spot_img

ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Date:

spot_img

ಗಣಿತನಗರ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಭಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. 2025-26ನೇ ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಕೊಳ್ಳಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗಾಗಿ : 8147454906

2024-25ರ ಫಲಿತಾಂಶದಲ್ಲಿ ರಕ್ಷಾ ರಾಮ್‌ಚಂದ್ರ ನಾಯಕ್ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಸ್ಥಾನಿಯಾಗಿ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿ ಸಹನಾ ನಾಯಕ್‌ ಹಾಗೂ ತನ್ವಿ ರಾವ್‌ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ಬ್ಯಾಂಕ್ ಹಾಗೂ ಜಿಲ್ಲೆಗೆ 3ನೇ ಸ್ಥಾನಿಯಾಗಿ ಹೊರಹೊಮ್ಮಿದ್ದು, ವಿದ್ಯಾರ್ಥಿಗಳಾದ ವಿ. ಯಶಸ್ವಿ ನಾಯ್ಕ (591 ಅಂಕ) ಹಾಗೂ ಪ್ರಜ್ಞಾ ಹೆಗ್ಡೆ (591)ಗಳಿಸಿದ್ದಾರೆ. ಈ ಬಾರಿ 2025ರ ಜನವರಿಯಲ್ಲಿ ನಡೆದ ಸಿ.ಎಸ್‌.ಇ.ಇ.ಟಿ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅತ್ಯುತ್ತಮ ಫಲಿತಾಂಶ ದಾಖಲಿಸಿರುತ್ತಾರೆ.

ಪಠ್ಯೇತರ ಚಟುವಟಿಕೆಯಲ್ಲಿ ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಕಾರ್ಯಚರಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸಿ ಈಗಾಗಲೇ ರಿತಿಕಾ ಕಾಮತ್‌, ವೃದ್ಧಿ ಶೆಟ್ಟಿ ಮತ್ತು ಸಮಿಯಾ ಹೆಗ್ಡೆ ರಾಜ್ಯಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಬಾಸ್ಕೆಟ್ ಬಾಲ್, ತ್ರೋಬಾಲ್, ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್, ಫೂಟ್ಬಾಲ್ ಮತ್ತು ಅಥ್ಲೆಟಿಕ್ಸ್‌ ತರಬೇತಿ ಪಡೆದು ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಿರುತ್ತಾರೆ. ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ಹೆಚ್ಚಿಸಲು ವ್ಯಾಪಾರ ಮೇಳಗಳನ್ನು ಹಾಗೂ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

AI ಕ್ರಾಂತಿ: ಆಗಸ್ಟ್‌ನಲ್ಲಿ ಓಪನ್‌ಎಐನ ಬಹುನಿರೀಕ್ಷಿತ GPT-5 ಬಿಡುಗಡೆಗೆ ಸಿದ್ಧತೆ

ಓಪನ್‌ಎಐ ತನ್ನ ನೂತನ ಮತ್ತು ಹೆಚ್ಚು ಶಕ್ತಿಶಾಲಿ GPT-5 ಮಾದರಿಯನ್ನು ಆಗಸ್ಟ್‌ನ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ

ದಿನ ವಿಶೇಷ – ನಿಸರ್ಗ ಸಂರಕ್ಷಣಾ ದಿನ

ಈ ದಿನವು ನಮ್ಮ ಭೂಮಿಯ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಮತ್ತು ಸುಸ್ಥಿರವಾಗಿ ಬಳಸುವ ಮಹತ್ವವನ್ನು ನೆನಪಿಸುತ್ತದೆ.

ಆರೋಗ್ಯಕ್ಕೆ ಮಾರಕವಾಗಬಲ್ಲ ದಿನನಿತ್ಯದ ಸೊಪ್ಪು: ಕಿಡ್ನಿ ಕಲ್ಲುಗಳ ಸೃಷ್ಟಿಗೆ ಪ್ರಮುಖ ಕಾರಣ!

ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾದ ಮೂತ್ರಪಿಂಡಗಳು, ರಕ್ತವನ್ನು ಶುದ್ಧೀಕರಿಸಿ ವಿಷಕಾರಿ ಅಂಶಗಳನ್ನು ಹೊರಹಾಕುವ ಕಾರ್ಯವನ್ನು ನಿರಂತರವಾಗಿ ಮಾಡುತ್ತವೆ.

“ಸು ಫ್ರಮ್‌ ಸೋ” ಅಬ್ಬರ: ಸಣ್ಣ ಬಜೆಟ್, ದೊಡ್ಡ ಕಲೆಕ್ಷನ್ – ಇದು ಕಂಟೆಂಟ್ ತಾಕತ್ತು!

ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್‌ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.