spot_img

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘವು ಲಾಭದತ್ತ ಆರ್ಥಿಕ ಸಾಲಿನಲ್ಲಿ ರೂ.60.66 ಲಕ್ಷ ನಿವ್ವಳ ಲಾಭಗಳಿಸಿದೆ

Date:

spot_img

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘವು 2024-25 ನೇ ಸಾಲಿನಲ್ಲಿ 175.33 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿದ್ದು ಕಳೆದ ಸಾಲಿಗಿಂತ ಶೇ. 19.16 ಏರಿಕೆ ಕಂಡಿದೆ. 60.66 ಲಕ್ಷ ರೂ. ಲಾಭ ಗಳಿಸಿದೆ. ಎಂದು ಸಂಘದ ಅಧ್ಯಕ್ಷ ಶ್ರೀ ಸಂತೋಷ್ ರಾವ್ ಇವರು ತಿಳಿಸಿದ್ದಾರೆ. 24 ವರ್ಷಗಳಿಂದ ಸೇವೆ ನೀಡುತೀರುವ ಸಹಕಾರ ಸಂಘವು 2024- 25ರ ಆರ್ಥಿಕ ವರ್ಷಾಂತ್ಯಕ್ಕೆ 14957 ಸದಸ್ಯರಿಂದ 33.03 ಲಕ್ಷ ರೂ ಬಂಡವಾಳ ಹೊಂದಿದೆ ಎಂದು ಸಂಘದ ಅಧ್ಯಕ್ಷರು ಮಾಹಿತಿ ನೀಡಿರುತ್ತಾರೆ.

ಸಂಘವು ಒಟ್ಟು 38.45 ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು ಕಳೆದ ಸಾಲಿಗಿಂತ ಶೇ. 30.01 ಏರಿಕೆಯಾಗಿದೆ. ಸದಸ್ಯರಿಗೆ ಎಲ್ಲಾ ರೀತಿಯ ಸಾಲ ವಿತರಿಸುತ್ತಿದ್ದು 31.82 ಕೋಟಿ ರೂ. ಸಾಲ (ಹೊರ ಬಾಕಿ) ನೀಡಲಾಗಿದೆ. ಕಳೆದ ಸಾಲಿಗಿಂತ ಶೇ. 24.43 ಏರಿಕೆ ಕಂಡಿದೆ. 3.18 ಕೋಟಿ ರೂ. ನಿಧಿಗಳು 5.50 ಕೋಟಿ ರೂ. ಹೂಡಿಕೆಗಳಿದ್ದು 44.13 ಕೋಟಿ ರೂ. ದುಡಿಯುವ ಬ೦ಡವಾಳ ಹೊಂದಿದ್ದು ಕಳೆದ ಸಾಲಿಗಿಂತ ಶೇ. 27.43 ಏರಿಕೆ ಕಂಡಿದೆ. ಒಟ್ಟು 8 ಶಾಖೆಗಳನ್ನು ಹೊಂದಿದ್ದು ಈ ಪೈಕಿ ಕೇಂದ್ರ ಕಛೇರಿ ಮತ್ತು ಮುಖ್ಯ ಶಾಖೆ ಸ್ವಂತ ಕಛೇರಿ ಹೊಂದಿದ್ದು ವಾರ್ಷಿಕ ಸುಮಾರು 3 ಲಕ್ಷ ರೂ. ಗಳಷ್ಟು ಹಣವನ್ನು ಸಾಮಾಜಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾತಿದೆ ಎಂದು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮನೆಗೆಲಸದವಳ ಮೇಲೆ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯದಿಂದ ಕಠಿಣ ಶಿಕ್ಷೆ

ಮನೆಗೆಲಸದವಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ತೀರ್ಮಾನಿಸಿದೆ.

ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಗಸ್ಟ್ 12 ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಮುದ್ರಾಡಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಬಜಗೋಳಿ ಸಿ. ಆರ್. ಪಿ. ಕೃಷ್ಣಕುಮಾರ್ ಅವರು ಮುದ್ರಾಡಿಯ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಪರಶುರಾಮ ಥೀಮ್ ಪಾಕ್: ವಿವಿಧ ಹಂತದ ಹೋರಾಟ, ಜನಜಾಗೃತಿಗೆ ಬಿಜೆಪಿ ನಿರ್ಧಾರ; ತಾಲೂಕು, ಜಿಲ್ಲೆ, ರಾಜ್ಯಮಟ್ಟ ಮೂರು ಹಂತದಲ್ಲಿ ಹೋರಾಟಕ್ಕೆ ಸಿದ್ಧತೆ

ಮಾಜಿ ಸಚಿವ, ಶಾಸಕರಾದ ವಿ.ಸುನಿಲ್ ಕುಮಾರ್ ಅವರು ಕಾರ್ಕಳದ ವಿಕಾಸ ಕಚೇರಿಯಲ್ಲಿ ಶನಿವಾರ ನಡೆದ ಹೋರಾಟದ ರೂಪುರೇಷಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.