spot_img

ಕಾರ್ಕಳದಲ್ಲಿ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

Date:

ಕಾರ್ಕಳ : ಲೋಕಸಭಾ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಚರಿಸಲಾಯಿತು.

ಕಾರ್ಕಳದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಮತ್ತು ಕಾರ್ಕಳ ಜರಿಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಸುರಕ್ಷಾ ವೃದ್ಧಾಶ್ರಮಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಅವರು ಮಾತನಾಡಿ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಹಣ್ಣುಹಂಪಲು ವಿತರಣೆಯ ಮೂಲಕ ಆಚರಿಸಿರುವುದು ಅರ್ಥಪೂರ್ಣವಾಗಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾಂಗ್ರೆಸ್ ಸಿದ್ದಾಂತದಂತೆ ಇಂದು ಆಸ್ಪತ್ರೆ ಹಾಗೂ ವೃದ್ದಾಶ್ರಮದಲ್ಲಿರುವವರಿಗೆ ಹಣ್ಣುಹಂಪಲು ನೀಡಿ ಕುಟುಂಬದವರ ಪ್ರೀತಿಯನ್ನು ಹಂಚಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಆಚಾರ್ಯ ಇನ್ನಾ, ಮಂಜುನಾಥ ‌ಜೋಗಿ, ಗ್ಯಾರಂಟಿ ಸಮಿತಿಯ ಸದಸ್ಯರಾದ ಸಂತೋಷ್ ದೇವಾಡಿಗ ಬೋಳ, ಡೇರಲ್, ಬಿ.ಸುದರ್ಶನ್ ಬಂಗೇರ, ಶರತ್, ದೀಪಕ್ ಶೆಟ್ಟಿ ದೊಂಡೆರಂಗಡಿ, ಶಶಿಧರ್ ಶಾಮ ಹವಾಲ್ದಾರ್ ಬೆಟ್ಟು , ಸುರಕ್ಷಾ, ಪುರಸಭಾ ಸದಸ್ಯ ಶಿವಾಜಿ ರಾವ್ ಹಾಗೂ ನಾಗೇಶ್ ಹೆಗ್ಡೆ ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಭೀರ್ ಮಿಯ್ಯಾರು ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಥಗ್ ಲೈಫ್ ಬಿಡುಗಡೆಗೆ ಸುಪ್ರೀಂ ಹಸಿರು ನಿಶಾನೆ: ಭದ್ರತೆಯ ಭರವಸೆ ನೀಡಿದ ರಾಜ್ಯ ಸರ್ಕಾರ

ಕಮಲ್ ಹಾಸನ್ ಅಭಿನಯದ ವಿವಾದಾತ್ಮಕ "ಥಗ್ ಲೈಫ್" (Thug Life) ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ಎಚ್ಚರಿಸಿ, ಚಿತ್ರದ ಬಿಡುಗಡೆಗೆ ಅವಕಾಶ ನೀಡಬೇಕೆಂದು ಸೂಚನೆ ನೀಡಿತ್ತು.

ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ಸುಲಿಗೆ ಯತ್ನ: 13 ಲಕ್ಷ ಫಾಲೋವರ್‌ಗಳ ಇನ್‌ಫ್ಲುಯೆನ್ಸರ್ ಕೀರ್ತಿ ಪಟೇಲ್ ಕೊನೆಗೂ ಬಂಧನ

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಕೀರ್ತಿ ಪಟೇಲ್, ಇನ್‌ಸ್ಟಾಗ್ರಾಂನಲ್ಲಿ 13 ಲಕ್ಷಕ್ಕೂ ಹೆಚ್ಚು ಫಾಲೋವರ್‌ಗಳಿರುವ ವ್ಯಕ್ತಿ, ಹನಿಟ್ರ್ಯಾಪ್ ಮೂಲಕ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ್ದ ಆರೋಪದಂತೆ ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಸರ್ವೆಯರ್ ಹಾಗೂ ದಲ್ಲಾಳಿ ಬಂಧನ

ಮಂಗಳೂರಿನಲ್ಲಿ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಸಿದ್ಧಪಡಿಸುವ ಸಂದರ್ಭ ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಹೆಡ್ ಕಾನ್ಸ್ಟೇಬಲ್ ರಶೀದ್ ಸೇರಿ ಮಂಗಳೂರು ಕಮಿಷನರೇಟ್‌ಲ್ಲಿ 56 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆ

ಕೋಮು ಸೌಹಾರ್ಧತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.