spot_img

ಕಾಪು: ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಕ್ರೆಟಾ ಕಾರು ಹರಿದು ಸಾವು

Date:

spot_img
death1

ಕಾಪು : ಉಡುಪಿ ಜಿಲ್ಲೆಯ ಕಾಪು ಸಮೀಪ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ವೇಗವಾಗಿ ಬಂದ ಕ್ರೆಟಾ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಪೀರ್‌ ಮೊಹಮ್ಮದ್‌ ಎಂದು ಗುರುತಿಸಲಾಗಿದೆ.

ಈ ಘಟನೆ ಭಾನುವಾರ ಮಧ್ಯಾಹ್ನ 3:50ರ ಸುಮಾರಿಗೆ ಕಾಪು ಮೌಂಟ್ರಾ ಎಲೆಕ್ಟ್ರಿಕ್‌ ಆಟೋ ಶೋರೂಂ ಸಮೀಪ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ KA-19-MM-4595 ನಂಬರಿನ ಕಪ್ಪು ಬಣ್ಣದ ಕ್ರೆಟಾ ಕಾರು, ರಸ್ತೆಯ ಡಿವೈಡರ್ ತಲುಪುತ್ತಿದ್ದ ಪೀರ್‌ ಮೊಹಮ್ಮದ್‌ ಅವರಿಗೆ ಅತಿ ವೇಗ ಮತ್ತು ಅಜಾಗರೂಕತೆಯಿಂದ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಕಾರಿನ ಮುಂಬದಿಯ ಬಾನೆಟ್ ಮತ್ತು ಗಾಜಿಗೆ ತಗುಲಿ ರಸ್ತೆಗೆ ಬಿದ್ದ ಪೀರ್‌ ಮೊಹಮ್ಮದ್‌ ಅವರ ತಲೆ ಹಾಗೂ ದೇಹಕ್ಕೆ ಗಂಭೀರ ಪೆಟ್ಟಾಗಿತ್ತು. ಅವರನ್ನು ಕೂಡಲೇ ಸ್ಥಳೀಯರ ಸಹಾಯದಿಂದ ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದರು.

ಈ ಸಂಬಂಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೆಟ್ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು: ಗೂಗಲ್ ಪಿಕ್ಸೆಲ್ 10ನಲ್ಲಿ ಕ್ರಾಂತಿಕಾರಿ ತಂತ್ರಜ್ಞಾನ

ಗೂಗಲ್ ತನ್ನ ಹೊಸ ಪಿಕ್ಸೆಲ್ 10 ಸರಣಿಯಲ್ಲಿ ಕ್ರಾಂತಿಕಾರಿ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಈ ವೈಶಿಷ್ಟ್ಯದ ಮೂಲಕ ಫೋನ್‌ನಲ್ಲಿ ನೆಟ್‌ವರ್ಕ್‌ ಸಿಗ್ನಲ್ ಇಲ್ಲದಿದ್ದರೂ ಸಹ ಕರೆಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಕಂಪನಿ ತಿಳಿಸಿದೆ.

ಕಂಠೀರವ ಸ್ಟುಡಿಯೋದಲ್ಲಿ ನಡೆದ ಅನಿರೀಕ್ಷಿತ ಘಟನೆ: ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ನಟಿ ಮೇಲೆ ಲೈಂಗಿಕ ಕಿರುಕುಳ ಮತ್ತು ವಂಚನೆ ಆರೋಪ ಪ್ರಕರಣದಿಂದಾಗಿ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದ ನಟ ಮಡೆನೂರು ಮನು, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಬಳಿ ಕ್ಷಮೆಯಾಚಿಸಿದ್ದಾರೆ.

ಮುದ್ದೇಬಿಹಾಳದಲ್ಲಿ ನ್ಯಾಯಾಧೀಶರ ಮನೆಗೆ ಕನ್ನ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿರುವ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮನೆಗೆ ಕಳ್ಳರು ಕನ್ನ ಹಾಕಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

‘ಧರ್ಮಸ್ಥಳ ಪ್ರಕರಣಕ್ಕೆ ಎನ್‌ಐಎ ತನಿಖೆಯ ಅಗತ್ಯವಿಲ್ಲʼ: ಗೃಹ ಸಚಿವ ಪರಮೇಶ್ವರ್‌

ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ (NIA) ತನಿಖೆಯ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.