ರಂಗನಪಲ್ಕೆಯ ಡಾ|ಬಿ.ಆರ್.ಅಂಬೇಡ್ಕರ್ ರಸ್ತೆ ಡಾಮಾರೀಕರಣ ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಅಭಿನಂದನೆ: ಅಂತೋನಿ ಮಿರಾಂದಾ

Date:

spot_img

ಬೈಲೂರು-ಕೌಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಂಗನಪಲ್ಕೆ-ಕರಿಕುಮೇರಿ ಪಾತಾವಿನ ಸಂಪರ್ಕ ಕಲ್ಪಿಸುವ ಡಾ| ಬಿ.ಆರ್. ಅಂಬೇಡ್ಕರ್ ರಸ್ತೆ ಕಳೆದ ಹಲವು ವರ್ಷಗಳಿಂದ ಸಂಚಾರಕ್ಕೆ ಅಯೋಗ್ಯವಾಗಿತ್ತು. ಈ ಭಾಗದ ಜನಪ್ರತಿನಿಧಿಗಳ ಬೇಜವಾಬ್ದಾರಿಯಿಂದಾಗಿ ರಸ್ತೆ ಸಂಪೂರ್ಣ ಹದಗೆಟ್ಟು, ಮಳೆಗಾಲದಲ್ಲಂತೂ ನಡೆದಾಡುವುದೇ ದುಸ್ತರವಾಗಿತ್ತು. ರಸ್ತೆ ದುರಸ್ತಿಗಾಗಿ 1 ವರ್ಷದ ಹಿಂದೆ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರೂ ಸ್ಥಳೀಯ ಪಂಚಾಯತ್ ಸದಸ್ಯರು ಅತ್ತ ತಿರುಗಿಯೂ ನೋಡಿರಲಿಲ್ಲ. ಗ್ರಾಮಸಭೆಯಲ್ಲಿ ಈ ಬಗ್ಗೆ ಪ್ರಶ್ನಿಸಿದಾಗ “ಅನುದಾನವಿಲ್ಲ” ಎಂಬ ಹಾರಿಕೆ ಉತ್ತರದ ಮೂಲಕ ಪಂಚಾಯತ್ ಆಡಳಿತ ಜವಾಬ್ದಾರಿಯಿಂದ ನುಣುಚಿಕೊಂಡಿತ್ತು.

ಈ ಸಂದರ್ಭದಲ್ಲಿ ಗ್ರಾಮಸ್ಥರ ನೆರವಿಗೆ ಧಾವಿಸಿದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್, ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ನಿರ್ಮಾಣದ ಭರವಸೆ ನೀಡಿದ್ದರು. ಅದರಂತೆ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಗಮನಸೆಳೆದು ಶೀಘ್ರ ಕ್ರಮಕ್ಕೆ ಒತ್ತಾಯಿಸಿದ್ದರು. ಕಾರ್ಕಳದ ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, ಅವರ ವಿಶೇಷ ಕಾಳಜಿಯಿಂದ ‘ಮುಖ್ಯಮಂತ್ರಿ ಗ್ರಾಮೀಣ ಅಭಿವೃದ್ಧಿ ಯೋಜನೆ’ಯಡಿ ಈ ರಸ್ತೆಗೆ ಅನುದಾನ ಮಂಜೂರಾಗಿದೆ.

ಪ್ರಸ್ತುತ ರಸ್ತೆಯ ಡಾಂಬರೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಉಳಿದ 200 ಮೀಟರ್ ರಸ್ತೆಯನ್ನೂ ಶೀಘ್ರದಲ್ಲೇ ಅಭಿವೃದ್ಧಿಪಡಿಸುವ ಭರವಸೆ ನೀಡಲಾಗಿದೆ. ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಶ್ರಮಿಸಿದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಶುಭದ್ ರಾವ್, ಪಿಡಿಒ ಸಂಧ್ಯಾ ಶೆಟ್ಟಿ ಹಾಗೂ ಹೋರಾಟದಲ್ಲಿ ಕೈಜೋಡಿಸಿದ ಗ್ರಾಮಸ್ಥರಿಗೆ ಗ್ರಾಮೀಣ ಕಾಂಗ್ರೆಸ್ ಮುಖಂಡ ಅಂತೋನಿ ಮಿರಾಂದಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ