spot_img

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Date:

spot_img

ದೇಶದ ಪ್ರತಿಷ್ಠಿತ ಆರ್ಕಿಟೆಕ್ಚರ್ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ.(ಬಿ. ಆರ್ಕ್ )2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್-99.4093359 ಪರ್ಸೆಂಟೈಲ್ ನೊಂದಿಗೆ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಎರಡರಲ್ಲೂ ರಾಷ್ಟ್ರಕ್ಕೆ ಕೆಟಗರಿ ವಿಭಾಗದಲ್ಲಿ ಆರನೇ ರ‍್ಯಾಂಕ್ ಗಳಿಸಿ ವಿಶಿಷ್ಟಸಾಧನೆಗೈದಿದ್ದಾರೆ.

ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್ (AIR 101), ಟಿ ಪ್ರದೀಪ್ (AIR 117),ಮೋನಿಕಾ ಕೆ ಎ(AIR 140), ಸುಧಾಂಶು ಪಾಲೇಕರ್ (AIR 268), ಪ್ರತಿಕ್ ಎನ್ ಶೆಟ್ಟಿ (AIR 362), ತ್ರಿಶ್ಲಾ ಗಾಂಧಿ (AIR 423), ರೋಹಿತ್ ಜಿ ಬಿ -(AIR 461), ಸಾಚಿ ಶಿವಕುಮಾರ್ -(AIR 484), ಚಿನ್ಮಯಿ ಆರ್-(AIR 519), ಮನೋಜ್ ಎಂ ಆರ್ -(AIR 846), ಚೇತನ್ ಗೌಡ -(AIR 867), ಆಕಾಶ್ ದೇವಾಡಿಗ -(AIR 980) ಕೆಟಗರಿ ವಿಭಾಗದಲ್ಲಿ ರ‍್ಯಾಂಕ್ ಗಳಿಸಿದ್ದಾರೆ. 500 ರ‍್ಯಾಂಕ್ ಒಳಗೆ 10 ಮಂದಿ, 1000 ರ‍್ಯಾಂಕ್ ಒಳಗೆ 14 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಪಡೆಯುವ ಮೂಲಕ ರಾಷ್ಟ್ರದ ಪ್ರತಿಷ್ಠಿತ ಸಂಸ್ಥೆಗಳಿಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ರಾಷ್ಟ್ರದ ಅತ್ಯುನ್ನತ ಸಂಸ್ಥೆಯಾದ ಐ.ಐ.ಟಿ. ಹಾಗೂ ಇನ್ನಿತರ ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ಬಿ. ಆರ್ಕ್ ಕೋರ್ಸಿಗೆ ಪ್ರವೇಶ ಪಡೆಯಲು ಈ ಪರೀಕ್ಷೆಗೆ ಕ್ರಿಯೇಟಿವ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುತ್ತಾ ಬಂದಿದ್ದು ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು ಹಾಗೂ ಜೆ.ಇ.ಇ. ಬಿ. ಆರ್ಕ್ ಪರೀಕ್ಷೆಯ ಸಂಯೋಜಕರಾದ ಸುಮಂತ್ ದಾಮ್ಲೆ, ರಕ್ಷಿತ್ ಬಿ.ಎಸ್, ಶರತ್ ರವರು ಅಭಿನಂದನೆ ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅತಿಯಾದ ಯೋಚನೆ ಅಪಾಯಕಾರಿ: ಮಾನಸಿಕ ಆರೋಗ್ಯ ಕಾಪಾಡಲು ತಜ್ಞರ ಸಲಹೆಗಳು!

ಅತಿಯಾಗಿ ಯೋಚಿಸುವುದು ಮೇಲ್ನೋಟಕ್ಕೆ ಹಾನಿಕರವಲ್ಲ ಎನಿಸಿದರೂ, ಅದು ನಿಧಾನವಾಗಿ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.

ತಮಿಳುನಾಡು ವಿಧಾನಸಭಾ ಚುನಾವಣೆ: ಅಣ್ಣಾಮಲೈ ಸ್ಪರ್ಧೆ ಅನುಮಾನ, ರಾಷ್ಟ್ರಮಟ್ಟದ ಜವಾಬ್ದಾರಿಗೆ ಸಿದ್ಧತೆ?

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎಂದು ಬುಧವಾರ ಮೂಲಗಳು ತಿಳಿಸಿವೆ.

ಕೆಂಪುಕಲ್ಲು-ಮರಳು ಸಮಸ್ಯೆ: ಕರಾವಳಿ ಬಿಜೆಪಿ ನಿಯೋಗದಿಂದ ಸಿಎಂಗೆ ಮನವಿ ಸಲ್ಲಿಕೆ!

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಸಮಸ್ಯೆಯಾಗಿರುವ ಕೆಂಪುಕಲ್ಲು ಮತ್ತು ಮರಳಿನ ಕೊರತೆ ನೀಗಿಸಲು ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಆರು IAS, ನಾಲ್ಕು IFS, ಓರ್ವ IPS ಅಧಿಕಾರಿಗಳ ವರ್ಗಾವಣೆ!

ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್‌ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.