ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ, ಪದವಿ ಹೊಂದದ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗ ಮಾಡಲು ಸರ್ಕಾರ ಅನುಮತಿ

Date:

spot_img

ಕಲಬುರ್ಗಿ: ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 04-02-2008ರ ನಂತರ ನೇಮಕಗೊಂಡು ಅನುದಾನಕ್ಕೆ ಒಳಪಟ್ಟ 364 ಬಿ.ಇಡಿ ಪದವಿ ಹೊಂದದ್ದ ಉಪನ್ಯಾಸಕರು ವೇತನ ಸಹಿತ ವ್ಯಾಸಂಗ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ತನುಮತಿ ನೀಡಿ ಆದೇಶ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹಾಗೂ ಹರ್ಷ ವ್ಯಕ್ತಪಡಿಸಿದ್ದಾರೆ.


ಈ ಒಂದು ಆದೇಶದಿಂದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ ರಹಿತವಾಗಿ ಕಾರ್ಯನಿರ್ವಹಿಸುತ್ತಿರುವ 364 ಉಪನ್ಯಾಸಕರು ನಿಟ್ಟುಸಿರು ಬಿಡುವಂತಾಗಿದೆ ಎಂದು ಅಭಿಪ್ರಾಯಪಟ್ಟರು ಉಪನ್ಯಾಸಕರಾಗಿ ಸುಮಾರು 15 ವರ್ಷ ಸೇವೆ ಸಲ್ಲಿಸಿ ತದನಂತರ ವೇತನ ರಹಿತವಾಗಿ 2 ವರ್ಷ ಬಿ.ಇಡಿ ಪದವಿ ವ್ಯಾಸಂಗಕ್ಕೆ ಹೋಗುವುದೆಂದರೆ ಅವರ ಇಡೀ ಕುಟುಂಬವನ್ನು ಅರ್ಥಿಕ ದುಸ್ಥಿತಿಗೆ ತಳ್ಳಿದಂತಾಗುತ್ತಿತ್ತು ಮತ್ತು ಇದು ಅಸಾಧ್ಯವಾದ ಮಾತಾಗಿತ್ತು. ಈ ಎಲ್ಲ ಸಮಸ್ಯೆಗಳನ್ನು ಪದವೀಧರ ಮತಕ್ಷೇತ್ರ ಮತ್ತು ಶಿಕ್ಷಕರ ಮತಕ್ಷೇತ್ರಗಳಿಂದ ಆಯ್ಕೆಯಾದ ಎಲ್ಲಾ ವಿಧಾನ ಪರಿಷತ್ ಸದಸ್ಯರು ಹಾಗೂ ಉಪನ್ಯಾಸಕರ ಸಂಘಟನೆಯವರು ಮುಖ್ಯಮಂತ್ರಿಗಳ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಇಲಾಖೆ ಸಚಿವರ ಗಮನಕ್ಕೆ ತಂದು ಒತ್ತಡ ಹೇರಿದ ಪರಿಣಾಮವಾಗಿ ಸರ್ಕಾರ ಈ ಒಳ್ಳೆಯ ನಿರ್ಣಯ ಕೈಗೊಂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು
ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ. ಪದವಿ ಹೊಂದದೆ ನೇಮಕಗೊಂಡ ಉಪನ್ಯಾಸಕರಿಗೆ 2 ಬ್ಯಾಚುಗಳಲ್ಲಿ ವೇತನ ಸಹಿತ ಬಿ. ಇಡಿ. ವ್ಯಾಸಂಗ ಕೈಗೊಳ್ಳಲು ಅನುಮತಿ ನೀಡಿತ್ತು. ಆದಾದ ನಂತರ ಜೆ.ಓ.ಸಿ. ಕೋರ್ಸ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ.ಇಡಿ ರಹಿತ ಉಪನ್ಯಾಸಕರಿಗೂ ಕೂಡ ವೇತನ ಸಹಿತ ವ್ಯಾಸಂಗ ಮಾಡಿಕೊಂಡು ಬರಲು ಅನುಮತಿ ನೀಡಿದ ಮಾದರಿಯಲ್ಲಿಯೇ ಸರ್ಕಾರ ಈಗ ಅದೇ ಮಾದರಿಯಲ್ಲಿ ಆದೇಶ ಹೊರಡಿಸಿರುವುದು ಉಪನ್ಯಾಸಕರಿಗೆ ಸಂತಸ ತಂದಿದೆ ಎಂದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ