
ಮಂಗಳೂರು: ಮತಾಂಧರಿಂದ ಹತ್ಯೆಗೊಳಗಾದ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀ ಸುಹಾಸ್ ಶೆಟ್ಟಿ ಮನೆಗೆ ಕಾರ್ಕಳ ಬಂಟರ ಸಂಘದ ಪ್ರಮುಖರು ಭೇಟಿ ನೀಡಿದರು . ಕಾರ್ಕಳ-ಹೆಬ್ರಿ ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕರಾದ ಶ್ರೀ ವಿಜಯ್ ಶೆಟ್ಟಿಯವರು ತಮ್ಮ ವೈಯುಕ್ತಿಕ
1 ಲಕ್ಷ ರೂಪಾಯಿ ಸಹಾಯಧನವನ್ನು ಸುಹಾಸ್ ಹೆತ್ತವರಿಗೆ ನೀಡಿ ಸಂತಾಪ ಸೂಚಿಸಿದರು .
ಈ ಸಂದರ್ಭದಲ್ಲಿ ಸೂರ್ಯಕಾಂತ್ ಶೆಟ್ಟಿ , ಹಿತೇಶ್ ಶೆಟ್ಟಿ , ವಿಖ್ಯಾತ್ ಶೆಟ್ಟಿ , ಸುಹಾಸ್ ಶೆಟ್ಟಿ , ದೇವೇಂದ್ರ ಶೆಟ್ಟಿ , ರಾಕೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು .