ನಂದಳಿಕೆ : ಮೊಬೈಲ್ ಕೊಡಿಸದ ಕಾರಣಕ್ಕೆ ಮನನೊಂದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ; ಶೋಕಸಾಗರದಲ್ಲಿ ಕುಟುಂಬ

Date:

spot_img

ನಂದಳಿಕೆ: ಹೊಸ ಮೊಬೈಲ್ ಫೋನ್ ಕೊಡಿಸದ ಕಾರಣಕ್ಕೆ ನೊಂದು ನಿಟ್ಟಿಯ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬರು ನವೆಂಬರ್ 13 ರಂದು ನೀರು ತುಂಬಿದ ಕಲ್ಲುಕೋರೆಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಂದಳಿಕೆಯಲ್ಲಿ ನಡೆದಿದೆ. ಮೃತರನ್ನು ನಂದಳಿಕೆಯ ನಿವಾಸಿ ಸುಮಂತ್ (16) ಎಂದು ಗುರುತಿಸಲಾಗಿದೆ.

ಹದಿಹರೆಯದ ಸುಮಂತ್‌ ಇತ್ತೀಚೆಗೆ ತಮ್ಮ ಮೊಬೈಲ್ ದುರಸ್ತಿಗೆ ನೀಡಿದ್ದರು. ಬಳಿಕ, ಹೊಸ ಮೊಬೈಲ್ ಫೋನ್ ಖರೀದಿಸಿಕೊಡುವಂತೆ ತಮ್ಮ ತಾಯಿ ಸುರೇಖಾ ಅವರಲ್ಲಿ ನಿರಂತರವಾಗಿ ಬೇಡಿಕೆ ಇಟ್ಟಿದ್ದರು. ತಾಯಿಯವರು ತಕ್ಷಣಕ್ಕೆ ಸಾಧ್ಯವಾಗದ ಕಾರಣ, ಕೆಲವೇ ತಿಂಗಳುಗಳಲ್ಲಿ ಹೊಸ ಫೋನ್ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ತಾಯಿಯ ಈ ಸಮಾಧಾನದ ಮಾತಿನಿಂದ ತೃಪ್ತನಾಗದ ಸುಮಂತ್ ತೀವ್ರವಾಗಿ ಮನನೊಂದು ಮನೆ ಬಿಟ್ಟು ತೆರಳಿದ್ದರು.

ಸುತ್ತಮುತ್ತಲ ಪ್ರದೇಶದಲ್ಲಿ ಹುಡುಕಾಟ ನಡೆಸಿದ ನಂತರ, ಯುವಕ ನೀರು ತುಂಬಿದ್ದ ಕಲ್ಲುಕೋರೆಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ. ಮಗನ ಈ ಕಠಿಣ ನಿರ್ಧಾರದಿಂದ ತಾಯಿ ಸುರೇಖಾ ತೀವ್ರ ದುಃಖದಲ್ಲಿದ್ದಾರೆ.

ಕೆಲವು ವರ್ಷಗಳ ಹಿಂದೆ ಸುಮಂತ್‌ರ ತಂದೆ ಮಂಜುನಾಥ್ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಸುಮಂತ್ ತಾಯಿಯ ಏಕೈಕ ಮಗನಾಗಿದ್ದನು. ಮಗನ ಈ ದುರಂತ ಸಾವಿನಿಂದಾಗಿ ಆ ಕುಟುಂಬ ಶೋಕದ ಮಡುವಿನಲ್ಲಿ ಮುಳುಗಿದೆ. ಇಂತಹ ಸಣ್ಣ ಕಾರಣಕ್ಕೆ ಯುವಕ ಬಲಿಯಾಗಿರುವುದು ಸ್ಥಳೀಯರಲ್ಲಿ ದುಃಖ ಮತ್ತು ಆತಂಕವನ್ನು ಮೂಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ