spot_img

ಕಾರ್ಕಳ ಪರಶುರಾಮ ಪ್ರತಿಮೆ ವಿವಾದ: ಫೈಬರ್ ಸುಳ್ಳು, ಕಂಚಿನ ಬದಲಿಗೆ ಹಿತ್ತಾಳೆ ಎಂದ ಚಾರ್ಜ್‌ಶೀಟ್- ಕಾಂಗ್ರೆಸ್‌ಗೆ ಮುಖಭಂಗ!

Date:

ಕಾರ್ಕಳ: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ಕುರಿತ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ. ಈ ಪ್ರತಿಮೆಯು ಕಂಚಿನದ್ದಲ್ಲ, ಬದಲಾಗಿ ಫೈಬರ್‌ನದ್ದು ಎಂದು ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಪೊಲೀಸರ ತನಿಖೆ ಮತ್ತು ನ್ಯಾಯಾಲಯಕ್ಕೆ ಸಲ್ಲಿಸಲಾದ ದೋಷಾರೋಪ ಪಟ್ಟಿಯಿಂದ ಭಾರಿ ಮುಖಭಂಗವಾಗಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ 1231 ಪುಟಗಳ ದೋಷಾರೋಪ ಪಟ್ಟಿಯಲ್ಲಿ, ಪರಶುರಾಮ ಮೂರ್ತಿಯು ಹಿತ್ತಾಳೆಯ ಲೋಹದಿಂದ ನಿರ್ಮಿಸಲಾಗಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಶಿಲ್ಪಿ ಕೃಷ್ಣ ನಾಯ್ಕ ಅವರು ಕಂಚಿನ ಬದಲು ಹಿತ್ತಾಳೆಯಿಂದ ಮೂರ್ತಿಯನ್ನು ನಿರ್ಮಿಸಿರುವುದು ತಜ್ಞರ ಪರಿಶೀಲನಾ ವರದಿ ಮತ್ತು ತನಿಖೆಯಿಂದ ಸಾಬೀತಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ.

ನಿರ್ಮಿತಿ ಕೇಂದ್ರ ಮತ್ತು ಶಿಲ್ಪಿಯ ನಡುವಿನ ಒಪ್ಪಂದದ ಪ್ರಕಾರ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಬೇಕಾಗಿತ್ತು. ಆದರೆ, ಪ್ರತಿಮೆಯು ಹಿತ್ತಾಳೆಯದ್ದಾಗಿದ್ದು, ಕಾರ್ಕಳದಲ್ಲಿ ನಿರ್ಮಿಸಿರುವ ಪರಶುರಾಮ ಪ್ರತಿಮೆ ಫೈಬರ್‌ನದ್ದು ಎಂಬ ವಾದ ಸಂಪೂರ್ಣ ಸುಳ್ಳಾಗಿದೆ.

ಈ ಪ್ರಕರಣದಲ್ಲಿ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ಅವರು ಅಪರಾಧಿಕ ಒಳಸಂಚು, ನಂಬಿಕೆ ದ್ರೋಹ, ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿರುವುದು ಸಾಬೀತಾಗಿದೆ. ಇವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 420, 409, 201, 120 (ಬಿ) ಜೊತೆಗೆ 34ರ ಅಡಿಯಲ್ಲಿ ದೋಷಾರೋಪ ಪಟ್ಟಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ದಿನಾಂಕ 21.06.2024 ರಂದು ಕೃಷ್ಣ ಶೆಟ್ಟಿ ಅವರು ನೀಡಿದ ದೂರಿನನ್ವಯ, ಕೃಷ್ಣ ನಾಯಕ್ (Krish Art World ಸಂಸ್ಥೆಯ ಮೂಲಕ) ಕಾರ್ಕಳ ತಾಲೂಕಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿ ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದು, ನಂತರ ಕಂಚಿನ ಮೂರ್ತಿ ಮಾಡದೆ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿ ಸರ್ಕಾರಕ್ಕೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 120/2024 ಕಲಂ 420, 409 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು.

ಒಟ್ಟಾರೆ, ಶಾಸಕ ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಮಾಡುತ್ತಿದ್ದ ಫೈಬರ್ ಪ್ರತಿಮೆ ಆರೋಪ ಸುಳ್ಳು ಎಂದು ಪೊಲೀಸ್ ತನಿಖೆಯಿಂದ ಸಾಬೀತಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ನಾರಾಯಣ ಗುರು ಜಯಂತಿ

ಜ್ಞಾನ ಮತ್ತು ಸಮಾನತೆಯ ಪುನರುತ್ಥಾನಕ್ಕೆ ಪ್ರೇರಣೆಯ ದಿನಪ್ರತಿ ವರ್ಷ ಸೆಪ್ಟೆಂಬರ್ 7, ಭಾರತದ ಕರಾವಳಿ ತೀರದ ಜನತೆಗೆ ಒಂದು ಪವಿತ್ರ ಮತ್ತು ಮಹತ್ವದ ದಿನ

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಂಗ ಬಂಧನಕ್ಕೆ, ಶಿವಮೊಗ್ಗ ಜೈಲಿಗೆ ರವಾನೆ

'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಐಸಿಸಿ ಮತ್ತು Google Pay ಜಂಟಿ ಪ್ರಯತ್ನ: ಮಹಿಳಾ ವಿಶ್ವಕಪ್ ಟಿಕೆಟ್ ಮಾರಾಟಕ್ಕೆ ಹೊಸ ಡಿಜಿಟಲ್ ಸ್ಪರ್ಶ

ವಿಶೇಷ ಟಿಕೆಟ್‌ಗಳು ಗೂಗಲ್ ಪೇ ಮೂಲಕ ಸೆಪ್ಟೆಂಬರ್ 8ರವರೆಗೆ ಲಭ್ಯವಿರಲಿದ್ದು, ಸೆಪ್ಟೆಂಬರ್ 9 ರಿಂದ ಎಂದಿನಂತೆ ಟಿಕೆಟ್ ಮಾರಾಟ ಪ್ರಾರಂಭವಾಗಲಿದೆ ಎಂದು ICC ತಿಳಿಸಿದೆ.

ಸೈನಸ್ ಸಮಸ್ಯೆ: ಕರಿಮೆಣಸಿನ ಆವಿಯಿಂದ ಪರಿಹಾರ ಸಾಧ್ಯವೇ?

ಮೂಗು ಕಟ್ಟಿಕೊಂಡಾಗ ಅಥವಾ ಸೈನಸ್‌ಗಳಿಂದ ತಲೆನೋವು ಬಂದಾಗ ಬಿಸಿ ನೀರಿನ ಆವಿಗೆ ಕರಿಮೆಣಸು ಸೇರಿಸಿ ಉಸಿರಾಡುವುದು ಒಂದು ಜನಪ್ರಿಯ ವಿಧಾನ.