ಜ್ಞಾನಭಾರತ್-ಬಾಲಸಂಸ್ಕಾರ ಮಕ್ಕಳಿಂದ ಹಿರಿಯಡ್ಕ ದೇಗುಲ ದರ್ಶನ

Date:

spot_img

ಹಿರಿಯಡ್ಕ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಹಾರದ ಮುಖ್ಯ ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಶ್ರೀಮತಿ ಪೂರ್ಣಿಮಾ ಸುರೇಶ್ ಸ್ಥಳ ಸಾನಿಧ್ಯದ ಪರಿಚಯ ಮಾಡಿಕೊಟ್ಟರು. ನಮ್ಮ ಊರಿನ ಕ್ಷೇತ್ರದ ಮಹಿಮೆಗಳನ್ನು, ಹಿರಿಯರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ, ದೈವಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಮಕ್ಕಳು ದೇವಸ್ಥಾನದ ಮುಂಭಾಗದಲ್ಲಿರುವ ಭೂತರಾಜ ಕಂಬ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ, ಬ್ರಹ್ಮಲಿಂಗ ದೇವರಗುಡಿ, ಬೊಬ್ಬರ್ಯ ಕಂಬ, ಆದಿ ನಾಗಬನ, ಆದಿ ಬ್ರಹ್ಮಸ್ಥಾನ, ವ್ಯಾಘ್ರ ಚಾಮುಂಡಿ ಗುಡಿ, ಪರಿವಾರ ಗಣಶಾಲೆ (ಆಲಡೆ), ಗುರುಚಿ ಮರ, ಅಡಕತ್ತಾಯ, ಕ್ಷೇತ್ರಪಾಲ, ಪುಷ್ಕರಣಿ, ಶೂಲಪಾಣಿ ಮತ್ತು ದಂಡಪಾಣಿ ಗುಡಿ, ಮಾಲಿ-ಸುಮಾಲಿ ದ್ವಾರಪಾಲಕ ಮಂಟಪಗಳನ್ನು ದರ್ಶನ ಪಡೆಯುವುದರ ಜೊತೆಗೆ ದೇಗುಲದ ಒಳಾಂಗಣ, ಹೊರಾಂಗಣ ಮತ್ತು ಮೇಲ್ಛಾವಣಿಯ ದಾರುಶಿಲ್ಪಗಳನ್ನು ಕಂಡು ರೋಮಾಂಚನಗೊಂಡರು.

  ಈ ಸಂದರ್ಭ ವೃಂದದ ಉಪಾಧ್ಯಕ್ಷರಾದ ಡಾ.ದಯಾನಂದ ಬಾಯಾರ್, ಕಾರ್ಯದರ್ಶಿ ಶ್ರೀಮತಿ ಸಂಗೀತಾ ಕುಲಾಲ್, ಸದಸ್ಯರಾದ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ, ಶ್ರೀಮತಿ ಗಾಯತ್ರಿ ನಾಗೇಶ್, ಶ್ರೀಮತಿ ಚೇತನಾ ಸಂದೀಪ್, ಶ್ರೀ ಸಂತೋಷ್, ಶ್ರೀ ಸಂತೋಷ್ ನೆಲ್ಲಿಕಾರು, ಶ್ರೀಮತಿ ಶೋಭಾ, ಶ್ರೀಮತಿ ಪ್ರಸಾದಿನಿ ಹಾಗೂ ಶ್ರೀ ಚಂದ್ರಶೇಖರ್ ಪೂಜಾರಿ ಉಪಸ್ಥಿತರಿದ್ದರು.   
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ