spot_img

ಪದವಿನಲ್ಲಿ ಜನನಿ ಮಿತ್ರ ಮಂಡಳಿಯಿಂದ ವನಮಹೋತ್ಸವ ಕಾರ್ಯಕ್ರಮ

Date:

spot_img

ಪದವು : ಪದವು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಂಬಾಡಿಯಲ್ಲಿ ಜನನಿ ಮಿತ್ರ ಮಂಡಳಿ ವಾಂಟ್ರಾಯಿ (ರಿ.) ಪದವು ಇದರ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪರಿಸರ ಸಂರಕ್ಷಣೆ ಮತ್ತು ಹಸಿರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಈ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಶ್ರೀ ಹುಕ್ರಪ್ಪ ಗೌಡ ಹಾಗೂ ಗಸ್ತು ಅರಣ್ಯ ಪಾಲಕರಾದ ಶ್ರೀ ಸುರೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳಿಗೆ ಗಿಡಗಳ ಮಹತ್ವ ಮತ್ತು ಪರಿಸರದ ಪ್ರಾಮುಖ್ಯತೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಜನನಿ ಮಿತ್ರ ಮಂಡಳಿ ಅಧ್ಯಕ್ಷರಾದ ಶ್ರೀ ದಿವಾಕರ ಎಂ. ಬಂಗೇರ ಸಭೆಯ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಶ್ರೀ ಸದಾನಂದ ಯಾನೆ ಮೋಹನ್ ಕಾರ್ಯಕ್ರಮ ನಿರೂಪಣೆ ಮಾಡಿದರು ಮತ್ತು ಕಾರ್ಯದರ್ಶಿ ಶ್ರೀ ಪ್ರವೀಣ್ ಮೂಲ್ಯ ಧನ್ಯವಾದ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿ ಪರಿಸರ ಪ್ರೀತಿಯ ಬೀಜ ಬಿತ್ತುವಲ್ಲಿ ಪ್ರಮುಖ ಪಾತ್ರವಹಿಸಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

14 ವರ್ಷದಿಂದ ತಲೆಮರೆಸಿಕೊಂಡಿದ್ದ ಮಲ್ಪೆ ಕಳ್ಳತನ ಪ್ರಕರಣದ ಆರೋಪಿ ಪೋಲೀಸರ ಬಲೆಗೆ

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಣಿಪಾಲದಲ್ಲಿ ಗಾಂಜಾ ಮತ್ತು ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ಏಳು ಮಂದಿ ಬಂಧನ

ಮಣಿಪಾಲದಲ್ಲಿ ನಡೆಯುತ್ತಿದ್ದ ಗಾಂಜಾ ಹಾಗೂ ಎಲ್‌ಎಸ್‌ಡಿ ಡ್ರಗ್ಸ್ ಮಾರಾಟ ಮತ್ತು ಸೇವನೆ ಜಾಲವನ್ನು ಭೇದಿಸಿದ ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.

ಸೈoಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್ ಕಾರ್ಕಳ ಬ್ರಾಂಚ್ ವತಿಯಿಂದ ವಿಜೇತ ವಿಶೇಷ ಶಾಲಾ ಮಕ್ಕಳಿಗೆ ಅವಶ್ಯಕ ವಸ್ತುಗಳ ಹಸ್ತಾಂತರ

ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್‌ನ ಕಾರ್ಕಳ ಶಾಖೆಯ ವತಿಯಿಂದ, ವಿಜೇತ ವಿಶೇಷ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ಹಸ್ತಾಂತರಿಸಲಾಯಿತು.

2025ರ ಸ್ವರಸಾಮ್ರಾಟ್ ಅಭಿರಾಮ್ ಭರತವಂಶಿ ದೇಶಭಕ್ತಿಗೀತೆ ಗಾಯನ ಪರ್ಯಾಯ ಪಾರಿತೋಷಕ ಪ್ರದಾನ

ಭಾರತದ 78 ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಉಡುಪಿಯ ಗುಂಡಿಬೈಲಿನ ಶ್ರೀ ಅಭಿರಾಮ ಧಾಮ ಸಂಕೀರ್ತನ ಮಂದಿರದಲ್ಲಿ ಕಳೆದ ಬುಧವಾರ ಆಯೋಜನೆಗೊಂಡ ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಆಗಸ್ಟ್ 15ರಂದು ನಡೆಯಿತು.