
ಕಾರ್ಕಳ: ಇತ್ತೀಚೆಗಷ್ಟೇ ವಿವಾದಿತ ಪರಶುರಾಮ ಥೀಮ್ ಪಾರ್ಕ್ನ ಕಟ್ಟಡದ ಮೇಲ್ಛಾವಣಿಯ ತಾಮ್ರದ ಶೀಟ್ಗಳು ಕಳವಾಗಿದ್ದವು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಕಳುವಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಈ ನಡುವೆ ಸಂತೋಷ್ ದೇವಾಡಿಗ ಎಂಬ ವ್ಯಕ್ತಿ ತನ್ನ ಫೇಸ್ಬುಕ್ ಖಾತೆಯಲ್ಲಿ ಈ ಕಳ್ಳತನದ ಹಿಂದೆ ಆರ್ಎಸ್ಎಸ್ (RSS) ಕಾರ್ಯಕರ್ತನ ಕೈವಾಡವಿದೆ ಎಂಬ ಅರ್ಥ ಬರುವಂತಹ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದನು.
“ಪರಶುರಾಮ ಥೀಮ್ ಪಾರ್ಕ್ ಕಳ್ಳತನಕ್ಕೆ ಟ್ವಿಸ್ಟ್, ಕಟ್ಟಡದೊಳಗಿನ ಎಲೆಕ್ಟ್ರಿಕಲ್ ಉಪಕರಣಗಳನ್ನು ಆರ್ಎಸ್ಎಸ್ ಕಾರ್ಯಕರ್ತನೇ ಎಗರಿಸಿದ್ದಾನೆ” ಎಂಬ ಬರಹವಿರುವ ಫೋಟೋವನ್ನು ಆತ ವೈರಲ್ ಮಾಡಿದ್ದನು. ಈ ಪೋಸ್ಟ್ ಸಮಾಜದಲ್ಲಿ ಧಾರ್ಮಿಕ ಮತ್ತು ರಾಜಕೀಯ ಸಂಘರ್ಷಕ್ಕೆ ಪ್ರಚೋದನೆ ನೀಡುವಂತಿದೆ ಹಾಗೂ ಶಾಂತಿ ಕದಡುವ ದುರುದ್ದೇಶ ಹೊಂದಿದೆ ಎಂದು ಆರೋಪಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡಿಸಿ ರಾಜಕೀಯ ಲಾಭ ಪಡೆಯಲು ಈ ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.



































