ಕಾರ್ಕಳ ಕಾಂಗ್ರೆಸ್ ಆಶ್ರಯದಲ್ಲಿ ದಲಿತ ಶಕ್ತಿ ಸಮಾವೇಶ

Date:

spot_img

ಸಂವಿಧಾನ ಆಶಯದಂತೆ ಸರ್ವರಿಗೂ ಸಮಬಾಳು ಸಮಪಾಲು ಸಿಗುವಂತಾಗಲು ಕಾಂಗ್ರೆಸ್ ಪಕ್ಷವು ಮೀಸಲಾತಿಯನ್ನು ಜಾರಿಗೊಳಿಸಿತು, ಅದರ ಪರಿಣಾಮವಾಗಿ ಇಂದು ದಲಿತರು, ಹಿಂದುಳಿದ ವರ್ಗದವರು, ಶೋಷಿತರು ವರ್ಗಗಳು ಸ್ವಾಭಿಮಾನದ ಜೀವನ ನಡೆಸುವಂತಾಯಿತು ಎಂದು ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಹೇಳಿದರು.

ಅವರು ಬ್ಲಾಕ್ ಕಾಂಗ್ರೆಸ್ ಕಾರ್ಕಳ, ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಪರಿಶಿಷ್ಟ ಜಾತಿ ಘಟಕದ ಜಂಟಿ ಆಶ್ರಯದಲ್ಲಿ ಕಾರ್ಕಳ ಗಾಂಧಿ ಮೈದಾನ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದಲ್ಲಿ ಸಭಾಂಗಣದಲ್ಲಿ ನಡೆದ “ದಲಿತ ಶಕ್ತಿ ಸಮಾವೇಶ” ಉದ್ಘಾಟಿಸಿ ಅಭಿಪ್ರಾಯಪಟ್ಟರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಮಾತನಾಡಿ ಸ್ಪರ್ಶ ಅಸ್ಪರ್ಶ ಮುಂತಾದ ಸಮಾಜದ ಅನಿಷ್ಟಗಳನ್ನು ಹೋಗಲಾಡಿಸಲು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದಿಂದ ಸಾಧ್ಯವಾಯಿತು, ಇಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಖಿಲ ಭಾರತ ಅದ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಒಬ್ಬರು ದಲಿತರು ಎನ್ನಲು ಹೆಮ್ಮೆಯಾಗುತ್ತದೆ, ಇದು ಕಾಂಗ್ರೆಸ್ ಪಕ್ಷವು ಶೋಷಿತ ವರ್ಗಗಳಿಗೆ ನೀಡುವ ಗೌರವವಾಗಿದೆ ಎಂದರು.

ಉಡುಪಿ ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆ ಮಾತನಾಡಿ ನಾವಿಂದು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಭಾರತದ ಸಂವಿಧಾನವೇ ಕಾರಣ, ಅಂಬೇಡ್ಕರ್ ರಚಿತ ಸಂವಿಧಾನವು ದೇಶದ ಪ್ರತಿಯೊಬ್ಬನ ನಾಗರಿಕನಿಗು ಹಕ್ಕು ಕರ್ತವ್ಯ ಮತ್ತು ಸ್ವಾತಂತ್ರ್ಯವನ್ನು ನೀಡಿದೆ ಎಂದರು.
ಖ್ಯಾತ ವೈದ್ಯರು ಹಿರಿಯ ಕಾಂಗ್ರೆಸಿಗರು ದಲಿತ ಮುಖಂಡರೂ ಆದ ಡಾ. ಪ್ರೇಮದಾಸ್ ಮಾತನಾಡಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷವು ನೀಡಿದಷ್ಟು ಸಹಕಾರವನ್ನು ಬೇರೆ ಯಾವ ಪಕ್ಷವೂ ನೀಡಿಲ್ಲ, ಇಂದು ಕೋಮುವಾದಿ ಪಕ್ಷವಾದ ಬಿಜೆಪಿಯು ಇಂದು ದಲಿತ ಸಮುದಾಯದ ಮತಕ್ಕಾಗಿ ನಮ್ಮ ದಿಕ್ಕು ತಪ್ಪಿಸುವ ಕೃತ್ಯವನ್ನು ನಡೆಸುತ್ತಿದ್ದೆ, ದಲಿತರೆಲ್ಲರೂ ಬಿಜೆಪಿಯ ಈ ಷಡ್ಯಂತ್ರವನ್ನು ಅರಿತುಕೊಳ್ಳಬೇಕು ಎಂದರು.

ಕರ್ನಾಟಕ ‌ಸರಕಾರದಿಂದ ನಾಮನಿರ್ದೇಶನಗೊಂಡ ರಮೇಶ್ ಪತ್ತೊಂಜಿಕಟ್ಟೆ, ಶೋಭಾ ರಾಣೆ ಮತ್ತು ಮಂಜು ತೆಳ್ಳಾರು ರಸ್ತೆ ಇವರುಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಸಮಿತಿಯ ಉಪಾದ್ಯಕ್ಷರಾದ ಸುಧಾಕರ ಕೋಟ್ಯಾನ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅದ್ಯಕ್ಷರಾದ ಅಜಿತ್ ಹೆಗ್ಡೆ ಮಾಳ, ನಗರ ಕಾಂಗ್ರೆಸ್ ಅದ್ಯಕ್ಷ ರಾಜೇಂದ್ರ‌ ದೇವಾಡಿಗ, ಪರಿಶಿಷ್ಟ ಜಾತಿ ಘಟಕದ ರಾಜ್ಯ ಸಮಿತಿ ಸದಸ್ಯೆ ಶ್ರೀಮತಿ ಪ್ರತಿಮಾ ರಾಣೆ, ದಲಿತ ಮುಖಂಡರಾದ ಅಣ್ಣಪ್ಪ ನಕ್ರೆ, ಬ್ಲಾಕ್ ಮೀನುಗಾರರ ಘಟಕದ ಅದ್ಯಕ್ಷ ಮುರಳಿ ರಾಣೆ, ಹೆಬ್ರಿ ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಅದ್ಯಕ್ಷ ರಾಘವ ಕುಕ್ಕುಜೆ, ನಗರ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ರೀನಾ ಡಿಸೋಜ, ಅಕ್ರಮ ಸಕ್ರಮ ಸಮಿತಿಯ ಸದಸ್ಯ ರಮೇಶ್ ಬಜಕಳ, ಸೇವಾದಳದ ಅಬ್ದುಲ್ ಸಾಣೂರು ಉಪಸ್ಥಿತರಿದ್ದರು

ಕಾರ್ಯಕ್ರಮದ ಆರಂಭದಲ್ಲಿ ಕುಮಾರಿ ಮೇಘನಾ ಪ್ರಾರ್ಥನೆ ಹಾಡಿದರು, ಕಾರ್ಕಳ ಬ್ಲಾಕ್ ಪರಿಶಿಷ್ಟ ಜಾತಿ ಘಟಕಗಳ ಅದ್ಯಕ್ಷ ದೇವದಾಸ್ ಅತಿಥಿಗಳನ್ನು ಸ್ವಾಗತಿಸಿದರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿ, ಸುಧಾಕರ ದಾನಶಾಲೆ ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ