ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ : ಕ್ರಿಮಿನಲ್ ಕೇಸ್ ದಾಖಲು!

Date:

spot_img

ಕಾರ್ಕಳ : ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ದ್ವೇಷ ಪ್ರಚೋದಕ ಹಾಗೂ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಕಾರ್ಕಳದ ಕಸಬಾ ಗ್ರಾಮದ ವೆಂಕಟರಮಣ ದೇವಸ್ಥಾನದ ಬಳಿ ವಾಸವಾಗಿರುವ ಆರ್. ಉಲ್ಲಾಸ್ ಶೆಣೈ (45) ಎಂಬುವವರೇ ಕಾನೂನು ಕ್ರಮಕ್ಕೆ ಗುರಿಯಾದವರು. ಫೆಬ್ರವರಿ 23ರ ಬೆಳಗಿನ ಜಾವ ಸುಮಾರು 12:30ರ ಸುಮಾರಿಗೆ ಉಲ್ಲಾಸ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವಿವಾದಾತ್ಮಕ ಬರಹವೊಂದನ್ನು ಪ್ರಕಟಿಸಿದ್ದರು. ಈ ಪೋಸ್ಟ್‌ನಲ್ಲಿ ಕೆಲವು ನಿರ್ದಿಷ್ಟ ಸಂಘಟನೆಗಳು ಹಾಗೂ ಅವುಗಳ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಅತ್ಯಂತ ಅವಮಾನಕಾರಿ ಮತ್ತು ಕೆಟ್ಟ ಪದಬಳಕೆ ಮಾಡಲಾಗಿತ್ತು ಎನ್ನಲಾಗಿದೆ.

ಈ ಬರಹವು ಸಮಾಜದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತಲು ಮತ್ತು ಶಾಂತಿ ಕದಡಲು ಪ್ರಚೋದನೆ ನೀಡುವಂತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ನಡೆದ ಒಂದು ಗಂಟೆಯ ಒಳಗಾಗಿಯೇ ಅಂದರೆ ಮುಂಜಾನೆ 1:30ಕ್ಕೆ ಪಿಎಸ್‌ಐ ಮುರುಳೀಧರ ನಾಯ್ಕ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ದೃಷ್ಟಿಯಿಂದ ಜಾಲತಾಣಗಳ ದುರುಪಯೋಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ