spot_img

ಗ್ರಾ.ಪಂ., ತಾ.ಪಂ., ಜಿ.ಪಂ.ಗಳಿಗೆ ಇನ್ಮುಂದೆ ಪ್ರತ್ಯೇಕ ಲಾಂಛನ, ಮೊಹರು: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!

Date:

spot_img

ಬೆಂಗಳೂರು: ಕರ್ನಾಟಕದ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ಗಳು ಇನ್ನು ಮುಂದೆ ತಮ್ಮದೇ ಆದ ಪ್ರತ್ಯೇಕ ಲಾಂಛನ (ಲೋಗೋ) ಮತ್ತು ಮೊಹರು (ಸೀಲ್) ಹೊಂದಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಇರುವಂತೆಯೇ, ಸ್ಥಳೀಯ ಸ್ವಾಯತ್ತ ಸರ್ಕಾರಗಳು ಎಂಬ ನೆಲೆಯಲ್ಲಿ ಪಂಚಾಯತ್‌ಗಳಿಗೂ ಪ್ರತ್ಯೇಕ ಲಾಂಛನ ಬೇಕು ಎಂಬ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಗ್ರಾಮೀಣ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್‌ಗಳಿಗೆ ಇದುವರೆಗೆ ಒಂದೇ ರೀತಿಯ ಗುರುತು ಇತ್ತು.

ಕಾನೂನು ಬದ್ಧತೆ ಮತ್ತು ಉದ್ದೇಶ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 6ರಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿ ಸ್ವಾಯತ್ತ ಅಧಿಕಾರ ಹೊಂದಿದೆ. ಪಂಚಾಯಿತಿ ಶಾಶ್ವತ ಉತ್ತರಾಧಿಕಾರ ಹೊಂದಿರುವುದರಿಂದ ಪ್ರತ್ಯೇಕ ಲಾಂಛನ, ಮೊಹರು ಹೊಂದಲು ಅವಕಾಶ ನೀಡಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಂವಿಧಾನದ 73ನೇ ತಿದ್ದುಪಡಿ ಉದ್ದೇಶವನ್ನು ಈಡೇರಿಸಲು ಮತ್ತು ಜನರು ಗ್ರಾಮ ಸ್ವರಾಜ್‌ ಸ್ಥಳೀಯ ಸ್ವಯಂ ಆಡಳಿತದ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ.

ಈ ಮೂರು ಹಂತದ ಸಂಸ್ಥೆಗಳಾದ ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್‌ಗಳಿಗೆ ಅಧಿಕೃತ ಮುದ್ರೆ ಮತ್ತು ವಿನ್ಯಾಸದಲ್ಲಿ ಅರ್ಥಪೂರ್ಣವಾದ ಪ್ರತ್ಯೇಕ ಲಾಂಛನಗಳನ್ನು ತಯಾರಿಸಲಾಗಿದೆ. ಇದರ ಬಳಕೆಗೆ ಸಂಬಂಧಿಸಿದಂತೆ ಕೆಲವು ಮಾರ್ಗಸೂಚಿಗಳನ್ನು ಸಹ ಸರ್ಕಾರ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಾಳೆ ಕಾರ್ಕಳದಲ್ಲಿ ಅಲ್ಪ ಸಂಖ್ಯಾತರಿಗೆ ಮಾಹಿತಿ ಕಾರ್ಯಾಗಾರ!

ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರದ ವತಿಯಿಂದ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ನಾಳೆ (ಮಂಗಳವಾರ, ಜುಲೈ 8, 2025) ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಬೇವಿನ ಎಲೆಯ ಅದ್ಭುತ ಗುಣಗಳು: ಮೂತ್ರಪಿಂಡದ ಕಲ್ಲುಗಳಿಂದ ಮೊಡವೆ ನಿವಾರಣೆವರೆಗೆ!

ಪ್ರೋಟೀನ್, ವಿಟಮಿನ್-ಸಿ, ಕ್ಯಾರೋಟಿನ್ ಮತ್ತು ಆಂಟಿಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿರುವ ಬೇವಿನ ಎಲೆಗಳು ಹಲವು ರೋಗಗಳಿಗೆ ರಾಮಬಾಣವಾಗಿವೆ.

ಮಣಿಪಾಲದಲ್ಲಿ ದುರಂತ: ಮೂರ್ಛೆ ರೋಗದಿಂದ ಬೇಸತ್ತು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

ಮೂರ್ಛೆ ರೋಗದಿಂದ ಬಳಲುತ್ತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರದಲ್ಲಿ ನಡೆದಿದೆ.

ಜಲಪಾತದ ತುದಿಯಲ್ಲಿ ಪ್ರಪೋಸ್ ಮಾಡಲು ಹೋಗಿ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋದ ಯುವಕ : ವಿಡಿಯೋ ವೈರಲ್!

ತನ್ನ ಕನಸಿನ ಗೆಳತಿಗೆ ಜಲಪಾತದ ತುದಿಯಲ್ಲಿ ನಿಂತು ಪ್ರಪೋಸ್ ಮಾಡಲು ಪ್ರಯತ್ನಿಸುತ್ತಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.