
ಉಡುಪಿ: ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆ.ಪಿ.ಎಸ್.), ಹಿರಿಯಡಕದ ಪದವಿಪೂರ್ವ ಹಾಗೂ ಪ್ರೌಢಶಾಲಾ ವಿಭಾಗಗಳ ವಾರ್ಷಿಕ ಕ್ರೀಡಾಕೂಟ 2025 ಅನ್ನು ಗುರುವಾರ, ನವೆಂಬರ್ 20, 2025 ರಂದು ಆಯೋಜಿಸಲಾಗಿದೆ.
ಉದ್ಘಾಟನಾ ಸಮಾರಂಭ
ಪೂರ್ವಾಹ್ನ 9.30ಕ್ಕೆ ನಡೆಯಲಿರುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಶ್ರೀ ಮಂಜುನಾಥ ಭಟ್ ವಹಿಸಲಿದ್ದಾರೆ. ಹಿರಿಯಡಕ ಪೋಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಶ್ರೀ ಪುನೀತ್ ಕುಮಾರ್ ರವರು ಪಥಸಂಚಲನ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷರಾದ ಶ್ರೀ ಬಿ. ಎಲ್. ವಿಶ್ವಾಸ್ , ಶ್ರೀ ಸುಂದರ ಕಾಂಚನ್ ಉದ್ಯಮಿಗಳು – ಓಂತಿಬೆಟ್ಟು , ಹಳೆ ವಿದ್ಯಾರ್ಥಿ ಸಂಘ (ರಿ) ಕೆ.ಪಿ.ಎಸ್ ಹಿರಿಯಡಕದ ಅಧ್ಯಕ್ಷರಾದ ಶ್ರೀ ಎಚ್. ಶ್ರೀನಿವಾಸ ರಾವ್ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭ
ಅಪರಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಉಪಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕ್ರೀಡಾಪಟು ಹಾಗೂ ರಾಷ್ಟ್ರೀಯ ಪುರಸ್ಕೃತರಾದ ಶ್ರೀ ಬಾಬು ಶೆಟ್ಟಿ , ಅನ್ನಪ್ರಸಾದ ಸಮಿತಿ, ಪ.ಪೂ. ವಿಭಾಗದ ಅಧ್ಯಕ್ಷರಾದ ಶ್ರೀ ಅಶೋಕ್ ಜೋಗಿ , ಹಳೆ ವಿದ್ಯಾರ್ಥಿ ಸಂಘ (ರಿ) ಕೆ.ಪಿ.ಎಸ್ ಹಿರಿಯಡಕದ ಕಾರ್ಯದರ್ಶಿಗಳಾದ ಶ್ರೀ ಶರಶ್ಚಂದ್ರ ರವರು ಭಾಗವಹಿಸಲಿದ್ದಾರೆ.
ಈ ಕ್ರೀಡಾ ಸಂಭ್ರಮಕ್ಕೆ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ , ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಳೆ ವಿದ್ಯಾರ್ಥಿ ಸಂಘ (ರಿ) , ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಅಮೃತ ಮಹೋತ್ಸವ ಸಮಿತಿ , ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಣ ಶಿಕ್ಷಕರು, ಅಧ್ಯಾಪಕರು , ಸಿಬ್ಬಂದಿ ವರ್ಗ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಆದರದ ಸ್ವಾಗತವನ್ನು ಕೋರಿದೆ.













