spot_img

ಕಾರ್ಕಳದ ಮುಂಡ್ಲಿ ಯಕ್ಷಗಾನ ನಿರ್ಬಂಧ ಪ್ರಕರಣ: ಆಯೋಜಕರ ವಿರುದ್ಧದ ದೂರಿಗೆ ಹೈಕೋರ್ಟ್ ತಡೆ!

Date:

spot_img
  • ಕಾರ್ಕಳದ ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ಪ್ರಕರಣ
  • ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ನಿಂದ ತಡೆ
  • ನ್ಯಾಯವಾದಿ ಮಹೇಂದ್ರ ಎಸ್. ಎಸ್. ಬೆಂಗಳೂರು ವಾದಕ್ಕೆ ಜಯ

ಕಾರ್ಕಳ : ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜಾರ್ಕಳ ಮುಂಡ್ಲಿ ಎಂಬಲ್ಲಿ ಜ. 14ರಂದು ಶ್ರೀ ಈಶ್ವರ ಯಕ್ಷಗಾನ ಸಂಘದ ನೇತೃತ್ವದಲ್ಲಿ ನಡೆಯುತ್ತಿದ್ದ ಯಕ್ಷಗಾನ ಆಯೋಜನೆಗೆ ಪಂಚಾಯತ್‌ ಪಿಡಿಓ ಅವರಿಂದ ಹಾಗೂ ಧ್ವನಿವರ್ದಕ ಬಳಕೆಗೆ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆದಿಲ್ಲ ಎಂದು ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ಸ್ಥಳೀಯ ವ್ಯಕ್ತಿಯಿಂದ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ ತಡೆ ನೀಡಿದೆ.

ಶ್ರೀ ಈಶ್ವರ ಯಕ್ಷಗಾನ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ, ಅಜೆಕಾರು ಮಹಾಲಕ್ಷ್ಮೀ ಸೌಂಡ್ಸ್‌ ಮಾಲಕ ಅಪ್ಪು ನಾಯಕ್‌, ಮನೋಜ್‌ ಶೆಟ್ಟಿ, ಪ್ರಜ್ವಲ್‌ ಜೈನ್‌ ಹಾಗೂ ಆದರ್ಶ ಜೈನ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಜು. 22ರಂದು ಹೈಕೋರ್ಟ್‌ ಪ್ರಕರಣಕ್ಕೆ ತಾತ್ಕಾಲಿಕವಾಗಿ ತಡೆ ನೀಡಿದೆ. ಹೈಕೋರ್ಟ್‌ನಲ್ಲಿ ನ್ಯಾಯವಾದಿ ಮಹೇಂದ್ರ ಎಸ್. ಎಸ್. ಬೆಂಗಳೂರು ವಾದ ಮಂಡಿಸಿದ್ದರು.

ಜ. 14ರಂದು ರಾತ್ರಿ ಮುಂಡ್ಲಿ ಗ್ರಾಮದಲ್ಲಿ ಶ್ರೀ ಈಶ್ವರ ಯಕ್ಷಗಾನ ಸಂಘದ ನೇತೃತ್ವದಲ್ಲಿ ಯಕ್ಷಗಾನ ಪ್ರದರ್ಶನವಾಗುತ್ತಿತ್ತು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಅಜೆಕಾರು ಠಾಣಾ ಪೊಲೀಸರು ಕಾರ್ಯಕ್ರಮ ಆಯೋಜನೆಗೆ ಮತ್ತು ಧ್ವನಿವರ್ಧಕಕ್ಕೆ ಅನುಮತಿ ಪಡೆದಿಲ್ಲವಾದ್ದರಿಂದ ಯಕ್ಷಗಾನವನ್ನು ನಿಲ್ಲಿಸುವಂತೆ ಸೂಚಿಸಿದ್ದರು. ಈ ವೇಳೆ ಗ್ರಾಮಸ್ಥರು ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದರು. ಪ್ರತಿಕ್ರಿಯಿಸಿದ ಪೊಲೀಸ್ ಉಪನಿರೀಕ್ಷಕ ಶುಭಕರ ಅವರು ನಾವು ಮೇಲಾಧಿಕಾರಿಗಳ ಆದೇಶದಂತೆ ಆಗಮಿಸಿದ್ದೇವೆ. ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದಿಲ್ಲವಾದ್ದರಿಂದ ಯಕ್ಷಗಾನ ನಿಲ್ಲಿಸಬೇಕು ಎಂದಿದ್ದರು. ಯಾವುದೇ ಗೊಂದಲವಿಲ್ಲದೆ ಸಾಮರಸ್ಯದಿಂದ ಈ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದೆ. ಅಲ್ಲದೆ ಎಫ್‌ಐಆರ್‌ ಆಗದೇ ಹೇಗೆ ನಿಲ್ಲಿಸುತ್ತೀರಿ ಎಂದು ಗ್ರಾಮಸ್ಥರು ಪೊಲೀಸರನ್ನು ಪ್ರಶ್ನಿಸಿದಾಗ ಎಫ್‌ಐಆರ್‌ ಮಾಡಿಕೊಂಡು ಬರುವುದಾಗಿ ಪೊಲೀಸರು ಸ್ಥಳದಿಂದ ನಿರ್ಗಮಿಸಿದ್ದರು. ಆ ಬಳಿಕ ಐದು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಈ ಹಿಂದೆ ವಿಧಾನಸಭಾ ಅಧಿವೇಶನ ಸಂದರ್ಭದಲ್ಲಿ ಕಾರ್ಕಳ ಶಾಸಕರಾದ ಶ್ರೀ ವಿ. ಸುನಿಲ್‌ ಕುಮಾರ್‌ ಅವರು ಯಕ್ಷಗಾನ ಮತ್ತು ಇತರ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ಇರುವ ಕಾನೂನುಗಳನ್ನು ಸರಳೀಕರಣಗೊಳಿಸಬೇಕೆಂದು ಮಾನ್ಯ ಗೃಹ ಸಚಿವರ ಗಮನ ಸೆಳೆದಿದ್ದರು. ಆಗ ಇದು ರಾಜ್ಯವ್ಯಾಪಿ ಸುದ್ದಿಯಾಗಿತ್ತು.

ರಾಜಕೀಯ ಪ್ರೇರಿತ ಓರ್ವ ವ್ಯಕ್ತಿ ಗ್ರಾಮದ ಕಾರ್ಯಕ್ರಮ ಹಾಳು ಮಾಡಲು ಪೊಲೀಸರಿಗೆ ದೂರು ನೀಡಿದ್ದರು ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಆದರೆ, ಇಂದು ಆರೋಪಿತರು ಎಂದು ಬಿಂಬಿಸಲಾಗಿದ್ದವರಿಗೆ ನ್ಯಾಯಾಲಯದಿಂದ ಸ್ಟೇ ದೊರೆತಿರುವುದು ಕರಾವಳಿಯ ಗಂಡು ಕಲೆಗೆ ದೊರೆತಿರುವ ಜಯ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.

ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರದ ಪ್ರಯುಕ್ತ ಇಂದಿನಿಂದ ಆರಂಭಗೊಂಡ ಅಷ್ಟಮಂಗಲ ಪ್ರಶ್ನಾ ಚಿಂತನೆ

ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.

ಕಮಲ್ ಹಾಸನ್ ರಾಜ್ಯಸಭೆ ಪ್ರವೇಶ: ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕಾರ!

ಬಹುಭಾಷಾ ನಟ ಕಮಲ್ ಹಾಸನ್ ಅವರು ಶುಕ್ರವಾರ (ಜುಲೈ 25) ಮೊದಲ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಿದ್ದು, ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮದ್ಯ, ತಂಬಾಕು, ತಂಪು ಪಾನೀಯಗಳ ಬೆಲೆ ಶೇ.50ರಷ್ಟು ಹೆಚ್ಚಳಕ್ಕೆ WHO ಕರೆ: ಕುಡುಕರಿಗೆ ಮತ್ತೊಂದು ಶಾಕ್!

ಕರ್ನಾಟಕದಲ್ಲಿ ಮದ್ಯದ ಬೆಲೆ ಈಗಾಗಲೇ ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ ಎರಡು ವರ್ಷಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳವಾಗಿದ್ದು, ಬಿಯರ್ ದರವೂ ಏರಿಕೆಯಾಗಿದೆ.