spot_img

ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ – ದಿನೇಶ್ ಪೂಜಾರಿ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರು

Date:

spot_img

ಬೋಳ : ರಾಜ್ಯ ಸರಕಾರ ನೀಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೋಳ ಗ್ರಾಮದಲ್ಲಿ ಅನುಷ್ಠಾನಗೊಳಿಸಲು ಅವಕಾಶ ನೀಡುವುದಿಲ್ಲವೆಂದು ಗ್ರಾಮ ಸಭೆಯಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಕಾರ್ಕಳ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೋಳ ಗ್ರಾಮ ಪಂಚಾಯತ್ ಮುಂಬಾಗ ಮಾಡಿರುವ ಪ್ರತಿಭಟನೆಯು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸರಣಿ ವೈಫಲ್ಯವನ್ನು ಮರೆಮಾಚಲು ಮಾಡಿರುವ ನಾಟಕವಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ನಂತರ ಯಾವುದೇ ಇಲಾಖೆಗಳಗೆ ಅನುದಾನ ಬರುತ್ತಿಲ್ಲ. ರಸ್ತೆಗಳು ಸಂಚಾರ ಮಾಡದಷ್ಟು ಹದಗೆಟ್ಟು ರಸ್ತೆಗಳಲ್ಲಿ ಓಡಾಡುವುದೇ ಕಷ್ಟವಾಗಿದೆ. ಕಳೆದ ವರ್ಷವೂ ಸರಕಾರ ರಸ್ತೆ ನಿರ್ವಹಣೆಗೆ ಅನುದಾನ ಬಿಡುಗಡೆಗೊಳಿಸಿಲ್ಲ ಇದರಿಂದ ಜನ ಹತಾಶೆಗೊಂಡಿದ್ದು ಪಂಚಾಯತ್ ಸದಸ್ಯರಾದ ನಮಗೆ ಜನಸಾಮನ್ಯರ ಪ್ರಶ್ನೆಗಳನ್ನು ಎದುರಿಸುವುದೇ ದೊಡ್ಡ ಸವಾಲಾಗಿದೆ. ಜೊತೆಗೆ ಜನಸಾಮಾನ್ಯರು ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಸರಕಾರ ಅನುದಾನ ನೀಡದೇ ಇರುವುದರಿಂದ ಪ್ರತೀ ಹಂತದಲ್ಲು ನನ್ನನ್ನು ಸೇರಿದಂತೆ ಎಲ್ಲಾ ಪಕ್ಷದ ಗ್ರಾಮ ಪಂಚಾಯತ್ ಸದಸ್ಯರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಸರ್ಕಾರದ ವೈಫಲ್ಯದಿಂದಾಗಿ ಗ್ರಾಮ ಪಂಚಾಯತ್ ಸದಸ್ಯರುಗಳು ಪ್ರತಿದಿನ ಅವಮಾನ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಮರೆಮಾಚಲು ಕಾರ್ಕಳ ಕಾಂಗ್ರೆಸ್ ನ ಒಂದು ತಂಡ ಪ್ರತಿಭಟನೆ ಮಾಡುವ ನೆಪದಲ್ಲಿ ಬೀದಿ ನಾಟಕ ಮಾಡುತ್ತಿದೆ.

ಈ ಪ್ರತಿಭಟನೆಯಲ್ಲಿ ಬೋಳದ ಬೆರಳೆಣಿಕೆಯ ಕಾಂಗ್ರೆಸ್ ಕಾರ್ಯಕರ್ತರು ಮಾತ್ರ ಭಾಗವಹಿಸಿದ್ದು ಕಾರ್ಕಳದ ಬೇರೆ ಬೇರೆ ಭಾಗಗಳಿಂದ ತನ್ನ ಪಕ್ಷದ ಕಾರ್ಯಕರ್ತರನ್ನು ಕರೆತಂದು ಪ್ರತಿಭಟನೆ ಮಾಡುವ ದಾರಿದ್ರ ಕಾಂಗ್ರೆಸ್ ಗೆ ಒದಗಿರವುದು ದುರಂತವೇ ಸರಿ. ಈ ಪ್ರತಿಭಟನೆಗೆ ಸ್ಥಳೀಯರಿಂದ ಯಾವುದೇ ಸ್ಪಂದನೆ ದೊರಕದೇ ಇರುವುದನ್ನು ಕಂಡರೆ ಕಾಂಗ್ರೆಸ್ ಕಾರ್ಯಕರ್ತರೇ ರಾಜ್ಯ ಸರಕಾರದ ವಿರುದ್ಧ ಬೇಸತ್ತಿದ್ದಾರೆ ಎಂದು ಗೊತ್ತಾಗುತ್ತದೆ. ನಮ್ಮ ಸದಸ್ಯರು ವೈಯುಕ್ತಿಕವಾಗಿ ಸರಕಾರದ ಗ್ಯಾರಂಟಿ ಬೇಡ ಎಂದು ತಿರಸ್ಕರಿಸಿ ಮಾತನಾಡಿದ್ದೇ ಹೊರತು, ಪಂಚಾಯತ್ ವ್ಯಾಪ್ತಿಯಲ್ಲಿ ಗ್ಯಾರಂಟಿ ಅನುಷ್ಠಾನಗೊಳಿಸಲು ಬಿಡುವುದಿಲ್ಲ ಎಂದು ಹೇಳಿರುವುದಿಲ್ಲ. ಆದರೆ ಇದನ್ನೆ ತಿರುಚಿ ತಮ್ಮ ಬೇಳೆ ಬೇಯಿಸುವುದಕ್ಕೋಸ್ಕರ ಸಾರ್ವಜನಿಕವಾಗಿ ಸುಳ್ಳು ಹೇಳಿಕೆ ನೀಡಿ ಗ್ರಾಮ ಪಂಚಾಯತ್ ಎದುರು ಮಾಡಿರುವ ಕಾಂಗ್ರೆಸ್ ನ ಈ ಪ್ರತಿಭಟನೆ ತೀರಾ ಬಾಲಿಶವಾಗಿದೆ.

ಕಾಂಗ್ರೆಸ್ ಆಡಳಿತಕ್ಕೆ ಬಂದನಂತರ ಇದುವರೆಗೆ 9/11 ಸಮಸ್ಯೆಯನ್ನು ಬಗೆಹರಿಸಿಲ್ಲ. ಜನರು ಖಾತೆ ಪಡೆಯಲು ದಿನಾ ಅಲೆದಾಡುವ ಪರಿಸ್ಥಿತಿ ಇದೆ. ಕಟ್ಟಡ ಪರವಾನಿಗೆ ಸಿಗುತ್ತಿಲ್ಲ. ಮನೆ ಕಟ್ಟಲು ಕಟ್ಟಡ ಕಾಮಗಾರಿಗೆ ಮರಳು ಸಿಗುತ್ತಿಲ್ಲ, ಕೆಂಪುಕಲ್ಲು ಸಿಗುವುದೇ ಇಲ್ಲ, ಇಂತಹ ಬೆಟ್ಟದಷ್ಟು ದೊಡ್ಡದಾದ ನೂರಾರು ಸಮಸ್ಯೆಗಳನ್ನು ಮರೆಮಾಚುವ ಸಲುವಾಗಿ ಇಂತಹ ಕೃತಕ ವಿಷಯಗಳನ್ನು ಸೃಷ್ಠಿಸಿ ಪ್ರತಿಭಟನೆ ಮಾಡಿರುವುದು ಹಾಸ್ಯಾಸ್ಪದ. ಸಾದ್ಯವಾದರೆ ಇವೆಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಕಾಂಗ್ರೆಸ್ ತನ್ನ ಸರಕಾರದ ವಿರುದ್ಧ ಪ್ರತಿಭಟನೆ ಮಾಡಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಲಿ ಎಂದು ಈ ಮೂಲಕ ಸಲಹೆ ನೀಡುತ್ತೇನೆ. ಇಂತಹ ಕ್ಷುಲಕ ಪ್ರತಿಭಟನೆಯನ್ನು ನಂಬುವುದಕ್ಕೆ ಬೋಳ ಗ್ರಾಮದ ಜನತೆ ಅನಕ್ಷರಸ್ಥರಲ್ಲ, ಪ್ರಬುದ್ಧ ಬುದ್ದಿವಂತ ಹಾಗೂ ಪ್ರಾಮಾಣಿಕರಾದ ಬೋಳ ಗ್ರಾಮದ ಜನತೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಪೂಜಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಜಿಲ್ಲೆಗೆ ವರುಣನ ಆರ್ಭಟ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಉಡುಪಿ ಜಿಲ್ಲಾಡಳಿತವು ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಂಗಾಪುರಕ್ಕೆ ಚೀನಾ ಮೂಲದ ಸೈಬರ್ ಭೀತಿ: ರಾಷ್ಟ್ರೀಯ ಮಹತ್ವದ ಮೂಲಸೌಕರ್ಯಗಳ ಮೇಲೆ ಗುರಿ

ಸಿಂಗಾಪುರ ಪ್ರಸ್ತುತ ಅತಿ ಸಂಕೀರ್ಣವಾದ ಸೈಬರ್ ಆಕ್ರಮಣವನ್ನು ಎದುರಿಸುತ್ತಿದೆ, ಇದು ದೇಶದ ಭದ್ರತೆ ಮತ್ತು ಪ್ರಮುಖ ಸೇವೆಗಳ ವ್ಯವಸ್ಥೆಗಳಿಗೆ ತೀವ್ರ ಅಪಾಯವನ್ನುಂಟುಮಾಡಿದೆ

“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.

ತನಿಖೆಗೂ ಮುನ್ನ ಧರ್ಮಸ್ಥಳದ ತೇಜೋವಧೆ ಸಲ್ಲದು: ಸಿ.ಟಿ. ರವಿ ಎಚ್ಚರಿಕೆ!

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ನೇಮಕ ಮಾಡಿರುವುದನ್ನು ಸ್ವಾಗತಿಸುವುದಾಗಿ ಬಿಜೆಪಿ ನಾಯಕ ಸಿ.ಟಿ. ರವಿ ತಿಳಿಸಿದ್ದಾರೆ.