‘ಕಾಂತಾರ -1’ Vs ವರುಣ್‌ ಧವನ್‌ ಚಿತ್ರ: ಅಡ್ವಾನ್ಸ್‌ ಬುಕಿಂಗ್‌ನಲ್ಲಿ ‘ಕಾಂತಾರ’ ಭಾರಿ ಮುನ್ನಡೆ!

Date:

spot_img

ಮುಂಬಯಿ: ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ರಿಷಬ್‌ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್‌ 1’ (Kantara: Chapter 1) ಚಿತ್ರವು ಬಿಡುಗಡೆಗೆ ದಿನಗಣನೆ ನಡೆಸುತ್ತಿದ್ದು, ಮುಂಗಡ ಬುಕಿಂಗ್‌ನಲ್ಲಿ ಹಿಂದಿ ಚಿತ್ರವನ್ನು ಮೀರಿ ಭಾರಿ ಮುನ್ನಡೆ ಸಾಧಿಸಿದೆ.

ಸಾಮಾನ್ಯವಾಗಿ ದೊಡ್ಡ ಚಿತ್ರಗಳ ಎದುರು ಬೇರೆ ಸಿನಿಮಾಗಳನ್ನು ಬಿಡುಗಡೆ ಮಾಡಲು ನಿರ್ಮಾಪಕರು ಹಿಂದೇಟು ಹಾಕುತ್ತಾರೆ. ಆದರೆ, ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ‘ಕಾಂತಾರ -1’ ಜತೆಗೇ ಹಿಂದಿಯ ಮತ್ತೊಂದು ಬಹುನಿರೀಕ್ಷಿತ ಚಿತ್ರ ಬಿಡುಗಡೆಯಾಗುತ್ತಿದೆ. ವರುಣ್‌ ಧವನ್‌ ಮತ್ತು ಜಾಹ್ನವಿ ಕಪೂರ್‌ ಅಭಿನಯದ ‘ಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿ’ ಅಕ್ಟೋಬರ್‌ 2ರಂದೇ ತೆರೆಗೆ ಬರುತ್ತಿದೆ.

ಅಡ್ವಾನ್ಸ್‌ ಬುಕಿಂಗ್‌ನಲ್ಲಿ ಕದನ

ಶಶಾಂಕ್ ಖೈತಾನ್ ನಿರ್ದೇಶನದ ‘ಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿ’ (ಧರ್ಮ ಪ್ರೊಡಕ್ಷನ್ಸ್) ಚಿತ್ರದ ಮುಂಗಡ ಬುಕಿಂಗ್ ಓಪನ್‌ ಆಗಿದೆ. ‘ಸಾಕ್ನಿಲ್ಕ್’ ವರದಿಯ ಪ್ರಕಾರ, ಈ ಚಿತ್ರದ ಇಲ್ಲಿಯವರೆಗೆ 5,182 ಟಿಕೆಟ್‌ಗಳು ಮಾರಾಟವಾಗಿವೆ (ಬ್ಲಾಕ್ ಸೀಟುಗಳನ್ನು ಹೊರತುಪಡಿಸಿ).

ಇದಕ್ಕೆ ಪ್ರತಿಯಾಗಿ, ‘ಕಾಂತಾರ -1’ನ ಹಿಂದಿ ವರ್ಷನ್‌ನಲ್ಲಿ 10,503 ಟಿಕೆಟ್‌ಗಳು ಮಾರಾಟವಾಗಿವೆ. ಪ್ರತಿ ನಿಮಿಷಕ್ಕೂ ‘ಕಾಂತಾರ -1’ನ ಹಿಂದಿ ಆವೃತ್ತಿಯ ಟಿಕೆಟ್‌ ಮಾರಾಟ ಹೆಚ್ಚಾಗುತ್ತಿರುವುದರಿಂದ, ಇದು ವರುಣ್‌ ಧವನ್‌ ಸಿನಿಮಾಕ್ಕಿಂತ ಅಡ್ವಾನ್ಸ್‌ ಬುಕಿಂಗ್‌ನಲ್ಲಿ ಭಾರಿ ಮುನ್ನಡೆ ಸಾಧಿಸಿದೆ.

‘ಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿ’ ಚಿತ್ರದಲ್ಲಿ ಸನ್ಯಾ ಮಲ್ಹೋತ್ರಾ ಮತ್ತು ರೋಹಿತ್ ಸರಾಫ್ ಮುಂತಾದವರು ನಟಿಸಿದ್ದರೆ, ‘ಕಾಂತಾರ ಚಾಪ್ಟರ್‌ -1’ ನಲ್ಲಿ ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್‌, ಗುಲ್ಶನ್‌ ದೇವಯ್ಯ, ಜಯರಾಮ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.