
ಕಾರ್ಕಳ: ಕುಕ್ಕುಂದೂರಿನ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಫ್ರೆಂಡ್ಸ್ ಪವರ್ ಜಿಮ್ ಮತ್ತು ಲೇಡಿಸ್ ಫಿಟ್ನೆಸ್ ಹೌಸ್, ಜೋಡುರಸ್ತೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಕಾರ್ಕಳ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ವಿಭಾಗದ ಸಹಯೋಗದೊಂದಿಗೆ ಈ ಪುಣ್ಯ ಕಾರ್ಯ ನಡೆಯಲಿದೆ.
ಕಾರ್ಯಕ್ರಮದ ವಿವರ:
- ದಿನಾಂಕ: 15-03-2026, ಆದಿತ್ಯವಾರ
- ಸಮಯ: ಬೆಳಿಗ್ಗೆ 9:00 ಗಂಟೆಗೆ
- ಸ್ಥಳ: ಶ್ರೀ ದುರ್ಗಾಪರಮೇಶ್ವರಿ ಸಹಕಾರಿ ಸಂಘದ ಸಭಾಂಗಣ, ಜೋಡುರಸ್ತೆ, ಕುಕ್ಕುಂದೂರು.
“ರಕ್ತದಾನ ಮಾಡಿ – ಜೀವ ಉಳಿಸಿ” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯಲಿರುವ ಈ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9845096302, 8197494649.




































