spot_img

ಕಾಂತಾವರ: ಜು.6 ರಂದು ಕೆಸರ್ ಡ್ ಒಂಜಿ ದಿನ – 2025

Date:

spot_img

ಯುವ ಸಂಗಮ ಕಾಂತಾವರ (ರಿ) ಹಾಗೂ ಯುವ ಉತ್ಸಾಹಿ ಬಳಗ (ರಿ) ಕೇಮಾರು ಇವರ ಜಂಟಿ ಆಶ್ರಯದಲ್ಲಿ 3ನೇ ವರ್ಷದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮವು ಜು.6 ನೇ ಆದಿತ್ಯವಾರ ಕಾಂತಾವರ ಕುಂದಿಲ, ಕಡತ್ರಬೈಲು ನೆರೋಲ್ದ ಬಾಕಿಮಾರು ಗದ್ದೆಯಲ್ಲಿ ಜರುಗಲಿದೆ.

ಉದ್ಘಾಟನಾ ಸಮಾರಂಭ:
ಬೆಳಿಗ್ಗೆ 9.00 ಕ್ಕೆ ಸರಿಯಾಗಿ ಯುವಸಂಗಮ ಕಾಂತಾವರದ ಅಧ್ಯಕ್ಷ ಶ್ರೀ ನವೀನ್ ಜೆ ಕೆ ಇವರ ಅಧ್ಯಕ್ಷತೆಯಲ್ಲಿ , ಶ್ರೀ ಕ್ಷೇತ್ರ ಕಾಂತಾವರ ಪ್ರಧಾನ ಅರ್ಚಕರಾದ ಶ್ರೀ ಕೃಷ್ಣಮೂರ್ತಿ ಭಟ್ ಇವರು ಮುಖ್ಯ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಿರುವರು.

ಪುರುಷರಿಗೆ ವಾಲಿಬಾಲ್ , ಹಗ್ಗಜಗ್ಗಾಟ , ವೈಯಕ್ತಿಕ ಆಟಗಳು, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ವೈಯಕ್ತಿಕ ಆಟಗಳು, ಮಕ್ಕಳಿಗೆ ವೈಯಕ್ತಿಕ ಆಟಗಳು, ಸಾರ್ವಜನಿಕರಿಗೆ ನಿಧಿ ಶೋಧ , ವಿಶೇಷ ಆಕರ್ಷಣೆಯಾಗಿ ಚೆನ್ನೆಮಣೆ ಆಟ ಹಾಗೂ ವಿಡಿಯೋ ರೀಲ್ಸ್ ಸ್ಪರ್ಧೆ ನಡೆಯಲಿರುವುದು.

ಸನ್ಮಾನ ಕಾರ್ಯಕ್ರಮ
ಮಧ್ಯಾಹ್ನ 12.30ಕ್ಕೆ ಸರಿಯಾಗಿ ಶ್ರೀ ಕ್ಷೇತ್ರ ಕಾಂತಾವರ ಧರ್ಮದರ್ಶಿಗಳು ಡಾ.ಕೆ ಜೀವಂಧರ್ ಬಲ್ಲಾಳ್ ಇವರ ಅಧ್ಯಕ್ಷತೆಯಲ್ಲಿ, ಶ್ರೀ ಕ್ಷೇತ್ರ ಕೇಮಾರು ಶ್ರೀ ಶ್ರೀ ಈಶ ವಿಠಲ ದಾಸ ಸ್ವಾಮೀಜಿ ಯವರಆಶೀರ್ವಚನದೊಂದಿಗೆ, ಅತಿಥಿಗಣ್ಯರ ಉಪಸ್ಥಿತಿಯಲ್ಲಿ
ದೈವಾರಾಧನೆ ಕ್ಷೇತ್ರದಿಂದ ಶ್ರೀ ವಸಂತ ಪೂಜಾರಿ ಪೈಬೆಟ್ಟು ಹಾಗೂ ಶ್ರೀ ಆನಂದ ಪೂಜಾರಿ ಕೇಮಾರು ಇವರನ್ನು ಸನ್ಮಾನಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ಅವಿಭಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಕ್ಷೇತ್ರದ ಗುರುತಿಸಿಕೊಂಡಿರುವ ಗಣ್ಯರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭ

ಸಂಜೆ 4.30 ಕ್ಕೆ ಸರಿಯಾಗಿ ಯುವ ಉತ್ಸಾಹಿ ಬಳಗದ ಅಧ್ಯಕ್ಷ ಶ್ರೀ ಚಂದ್ರಹಾಸ ಜೈನ್ ಹಕ್ಕೇರಿ ಇವರ ಅಧ್ಯಕ್ಷತೆಯಲ್ಲಿ, ಹಾಗೂ ಮುಖ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಎಂದು ಕಾರ್ಯಕ್ರಮದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಗಣೇಶ ಚತುರ್ಥಿ

ಈ ಹಬ್ಬವು ಜ್ಞಾನ, ಸಮೃದ್ಧಿ ಮತ್ತು ಶುಭದ ದೇವರಾದ ಶ್ರೀ ಗಣೇಶನಿಗೆ ಸಮರ್ಪಿತವಾಗಿದೆ

ಕಾರ್ಕಳದಲ್ಲಿ ಬಡ್ಡಿ ವ್ಯಾಪಾರಿ ಹತ್ಯೆ, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಬಂಧನ

ಕಾರ್ಕಳದ ಕುಂಟಲ್ಪಾಡಿಯಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ಬಸ್ ಚಾಲಕನನ್ನು ಬಂಧಿಸಲಾಗಿದೆ.

ಉಡುಪಿ ಉಚ್ಚಿಲ ದಸರಾ ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಶ್ರಯದಲ್ಲಿ ಜರಗಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ 2025 ಉತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರು ಬಿಡುಗಡೆಗೊಳಿಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಾಲ್ಕು ಬಾರಿ ಕರೆ ಮಾಡಿದರೂ ಉತ್ತರಿಸದ ಮೋದಿ: ವರದಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇತ್ತೀಚಿನ ವಾರಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ನಾಲ್ಕು ಬಾರಿ ಕರೆ ಮಾಡಿದ್ದಾರೆ. ಆದರೆ, ಮೋದಿ ಕರೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಜರ್ಮನ್‌ನ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.