spot_img

ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ, ಪದವಿ ಹೊಂದದ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗ ಮಾಡಲು ಸರ್ಕಾರ ಅನುಮತಿ

Date:

spot_img

ಕಲಬುರ್ಗಿ: ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 04-02-2008ರ ನಂತರ ನೇಮಕಗೊಂಡು ಅನುದಾನಕ್ಕೆ ಒಳಪಟ್ಟ 364 ಬಿ.ಇಡಿ ಪದವಿ ಹೊಂದದ್ದ ಉಪನ್ಯಾಸಕರು ವೇತನ ಸಹಿತ ವ್ಯಾಸಂಗ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ತನುಮತಿ ನೀಡಿ ಆದೇಶ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹಾಗೂ ಹರ್ಷ ವ್ಯಕ್ತಪಡಿಸಿದ್ದಾರೆ.


ಈ ಒಂದು ಆದೇಶದಿಂದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ ರಹಿತವಾಗಿ ಕಾರ್ಯನಿರ್ವಹಿಸುತ್ತಿರುವ 364 ಉಪನ್ಯಾಸಕರು ನಿಟ್ಟುಸಿರು ಬಿಡುವಂತಾಗಿದೆ ಎಂದು ಅಭಿಪ್ರಾಯಪಟ್ಟರು ಉಪನ್ಯಾಸಕರಾಗಿ ಸುಮಾರು 15 ವರ್ಷ ಸೇವೆ ಸಲ್ಲಿಸಿ ತದನಂತರ ವೇತನ ರಹಿತವಾಗಿ 2 ವರ್ಷ ಬಿ.ಇಡಿ ಪದವಿ ವ್ಯಾಸಂಗಕ್ಕೆ ಹೋಗುವುದೆಂದರೆ ಅವರ ಇಡೀ ಕುಟುಂಬವನ್ನು ಅರ್ಥಿಕ ದುಸ್ಥಿತಿಗೆ ತಳ್ಳಿದಂತಾಗುತ್ತಿತ್ತು ಮತ್ತು ಇದು ಅಸಾಧ್ಯವಾದ ಮಾತಾಗಿತ್ತು. ಈ ಎಲ್ಲ ಸಮಸ್ಯೆಗಳನ್ನು ಪದವೀಧರ ಮತಕ್ಷೇತ್ರ ಮತ್ತು ಶಿಕ್ಷಕರ ಮತಕ್ಷೇತ್ರಗಳಿಂದ ಆಯ್ಕೆಯಾದ ಎಲ್ಲಾ ವಿಧಾನ ಪರಿಷತ್ ಸದಸ್ಯರು ಹಾಗೂ ಉಪನ್ಯಾಸಕರ ಸಂಘಟನೆಯವರು ಮುಖ್ಯಮಂತ್ರಿಗಳ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಇಲಾಖೆ ಸಚಿವರ ಗಮನಕ್ಕೆ ತಂದು ಒತ್ತಡ ಹೇರಿದ ಪರಿಣಾಮವಾಗಿ ಸರ್ಕಾರ ಈ ಒಳ್ಳೆಯ ನಿರ್ಣಯ ಕೈಗೊಂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು
ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ. ಪದವಿ ಹೊಂದದೆ ನೇಮಕಗೊಂಡ ಉಪನ್ಯಾಸಕರಿಗೆ 2 ಬ್ಯಾಚುಗಳಲ್ಲಿ ವೇತನ ಸಹಿತ ಬಿ. ಇಡಿ. ವ್ಯಾಸಂಗ ಕೈಗೊಳ್ಳಲು ಅನುಮತಿ ನೀಡಿತ್ತು. ಆದಾದ ನಂತರ ಜೆ.ಓ.ಸಿ. ಕೋರ್ಸ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ.ಇಡಿ ರಹಿತ ಉಪನ್ಯಾಸಕರಿಗೂ ಕೂಡ ವೇತನ ಸಹಿತ ವ್ಯಾಸಂಗ ಮಾಡಿಕೊಂಡು ಬರಲು ಅನುಮತಿ ನೀಡಿದ ಮಾದರಿಯಲ್ಲಿಯೇ ಸರ್ಕಾರ ಈಗ ಅದೇ ಮಾದರಿಯಲ್ಲಿ ಆದೇಶ ಹೊರಡಿಸಿರುವುದು ಉಪನ್ಯಾಸಕರಿಗೆ ಸಂತಸ ತಂದಿದೆ ಎಂದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಮೆರಿಕಾದ ಅಂತರರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಯ್ಕೆ!

ಅಮೆರಿಕಾದ ಬೋಸ್ಟನ್‌ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಬೈಲೂರು ಪರಶುರಾಮ ಥೀಮ್ ಪಾರ್ಕ್ ಸ್ಥಗಿತಗೊಂಡ ಕಾಮಗಾರಿ ಯಾವಾಗ ? : ಸುಮಿತ್ ಶೆಟ್ಟಿ ಕೌಡೂರು

ಬೈಲೂರಿನ ಉಮಿಕ್ಕಲ್ ಬೆಟ್ಟದ ಮೇಲೆ ನಿರ್ಮಾಣವಾಗುತ್ತಿದ್ದ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್‌ನ ಕಾಮಗಾರಿಯು ಸ್ಥಗಿತಗೊಂಡಿರುವ ಕುರಿತು ಜಿ.ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಳೆದ 5 ವರ್ಷಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಭಾರತೀಯರಿಂದ ಪೌರತ್ವ ತ್ಯಾಗ! : ವಿದೇಶಾಂಗ ಸಚಿವರಿಂದ ಮಾಹಿತಿ

ಕಳೆದ ಐದು ವರ್ಷಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.

ಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.