ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸಮವಸ್ತ್ರ ವಿತರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ.

Date:

spot_img

ವಿಜೇತ ವಿಶೇಷ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕುಕ್ಕುಂದೂರು ಪಂಚಾಯತ್ ಸದಸ್ಯರಾದ ಶ್ರೀಮತಿ ಶಾಂತಿ ಕಿಣಿ ಇವರು ನೆರವೇರಿಸಿ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ,ಸಭಾ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು. ಇವರ ಸೇವೆಯನ್ನು ಪರಿಗಣಿಸಿ ಶಾಲಾ ವತಿಯಿಂದ ಇವರನ್ನು ಗೌರವಿಸಲಾಯಿತು.

ಶ್ರೀಮತಿ ಶೈನಾ ಗಣೇಶ್ ಶೆಟ್ಟಿ ಇವರ ವತಿಯಿಂದ ದೇಣಿಗೆಯಾಗಿ ನೀಡಿದಂತಹ ಸಮವಸ್ತ್ರಗಳನ್ನು ಉದ್ಯಮಿಗಳಾದ ಪ್ರವೀಶ್ ಶೆಟ್ಟಿ & ದೀಪ ಪ್ರವೀಶ್ ಶೆಟ್ಟಿ ದಂಪತಿಗಳು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು.

ಕಾರ್ಕಳ ಮೊಬೈಲ್ ರಿಟೈಲರ್ ಅಸೋಸಿಯೇಶನ್ ಇದರ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿ ಸಂಸ್ಥೆಗೆ 15 ಸಾವಿರ ದೇಣಿಗೆಯನ್ನು ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಕಾರ್ಕಳ ಮೊಬೈಲ್ ರಿಟೈಲರ್ ಅಸೋಸಿಯೇಶನ್ ಗೌರವಾಧ್ಯಕ್ಷರಾದ ಪ್ರಶಾಂತ್ ಶೆಣೈ, ಅಧ್ಯಕ್ಷರಾದ ಅಜಿತ್, ಕಾರ್ಯದರ್ಶಿ ಖಾದರ್, ಕೋಶಾಧಿಕಾರಿ ರಾಜೇಶ್, ಜನಪ್ರಿಯ ರೈಸ್ ಮಿಲ್ ಮಾಲಕರಾದ ಶ್ರೀ ಮಂಜುನಾಥ್, ಅಂಕಿತಾ ಕಾಮತ್, ವಿಜೇತ ವಿಶೇಷ ಶಾಲಾ ಅಧ್ಯಕ್ಷರು ಶ್ರೀ ರತ್ನಾಕರ್ ಅಮೀನ್, ದುರ್ಗಾ ವಿದ್ಯಾ ಸಂಘ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಕೆ ರಾಧಾಕೃಷ್ಣ ಶೆಟ್ಟಿ, ಸಂಸ್ಥಾಪಕಿ ಡಾ. ಕಾಂತಿ ಹರೀಶ್, ವೇದಿಕೆಯಲ್ಲಿ ಉಪಸ್ತಿತರಿದ್ದರು.

ಮ್ಯಾನೇಜಿoಗ್ ಟ್ರಸ್ಟಿ ಹರೀಶ್, ಟ್ರಸ್ಟಿ ಕಿರಣ್ ಶೆಟ್ಟಿ, ಶಾಲಾ ಮಕ್ಕಳು, ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳ ಪೋಷಕರು ಶಾಲಾ ಹಿತೈಷಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕುಕ್ಕುಂದೂರು ಗ್ರಾಮ ಪಂಚಾಯತ್, ಶ್ರೀ ಮಂಜುನಾಥ್, ಕಾರ್ಕಳ ಮೊಬೈಲ್ ರಿಟೈಲರ್ ಅಸೋಸಿಯೇಶನ್, ಶಾಂತಿ ಕಿಣಿ ಇವರ ವತಿಯಿಂದ ಸಿಹಿತಿಂಡಿ ವಿತರಿಸಿದರು.

ಶ್ರೀ ಗಿರೀಶ್ & ಶ್ರೀಮತಿ ಪೂಜಾ ದಂಪತಿಗಳು ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು.

ವಿಶೇಷ ಶಿಕ್ಷಕಿ ಶ್ರೀಮತಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿ ಡಾ. ಕಾಂತಿ ಹರೀಶ್ ಸ್ವಾಗತಿಸಿ, ಸಿಬ್ಬಂದಿ ಹಾಗೂ ಮಕ್ಕಳು ಪ್ರಾರ್ಥನೆಯನ್ನು ನೆರವೇರಿಸಿ, ಶ್ರೀಮತಿ ಶ್ರೀನಿಧಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ