ರಾಜಕಾರಣದ ಸಭ್ಯತೆಯ ಎಲ್ಲೆ ಮೀರುತ್ತಿರುವ ಉದಯಕುಮಾರ್ ಶೆಟ್ಟಿ –‌ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್ ಆಕ್ರೋಶ

Date:

spot_img
naveen nayak11

ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದ ಶ್ರೇಷ್ಠ ಪ್ರವಾಸಿ ತಾಣವನ್ನಾಗಿ ಬೆಳೆಸಬೇಕೆಂಬ ದೃಷ್ಟಿಯಲ್ಲಿ ಮಾನ್ಯ ಶಾಸಕ ಶ್ರೀ ವಿ ಸುನಿಲ್ ಕುಮಾರ್ ರವರು ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣ ಮಾಡಿದ ಮಹತ್ವಕಾಂಕ್ಷಿ ಯೋಜನೆಯಾದ ಪರಶುರಾಮ ಥೀಮ್ ಪಾರ್ಕ್ ಇಂದು ಕಾರ್ಕಳದ ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಅವರ ದ್ವೇಷ ಹಾಗೂ ಮತ್ಸರದ ರಾಜಕಾರಣದಿಂದಾಗಿ ಪಾಳು ಬಿದ್ದ ಸ್ಥಿತಿ ನಿರ್ಮಾಣವಾಗಿದೆ.

ದಿನನಿತ್ಯ ಪ್ರವಾಸಿಗರಿಂದ ತುಂಬಿ ತುಳುಕಬೇಕಾಗಿದ್ದ ಪರಶುರಾಮ ಥೀಮ್ ಪಾರ್ಕ್ ಇಂದು ಕಳ್ಳತನ, ಅನೈತಿಕ ಚಟುವಟಿಕೆಗಳು ನಡೆಯುವಂತಹ ಭೀತಿಯ ಪರಿಸ್ಥಿತಿ ನಿರ್ಮಾಣವಾಗಿದ್ದು ಇತ್ತೀಚೆಗೆ ಯಾರೋ ಕಿಡಿಗೇಡಿಗಳು ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಭೀಗ ಒಡೆದು ಮೇಲ್ಚಾವಣಿಯ ತಾಮ್ರದ ಹೊದಿಕೆಯನ್ನು ಕದ್ದೊಯುವ ಪರಿಸ್ಥಿತಿಗೆ ಬಂದಿದೆ ಇದಕ್ಕೆ ನೇರ ಹೊಣೆ ಮಾನ್ಯ ಉದಯಕುಮಾರ್ ಶೆಟ್ಟಿಯವರು.

ಥೀಮ್ ಪಾರ್ಕಿನಲ್ಲಿ ಕಳ್ಳತನವಾಗಿರುವ ಬಗ್ಗೆ ತನ್ನ ಬೇಸರವನ್ನು ವ್ಯಕ್ತಪಡಿಸಿರುವ ಮಾನ್ಯ ಶಾಸಕರ ಬಗ್ಗೆ ಟೀಕೆ ಮಾಡುವ ಬರದಲ್ಲಿ ಉದಯಕುಮಾರ್ ಶೆಟ್ಟಿ ಅವರು ಶಾಸಕರ ಬಗ್ಗೆ ತೀರ ಕೆಟ್ಟವಾದ ಶಬ್ದವನ್ನು ಬಳಕೆ ಮಾಡಿರುವುದು ಖೇದಕರ. ನಾಲ್ಕು ಬಾರಿ ಶಾಸಕರಾಗಿ ಒಂದು ಬಾರಿ ಸಚಿವರಾಗಿದ್ದು ಗೌರವಾನ್ವಿತ ಕುಟುಂಬದಿಂದ ಬಂದಿರುವ ಗೌರವಾನ್ವಿತ ಶಾಸಕರ ಬಗ್ಗೆ ನೀಚ ಎಂಬ ಪದ ಬಳಕೆ ಮಾಡಿರುವುದು ಅವರು ಬಳಸಿರುವ ಪದದಂತೆ ಅವರ ನಡವಳಿಕೆಯನ್ನು ಎತ್ತಿ ತೋರಿಸುತ್ತದೆ. ರಾಜಕಾರಣದ ಸಭ್ಯತೆಯನ್ನು ಮೀರುವ ಮೂಲಕ ಇಷ್ಟರವರೆಗೆ ಕಾರ್ಕಳದ ನಡೆದುಕೊಂಡು ಬರುತ್ತಿದ್ದ ಉತ್ತಮ ರಾಜಕೀಯ ವ್ಯವಸ್ಥೆಯನ್ನು ಹಾಳು ಮಾಡಿದ ಕೀರ್ತಿ ಉದಯ ಶೆಟ್ಟಿಯವರಿಗೆ ಸಲ್ಲುತ್ತದೆ.

ಉದಯಕುಮಾರ್ ಶೆಟ್ಟಿ ಅವರೇ ರಾಜಕೀಯದಲ್ಲಿ ಯಾರು ಶಾಶ್ವತವಲ್ಲ ನೀವು ಮಾಡಿರುವ ತಪ್ಪು ನಿಮಗೆ ಅರಿವಾಗಿದೆ. ಇದರಿಂದ ನೀವು ಹತಾಶರಾಗಿ ಏನೇನು ಮಾತನಾಡಬೇಡಿ ನಿಮ್ಮ ತಪ್ಪಿಗೆ ಪ್ರಾಯಶ್ಚಿತ ಆಗಬೇಕಾದರೆ ಕಾರ್ಕಳ ಭಾರತೀಯ ಜನತಾ ಪಾರ್ಟಿ ಯಾವಾಗಲೂ ಆಗ್ರಹಿಸುವಂತೆ ಪರಶುರಾಮ ಥೀಮ್ ಪಾರ್ಕಿಗೆ ಬಿಡುಗಡೆಗೊಳಿಸಲು ಬಾಕಿ ಇರುವ ಅನುದಾನವನ್ನು ಬಿಡುಗಡೆಗೊಳಿಸಿ ಕಾಮಗಾರಿ ಪೂರ್ಣಗೊಳ್ಳಲು ಹಾಗೂ ಸಾರ್ವಜನಿಕರಿಗೆ ಭೇಟಿಗೆ ಮುಕ್ತಗೊಳಿಸಿ. ಇಷ್ಟು ಮಾಡಿದರೆ ನೀವು ಎರಡುವರೆ ವರ್ಷಗಳಿಂದ ಮಾಡುತ್ತಾ ಬಂದಿರುವ ಪಾಪಕ್ಕೆ, ದುಡಿಯುವ ಬಿಜೆಪಿ ಕಾರ್ಯಕರ್ತರಿಗೆ ಮಾಡಿದ ಅನ್ಯಾಯಕ್ಕೆ ಪ್ರಾಯಶ್ಚಿತ ಸಿಗಬಹುದು. ಇಲ್ಲದಿದ್ದರೆ ನೀವು ಇದೇ ರೀತಿ ಪದೇ ಪದೇ ಮಾನಸಿಕ ವಿಚಲಿತರಾದಂತೆ ವರ್ತಿಸಬಹುದು ಮತ್ತೆ ಅದಕ್ಕೂ ಸುನಿಲ್ ಕುಮಾರ್ ಕಾರಣ ಎಂದು ದೂರಬೇಡಿ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಕಿಡಿಕಾರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.