ಕಾರ್ಕಳದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಯತ್ನ; ರಿಕ್ಷಾ ಚಾಲಕನ ಬಂಧನ

Date:

spot_img
arrested

ಕಾರ್ಕಳ : ಶಾಲೆಯಿಂದ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಗಂಭೀರ ಪ್ರಕರಣವೊಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ರಿಕ್ಷಾ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಬೋಳ ನಿವಾಸಿ ಅಮರನಾಥ್ ಪೂಜಾರಿ (31) ಎಂದು ಗುರುತಿಸಲಾಗಿದೆ. 16 ವರ್ಷದ ಬಾಲಕಿಯು ಫೆ. 25 ರಂದು ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ, ಪರಿಚಿತ ರಿಕ್ಷಾ ಚಾಲಕ ಅಮರನಾಥ್ ಮನೆಗೆ ಬಿಡುವುದಾಗಿ ನಂಬಿಸಿ ಆಕೆಯನ್ನು ತನ್ನ ವಾಹನದಲ್ಲಿ ಹತ್ತಿಸಿಕೊಂಡಿದ್ದಾನೆ. ಜನರಿಲ್ಲದ ನಿರ್ಜನ ಪ್ರದೇಶದ ದಾರಿ ಮಧ್ಯೆ ರಿಕ್ಷಾ ನಿಲ್ಲಿಸಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ. ಈ ವೇಳೆ ಸಮಯಪ್ರಜ್ಞೆ ಮೆರೆದ ಬಾಲಕಿ ಆತನಿಂದ ಹೇಗೋ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಸ್ಥರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಫೆ. 26 ರಂದು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿರುವ ಈ ಘಟನೆ ಸ್ಥಳೀಯವಾಗಿ ಆಕ್ರೋಶಕ್ಕೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಲಾ-ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಯು.ಟಿ. ಖಾದರ್ ಎಚ್ಚರಿಕೆ

ರಾಜ್ಯದ ಎಲ್ಲಾ ಶಾಲೆ ಮತ್ತು ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲು ಸರ್ಕಾರ ತೀರ್ಮಾನಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಗುಳಗಳು ಅಶ್ಲೀಲತೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ಬೈಗುಳಗಳು ಕಾನೂನಿನ ಪ್ರಕಾರ ಅಶ್ಲೀಲತೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೂಡಬಿದಿರೆಯಲ್ಲಿ ವಿವಾಹಿತೆ ಆತ್ಮಹತ್ಯೆ | ಕಾರಣದ ಪತ್ತೆಗೆ ಪೊಲೀಸ್ ತನಿಖೆ

ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಕಾಂಗ್ರೆಸ್ ನಾಟಕಕ್ಕೆ ಬಿಜೆಪಿ ತಿರುಗೇಟು

ಕಾರ್ಕಳದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರ ತೀಕ್ಷ್ಣ ರಾಜಕೀಯ ತಿರುಗೇಟಿನ ಪೂರ್ಣ ಮಾಹಿತಿ ಇಲ್ಲಿದೆ ಓದಿ.