದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದರು.

ಪೊಲೀಸರು ಆರ್ಯನ ಮನೆ ಮೇಲೆ ದಾಳಿ ನಡೆಸಿದ್ದು, ಶೋಧದ ವೇಳೆ 10 ಲಕ್ಷ ರೂ. ನಗದು, ಮೂರು ಸಿಪಿಯುಗಳು, ಆರು ಮೊಬೈಲ್ ಫೋನ್‌ಗಳು, ಎಂಟು ಎಟಿಎಂ ಕಾರ್ಡ್‌ಗಳು ಮತ್ತು ಐಷಾರಾಮಿ ಕಾರು ಸೇರಿದಂತೆ ಹಲವಾರು ದಾಖಲೆಗಳನ್ನು ಪತ್ತೆ ಮಾಡಿದರು. ಈ ಪ್ರಕರಣದಲ್ಲಿ ಅಜಯ್ ಆರ್ಯ, ದೀಪಕ್ ಆರ್ಯ, ಲಜಪತ್ ಆರ್ಯ, ಸೌರಭ್ ಚಾವ್ಹಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಆರೋಪಿಗಳು 2022 ರಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಟೆಕ್ಟಲ್ ಟೆಕ್ ಎಂಬ ಕಂಪನಿಯನ್ನು ತೆರೆಯುವ ಮೂಲಕ ಜನರಿಗೆ ಸೈಬರ್ ತರಬೇತಿ ನೀಡಲು ಪ್ರಾರಂಭಿಸಿದ್ದರು ಎಂದು ತಿಳಿದು ಬಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ

ಅತ್ಯುತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಪೆರ್ವಾಜೆ ಸರ್ಕಾರಿ ಪ್ರೌಢಶಾಲೆಗೆ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ SDMC ಪ್ರಶಸ್ತಿ ಲಭಿಸಿತು.

ದೀಪಾವಳಿ ಪ್ರಯುಕ್ತ: ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಿಂದ ಕೊಂಡಾಡಿ ಭಜನೆಕಟ್ಟೆಯಲ್ಲಿ ಗೂಡುದೀಪ ಸ್ಪರ್ಧೆ

ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ, ಹಿರಿಯಡಕ ಇವರ ವತಿಯಿಂದ ಗೂಡುದೀಪ ಸ್ಪರ್ಧೆಯು ನಡೆಯಲಿದೆ.

ನೋಡೋಕಷ್ಟೆ ಮುಳ್ಳು; ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಪಾಪಸ್​ ಕಳ್ಳಿ!

ಪಾಪಸ್ ಕಳ್ಳಿ (Cereus Night Bloom Cactus) ನೋಡುವುದಕ್ಕೆ ಮುಳ್ಳುಗಳಿಂದ ಕೂಡಿದ್ದರೂ, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

ಬೆಂಗಳೂರಿನ ಶ್ರೀರಾಂಪುರದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಬರ್ಬರ ಹತ್ಯೆ

ರಾಜಧಾನಿಯ ಶ್ರೀರಾಂಪುರ ಪ್ರದೇಶದಲ್ಲಿ ಹಾಡಹಗಲೇ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.