
ಸ್ವಾತಂತ್ರ್ಯವೆಂಬುದು ಉಚಿತವಲ್ಲ ಅದೊಂದು ಜವಾಬ್ದಾರಿ : ಡಾ.ಶ್ರೀನಿವಾಸ್ ದೇಶ್ಪಾಂಡೆ
ಗಣಿತನಗರ : ಲಕ್ಷಾಂತರ ದೇಶಪ್ರೇಮಿಗಳ ತ್ಯಾಗ, ಬಲಿದಾನಗಳಿಗೆ ನಾವು ಧನ್ಯವಾದ ಹೇಳುವ ಅವರ ಚಿರಸ್ಮರಣೆ ಗೈಯ್ಯುವ ಶುಭದಿನ. ಸ್ವಾತಂತ್ರ್ಯವೆಂಬುದು ಉಚಿತವಾಗಿ ದೊರೆತುದಲ್ಲ. ಅದೊಂದು ಜವಾಬ್ದಾರಿಯ ಸಂಕೇತ ಎಂದು ಪದ್ಮಶ್ರೀ ಡಾ.ಎಂ.ಎಂ.ಜೋಷಿ ಸೇವಾ ಪ್ರಶಸ್ತಿ ಪುರಸ್ಕೃತ ನೇತ್ರ ತಜ್ಞ ಡಾ.ಶ್ರೀನಿವಾಸ್ ದೇಶಪಾಂಡೆ ಹೇಳಿದರು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅವರಣದಲ್ಲಿ ಜರುಗಿದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪಿ.ಆರ್.ಒ ಜ್ಯೋತಿಪದ್ಮನಾಭ್ ಭಂಡಿ. ಪಿ.ಯು. ಉಪಪ್ರಾಂಶುಪಾಲರುಗಳಾದ ಶ್ರೀ ಸಾಹಿತ್ಯ, ಶ್ರೀಮತಿ ಉಷಾ ರಾವ್ ಯು, ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲಾ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ, ಲೆಫ್ಟಿನೆಂಟ್ ಮಂಜುನಾಥ್ ಮುದೂರ್ , ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಮತಿ ಸೌಜನ್ಯ ಹೆಗ್ಡೆ, ರೇಷ್ಮಾ ಸಾಲಿಸ್, ಕಿರಣ್ ಕುಮಾರ್ ಮತ್ತು ದರ್ಶನ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್ ವಂದಿಸಿ, ಜೀವಶಾಸ್ತ್ರ ಉಪನ್ಯಾಸಕ ಶ್ರೀ ಪ್ರಸಾದ್ ಆಚಾರ್ಯ ನಿರೂಪಿಸಿ ಸ್ವಾಗತಿಸಿದರು.