spot_img

ಕೆಂಪೇಗೌಡ ವಿಮಾನ ನಿಲ್ದಾಣ ಶಿಷ್ಟಾಚಾರ ದುರುಪಯೋಗ: ಐಎಎಸ್ ತನಿಖಾ ಗುಪ್ತ ವರದಿ ಸರ್ಕಾರಕ್ಕೆ ಸಲ್ಲಿಕೆ!

Date:

ಬೆಂಗಳೂರು: ನಟಿ ರನ್ಯಾ ರಾವ್‌ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೀಡಲಾದ ಶಿಷ್ಟಾಚಾರದ ಸೌಲಭ್ಯಗಳ ದುರುಪಯೋಗ ಕುರಿತು ಹಿರಿಯ ಅಧಿಕಾರಿ ಗೌರವ್ ಗುಪ್ತ ನೇತೃತ್ವದ ಐಎಎಸ್ ಅಧಿಕಾರಿಗಳ ತಂಡ ತನಿಖೆಯನ್ನು ಪೂರ್ಣಗೊಳಿಸಿದ್ದು, ಸೋಮವಾರ ಸರ್ಕಾರಕ್ಕೆ ತನ್ನ ಗುಪ್ತ ವರದಿಯನ್ನು ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.

100ಕ್ಕೂ ಹೆಚ್ಚು ಪುಟಗಳ ಈ ವರದಿಯಲ್ಲಿ ಡಿಜಿಪಿ ರಾಮಚಂದ್ರ ರಾವ್‌ಗೆ ನೀಡಲಾದ ಶಿಷ್ಟಾಚಾರ ಸೌಲಭ್ಯ ಉಲ್ಲಂಘನೆಯಾಗಿರುವುದು ನಿಜವೆಂದು ಪ್ರಸ್ತಾಪಿಸಲಾಗಿದೆ. ಅವರ ಪುತ್ರಿ ನಟಿ ರನ್ಯಾ ರಾವ್ ಇದನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸೇರಿದಂತೆ ಹಲವಾರು ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೌರವ್ ಗುಪ್ತ, ವರದಿಯ ವಿಷಯವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದೀಗ, ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ನಗರ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸೋಮವಾರ ನಡೆದ ವಿಚಾರಣೆಯಲ್ಲಿ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯದ ಪರ ವಕೀಲರು ವಾದ ಮಂಡಿಸಬೇಕಾಗಿತ್ತು. ಆದರೆ, ಕಾಲಾವಕಾಶದ ಕೊರತೆಯಿಂದ ನ್ಯಾಯಾಧೀಶ ಐ.ಪಿ. ನಾಯಿಕ್ ವಿಚಾರಣೆಯನ್ನು ಮುಂದೂಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.