ಕಾರ್ಕಳ: ಪ್ರಜಾಪ್ರಭುತ್ವದ ಆಶಯಗಳಿಗೆ ರಾಜ್ಯಪಾಲರ ನಡವಳಿಕೆ ಮಾರಕ – ಶುಭದರಾವ್ ಆಕ್ರೋಶ

Date:

spot_img
shubhadrao

ಕಾರ್ಕಳ: ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕಾದ ರಾಜ್ಯಪಾಲರ ಹುದ್ದೆಯು ರಾಜಕೀಯ ಪ್ರೇರಿತವಾಗಬಾರದು. ರಾಜ್ಯ ಸರ್ಕಾರವು ಸಂಪ್ರದಾಯದಂತೆ ಸಿದ್ಧಪಡಿಸಿದ ಭಾಷಣವನ್ನು ಓದದೆ ತಿರಸ್ಕರಿಸುವ ಮೂಲಕ ರಾಜ್ಯಪಾಲರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದನದಲ್ಲಿ ಸರ್ಕಾರದ ನೀತಿ-ನಿಲುವುಗಳನ್ನು ಮಂಡಿಸುವುದು ರಾಜ್ಯಪಾಲರ ಸಾಂವಿಧಾನಿಕ ಕರ್ತವ್ಯ. ಆದರೆ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪರವಾಗಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರ ನಡೆ ಖಂಡನೀಯ. ಮುಖ್ಯವಾಗಿ ಉದ್ಯೋಗ ಖಾತರಿ ಯೋಜನೆಯನ್ನು ಮರುನಾಮಕರಣ ಮಾಡುವ ನೆಪದಲ್ಲಿ ಅದರ ಮೂಲ ಆಶಯವನ್ನೇ ಹತ್ತಿಕ್ಕಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತಬೇಕಾದ ಜವಾಬ್ದಾರಿ ರಾಜ್ಯ ಸರ್ಕಾರಕ್ಕಿದೆ. ಆದರೆ, ಈ ಸತ್ಯಗಳು ಜನರ ಮುಂದೆ ಬರಬಾರದು ಎಂಬ ಕಾರಣಕ್ಕೆ ರಾಜ್ಯಪಾಲರು ಅಸಂವಿಧಾನಿಕ ಹಾದಿ ತುಳಿದಿದ್ದಾರೆ ಎಂದು ಅವರು ಆರೋಪಿಸಿದರು.

ಸದನದ ಗದ್ದಲದ ನಡುವೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಮೇಲೆ ಬಿಜೆಪಿ ಸದಸ್ಯರು ನಡೆಸಿರುವ ದೈಹಿಕ ವರ್ತನೆಯು ಅತ್ಯಂತ ಆಘಾತಕಾರಿ. ಸದಸ್ಯರೊಬ್ಬರು ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು ಅಥವಾ ಪ್ರತಿಭಟಿಸುವುದು ಅವರ ಪ್ರಜಾಸತ್ತಾತ್ಮಕ ಹಕ್ಕಾಗಿದೆ. ಈ ವೇಳೆ ಹರಿಪ್ರಸಾದ್ ಅವರ ಬಟ್ಟೆ ಹರಿದುಹೋಗುವಂತೆ ವರ್ತಿಸಿದ ಬಿಜೆಪಿ ಸದಸ್ಯರ ನಡೆ ರಾಜ್ಯದ ಜನತೆಗೆ ಮಾಡಿದ ಅಪಮಾನ. ಬಿಜೆಪಿಯು ತನ್ನ ರಹಸ್ಯ ಅಜೆಂಡಾಗಳನ್ನು ಜಾರಿಗೊಳಿಸಲು ರಾಜ್ಯಪಾಲರ ಕಚೇರಿ ಹಾಗೂ ಗೂಂಡಾ ವರ್ತನೆಯನ್ನು ಬಳಸಿಕೊಳ್ಳುತ್ತಿದೆ. ಇಂತಹ ಬೆದರಿಕೆಗಳಿಗೆ ಕಾಂಗ್ರೆಸ್ ಮಣಿಯುವುದಿಲ್ಲ ಮತ್ತು ಸದನದ ಗೌರವ ಕಾಪಾಡಲು ಬದ್ಧವಾಗಿದೆ ಎಂದು ಶುಭದರಾವ್ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.