ವಿದ್ಯಾರ್ಥಿಗಳ ಜನಿವಾರ ತೆಗೆಸಿ ಹಿಂದೂ ಧಾರ್ಮಿಕ ಭಾವನೆಗೆ ನಿಂದನೆ

Date:

spot_img

ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕ ಮಕಾಂದರ್ ಎಂಬುವವರು ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿ ಹಿಂದೂ ಧಾರ್ಮಿಕ ಭಾವನೆಗೆ ನಿಂದನೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಮಾಜಿಕ ಚಿಂತಕಿ ಶ್ರೀಮತಿ ರಮಿತಾ ಸೂರ್ಯವಂಶಿ ಅವರು ಶಿಕ್ಷಕರ ವಿರುದ್ಧ ಶೀಘ್ರ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಜನಿವಾರ ಪವಿತ್ರತೆಯ ಉಲ್ಲಂಘನೆ:

ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಮತಿ ರಮಿತಾ ಸೂರ್ಯವಂಶಿ ಅವರು, “ಹಿಂದೂ ಧರ್ಮದಲ್ಲಿ ಜನಿವಾರಕ್ಕೆ ತನ್ನದೇ ಆದ ಪವಿತ್ರತೆ ಮತ್ತು ಮಹತ್ವವಿದೆ. ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿರುವುದು ಹಿಂದೂ ಧಾರ್ಮಿಕ ಭಾವನೆಗಳಿಗೆ ಮಾಡಿದ ನೇರ ನಿಂದನೆಯಾಗಿದೆ” ಎಂದು ಖಂಡಿಸಿದ್ದಾರೆ.

ದೈಹಿಕ ಶಿಕ್ಷಕ ಮಕಾಂದರ್ ಅವರು, ಜನಿವಾರ ಧರಿಸಿದವರು ಕ್ರೀಡೆಯಲ್ಲಿ ಭಾಗವಹಿಸುವಂತಿಲ್ಲ ಎಂಬಂತಹ ವಿಚಿತ್ರ ಮಾನಸಿಕತೆಯನ್ನು ಚಿಕ್ಕ ಮಕ್ಕಳ ಮೇಲೆ ಹೇರಿ, ದರ್ಪ ತೋರಿಸಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿರುವುದು ಸರಿಯಲ್ಲ. ಇಂತಹ ನಡೆ ಖಂಡನೀಯ ಮತ್ತು ಅಕ್ಷಮ್ಯ ಎಂದು ಸೂರ್ಯವಂಶಿ ಹೇಳಿದ್ದಾರೆ.

ಜನಿವಾರದ ಮಹತ್ವ:

“ಜನಿವಾರವು ಹಿಂದೂ ಧರ್ಮದಲ್ಲಿ ಧರಿಸುವ ಅತ್ಯಂತ ಪವಿತ್ರವಾದ ದಾರವಾಗಿದೆ. ಇದು ಗಾಯತ್ರಿ ಮಂತ್ರವನ್ನು ಪಠಿಸುವ ಅರ್ಹತೆಯನ್ನು ಪಡೆಯುವುದರ ಸಂಕೇತವಾಗಿದೆ. ಇದರ ಮೂರು ಎಳೆಗಳು ಹಿಂದೂ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಮತ್ತು ಶಿವನನ್ನು ಪ್ರತಿನಿಧಿಸುತ್ತವೆ. ಇದು ಕೇವಲ ಧಾರ್ಮಿಕ ಸಂಕೇತ ಮಾತ್ರವಲ್ಲದೆ, ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೂ ಸಹಾಯಕ ಎಂದು ನಂಬಲಾಗಿದೆ” ಎಂದು ಅವರು ಜನಿವಾರದ ಮಹತ್ವವನ್ನು ವಿವರಿಸಿದರು.

ಇಂತಹ ಪವಿತ್ರ ನಂಬಿಕೆಗೆ ಅವಮಾನವಾಗುವ ಘಟನೆಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಶಿಕ್ಷಕರ ಈ ನಡೆಯು ಮಕ್ಕಳಿಗೆ ಧರ್ಮದ ಹೆಸರಿನಲ್ಲಿ ಮತಾಂಧ ನೀತಿಯನ್ನು ಹೇರಿದಂತೆ ಸಮಾಜಕ್ಕೆ ಭಾಸವಾಗುತ್ತಿದೆ. ಇಂತಹ ಶಿಕ್ಷಕರು ಶಿಕ್ಷಣ ಕ್ಷೇತ್ರಕ್ಕೆ ಅನರ್ಹರು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆದ್ದರಿಂದ, ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕ ಮಕಾಂದರ್ ಅವರ ಮೇಲೆ ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಶೀಘ್ರದಲ್ಲಿ ಸೂಕ್ತವಾದ ಮತ್ತು ಕಠಿಣವಾದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರೀಮತಿ ರಮಿತಾ ಸೂರ್ಯವಂಶಿ ಅವರು ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳನ್ನು ಒತ್ತಾಯಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.