spot_img

ಭೂಕಂಪದಿಂದ ಕರಾಚಿ ಜೈಲಿನ ಗೋಡೆ ಕುಸಿತ ! 216 ಕೈದಿಗಳು ಪರಾರಿ , ಗುಂಡಿನ ಚಕಮಕಿಯಲ್ಲಿ ಓರ್ವ ಸಾವು!

Date:

ಪಾಕಿಸ್ತಾನದ ಕರಾಚಿಯಲ್ಲಿ ಜೂನ್ 2ರಂದು ಸಂಭವಿಸಿದ ಸರಣಿ ಭೂಕಂಪದ ನಂತರ, ಮಾಲಿರ್ ಜಿಲ್ಲೆಯ ಕೇಂದ್ರ ಜೈಲಿನಿಂದ 216 ಕೈದಿಗಳು ಪರಾರಿಯಾದ ಘಟನೆ ದೇಶವ್ಯಾಪಿ ಆತಂಕಕ್ಕೆ ಕಾರಣವಾಗಿದೆ.

ರಿಕ್ಟರ್ ಮಾಪಕದಲ್ಲಿ 3.2 ಮತ್ತು 3.6ರ ಮಧ್ಯದ ತೀವ್ರತೆಯ ಮೂರು ಪ್ರತ್ಯೇಕ ಭೂಕಂಪಗಳು ಸಂಭವಿಸಿದ ವೇಳೆ, ಕಂಪನದ ಕೇಂದ್ರಬಿಂದು ಕರಾಚಿಯ ಲಂಧಿ ಫಾಲ್ಟ್ ಪ್ರದೇಶವಾಗಿತ್ತು ಎಂದು ಭೂಕಂಪ ತಜ್ಞರು ತಿಳಿಸಿದ್ದಾರೆ. ಭೂಕಂಪದ ಹೊತ್ತಿನಲ್ಲಿ ಜೈಲಿನ ಕೆಲವು ಗೋಡೆಗಳು ಭಾಗಶಃ ಕುಸಿದು ಬಿದ್ದಿದ್ದು, ಇದೇ ವೇಳೆ ಹಲವಾರು ಕೈದಿಗಳು ಹೊರಬಂದು ಪರಾರಿಯಾದ ಘಟನೆ ನಡೆದಿದೆ.

ಮೂಲಗಳ ಮಾಹಿತಿಯ ಪ್ರಕಾರ, ಭೂಕಂಪದ ನಂತರ ಆತಂಕದ ಮಧ್ಯೆ ಕೈದಿಗಳನ್ನು ಇನ್ನೊಂದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿತ್ತು. ಈ ಸಂದರ್ಭದ ಗೊಂದಲವನ್ನು ದುರುಪಯೋಗ ಪಡಿಸಿಕೊಂಡು, ಕೆಲ ಕೈದಿಗಳು ಜೈಲಿನ ಬಾಗಿಲುಗಳತ್ತ ದೌಡಾಯಿಸಿದ್ದಾರೆ. ಈ ಗಲಾಟೆಯಲ್ಲಿ ಕೆಲವರು ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಪರಾರಿಯಾದಾಗ, ಜೈಲಿನ ಒಳಗೆ ಹಾಗೂ ಹೊರಗೆ ಭಾರಿ ಗುಂಡಿನ ಚಕಮಕಿ ನಡೆದಿದೆ.

ಈ ಘಟನೆಯಲ್ಲಿ ಒಬ್ಬ ಕೈದಿ ಮೃತಪಟ್ಟಿದ್ದು, ಮೂವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಸುತ್ತಮುತ್ತಲಿನ ವಸತಿ ಪ್ರದೇಶಗಳಲ್ಲೂ ಭಯಭೀತ ವಾತಾವರಣ ನಿರ್ಮಾಣವಾಗಿದ್ದು, ನಾಗರಿಕರಲ್ಲಿ ಆತಂಕ ಮನೆಮಾಡಿದೆ.

ಪರಾರಿಯಾದ ಕೈದಿಗಳ ಪತ್ತೆಗಾಗಿ ಪಾಕಿಸ್ತಾನ ಭದ್ರತಾ ಪಡೆಗಳು ತೀವ್ರ ತಪಾಸಣೆ ಮತ್ತು ಕಾರ್ಯಾಚರಣೆ ಆರಂಭಿಸಿವೆ. ರಾಷ್ಟ್ರೀಯ ಹೆದ್ದಾರಿಗಳ ಸಹಿತ ಪ್ರಮುಖ ಸ್ಥಳಗಳನ್ನು ಬಂದ್ ಮಾಡಿ ಪರಿಶೀಲನೆ ನಡೆಸುತ್ತಿದೆ ಎಂದು ಕರಾಚಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಜೈಲು ವ್ಯವಸ್ಥೆಯ ಭದ್ರತೆಯ ಮೇಲೊಂದು ದೊಡ್ಡ ಪ್ರಶ್ನೆಯನ್ನು ಎತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.