ಬ್ರಹ್ಮಾಂಡ ಭ್ರಷ್ಟಾಚಾರ, ನಕಲಿ ಪರಶುರಾಮ ಪ್ರತಿಮೆ ವಿವಾದದಗಳಿಂದ ವರ್ಚಸ್ಸು ಕಳೆದುಕೊಂಡವರಿಂದ ಕಾಂಗ್ರೆಸ್ ನಾಯಕರ ತೇಜೋವದೆಗೆ ಯತ್ನ

Date:

spot_img

ಬ್ರಹ್ಮಾಂಡ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ನಕಲಿ ಪರಶುರಾಮ ಪ್ರತಿಮೆ ವಿವಾದದಿಂದ ಕಾರ್ಕಳದಲ್ಲಿ ವರ್ಚಸ್ಸು ಕಳೆದುಕೊಂಡಿರುವವರು ವಿನಾಕಾರಣ ಕಾಂಗ್ರೆಸ್ ನಾಯಕರ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್ ಹೇಳಿದ್ದಾರೆ.

ಒಂದು ಕಡೆ ಆರೋಪಗಳಿಂದ ಮುಖ ತೋರಿಸಲಾಗದ ಪರಿಸ್ಥಿತಿ, ಮತ್ತೊಂದೆಡೆ ಹೆಚ್ಚುತ್ತಿರುವ ಕಾಂಗ್ರೆಸ್ ಸರಕಾರದ ಜನಪ್ರೀಯತೆಯಿಂದ ಕಂಗಾಲಾಗಿರುವ ಕಾರ್ಕಳ ಬಿಜೆಪಿ ನಾಯಕರು ದಿನಕ್ಕೊಂದು ಸುಳ್ಳುಗಳೊಂದಿಗೆ ಕಾಂಗ್ರೆಸ್ ನಾಯಕರ ವಿರುದ್ದ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ ಎಂದರು.

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಯಥೇಚ್ಛವಾಗಿ ಅನುದಾನವನ್ನು ನೀಡುತ್ತಿದ್ದು ಅದರಂತೆ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೂ ಅನುದಾನವು ಮಂಜೂರಾಗಿದೆ. ರಾಜ್ಯ ಸರ್ಕಾರದ ಅನುದಾನವನ್ನು ನನ್ನದೇ ಸಾಧನೆ ಎಂದು ಬಿಂಬಿಸಿಕೊಳ್ಳಲು ತಿಣುಕಾಡುತ್ತಿರುವ ಶಾಸಕ ಸುನೀಲ್ ಕುಮಾರ್ ತನ್ನ ಹಿಂಬಾಲಕರ ಮೂಲಕ ಕಾಂಗ್ರೆಸ್ ನಾಯಕರ ವಿರುದ್ದ ಹೇಳಿಕೆ ಕೊಡಿಸುತ್ತಿದ್ದಾರೆ.

ಮುನಿಯಾಲು ಪಡುಕುಡೂರು ರಸ್ತೆಯಾಗಲಿ ಅಥವಾ ಕಾರ್ಕಳದ ಯಾವುದೇ ರಸ್ತೆಯಾಗಲಿ ಗುತ್ತಿಗೆ ಪಡೆದುಕೊಂಡವರಿಗೆ ಮಾತ್ರಾ ಕಾಮಗಾರಿ ನಡೆಸಲು ಸಾಧ್ಯ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಸಹಿಸದ ಬಿಜೆಪಿ ನಾಯಕರು ಕಾಮಗಾರಿಗೆ ಅಡ್ಡಿಪಡಿಸುವ, ಗುತ್ತಿಗೆದಾರರನ್ನು ಬೆದರಿಸುವ ಕೃತ್ಯಕ್ಕೆ ಇಳಿದಿರುವುದು ಸರಿಯಲ್ಲ. ಕಾರ್ಕಳದಲ್ಲಿ ಎಲ್ಲವೂ ನಾನು ಹೇಳಿದಂತೆ ನಡೆಯಬೇಕು ಎನ್ನುವ ಸರ್ವಾಧಿಕಾರಿ ಧೋರಣೆಯನ್ನು ಶಾಸಕರು ಬಿಟ್ಟು ಪ್ರಜಾಪ್ರಭುತ್ವಕ್ಕೆ ಗೌರವ ನೀಡಬೇಕು.

ಶಾಸಕರ ಆಣತಿಯಂತೆ ಹೇಳಿಕೆ ನೀಡುವ ಮೊದಲು ಸುರೇಶ್ ಶೆಟ್ಟಿಯವರು ಪಡುಕುಡೂರು ಮುನಿಯಾಲು ಅಭಿವೃದ್ಧಿಯ ಕುರಿತು ಕಾಳಜಿ ಹೊಂದಲಿ, ಶಾಸಕರ ಕೈಗೊಂಬೆಯಂತೆ ವರ್ತಿಸದೇ ಸ್ವಂತ ಬುದ್ದಿಯಿಂದ ಆಲೋಚಿಸಿ ಊರಿನ ಅಭಿವೃದ್ಧಿಗೆ ಕೈ ಜೋಡಿಸಲಿ, ವಿನಾಕಾರಣ ಪದೇ ಪದೇ ನಮ್ಮ ನಾಯಕರ ವಿರುದ್ದ ಅಪಪ್ರಚಾರಗಳನ್ನು ನಡೆಸುತ್ತಿರುವ ವಿಘ್ನ ಸಂತೋಷಿಗಳಿಗೆ ಪಡುಕುಡೂರಿನ ತಾಯಿ ಭದ್ರಕಾಳಿ ಸದ್ಬುದ್ದಿ ನೀಡಲಿ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ