spot_img

ಕಾರ್ಕಳದ ಬೈಲೂರಿನಲ್ಲಿ ಕಾಂಗ್ರೆಸ್ ಜನಸೇವಾ ಕಚೇರಿಯ ಉದ್ಘಾಟನಾ ಸಮಾರಂಭ

Date:

ಕಾರ್ಕಳ (ಬೈಲೂರು): ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಸಹಾಯಕವಾಗುವಂತೆ ಮತ್ತು ಜನಸೇವೆಗೆ ಪೂರಕವಾಗುವಂತೆ ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಬಳಿಯಲ್ಲಿರುವ ಮನೀಶ್ ಕಾಂಪ್ಲೆಕ್ಸ್,ನಲ್ಲಿ “ಕಾಂಗ್ರೆಸ್ ಜನಸೇವಾ ಕಚೇರಿ” ಉದ್ಘಾಟನೆಗೊಂಡಿತು.

ಕಚೇರಿ ಉದ್ಘಾಟಿಸಿ ಮಾತನಾಡಿದ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯಶೆಟ್ಟಿ ಮುನಿಯಾಲು ರವರು ಕಾಂಗ್ರೆಸ್ ಜನಸೇವಾ ಕಚೇರಿಯು ಜನ ಸೇವೆಯೇ ಜನಾರ್ಧನ ಸೇವೆ ಎನ್ನುವ ಧ್ಯೇಯದೊಂದಿಗೆ ಬೈಲೂರು ಭಾಗದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವಂತಾಗಲಿ ಎಂದು ಹಾರೈಸಿದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ನೂತನ ಕಾರ್ಯಾಲಯಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ‌ಸಮಿತಿ ಅಧ್ಯಕ್ಷರಾದ ಅಜಿತ್ ಹೆಗ್ಡೆ, ಹಿರ್ಗಾನ ಸೊಸೈಟಿ ಅಧ್ಯಕ್ಷರಾದ ಸಿರಿಯಣ್ಣ ಶೆಟ್ಟಿ, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಪಿನಾಥ್ ಭಟ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಕರುಣಾಕರ ಹೆಗ್ಡೆ, ಬೈಲೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಉದಯ್ ಶೆಟ್ಟಿ, ನೀರೆ ಗ್ರಾಮೀಣ ಅಧ್ಯಕ್ಷರಾದ ಪ್ರಸನ್ನ ಆಚಾರ್ಯ, ಎರ್ಲಪಾಡಿ ಗ್ರಾಮೀಣ ಅಧ್ಯಕ್ಷರಾದ ಸಚ್ಚಿನ್ ಶೆಟ್ಟಿ, ಸಾಣೂರು ಗ್ರಾಮೀಣ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ,ಹಿರಿಯ ಕಾಂಗ್ರೆಸ್ ಮುಖಂಡರಾದ ಬೋಜ ಶೆಟ್ಟಿ,ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಭಾನು ಭಾಸ್ಕರ್, ಅನಿಲ್ ನೆಲ್ಲಿಗುಡ್ಡೆ, ಕೆ.ಎಂ.ಎಫ್ ಸುಧಾಕರ್ ಶೆಟ್ಟಿ ಅಬ್ದುಲ್ಲಾ ಸಾಣೂರು, ರೀನಾ, ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಉಪಸ್ಥಿತರಿದ್ದರು, ವಿದ್ಯಾರ್ಥಿ ಮುಖಂಡ ಕನಿಷ್ಕ್ ಸ್ವಾಗತಿಸಿದರು, ಆಶಾ ಶೆಟ್ಟಿ ಧನ್ಯವಾದವಿತ್ತರು.ನಿತೀಶ್ ಕರ್ಕೇರ ಕಾರ್ಯಕ್ರಮವನ್ನು ನಿರ್ವಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಿರ್ವದ ಪಾಪನಾಶಿನಿ ನದಿಯಲ್ಲಿ ಅಕ್ರಮ ಮರಳು ದಂಧೆಗೆ ಬ್ರೇಕ್: ಹಿಟಾಚಿ, ಟಿಪ್ಪರ್ ವಶಕ್ಕೆ

ಪಾಪನಾಶಿನಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಶಿರ್ವ ಪೊಲೀಸರು ದಾಳಿ ನಡೆಸಿ, ಹಿಟಾಚಿ ಯಂತ್ರ ಮತ್ತು ಎರಡು ಟಿಪ್ಪರ್ ಮರಳನ್ನು ವಶಪಡಿಸಿಕೊಂಡಿದ್ದಾರೆ.

ತೇಜಸ್ವಿ ಯಾದವ್ ಪತ್ನಿಯನ್ನು ‘ಜೆರ್ಸಿ ಹಸು’ ಎಂದ ಮಾಜಿ ಶಾಸಕ: ಬಿಹಾರದಲ್ಲಿ ರಾಜಕೀಯ ವಿವಾದ

ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ.

ಯುವಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ

ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ, ಆದರೆ ಅದು ದೇಹದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪಿದಾಗ ಕೆಲವು ಚಿಹ್ನೆಗಳು ಕಾಣಿಸಿಕೊಳ್ಳಬಹುದು.

ದಿನ ವಿಶೇಷ – ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ

ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).