ಕೇರಳದ ಸಾಯ್ (SAI) ಕ್ರೀಡಾ ಹಾಸ್ಟೆಲ್‌ನಲ್ಲಿಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು!

Date:

spot_img

ಕೊಲ್ಲಂ: ಕೇರಳದ ಕ್ರೀಡಾ ವಲಯವನ್ನು ಬೆಚ್ಚಿಬೀಳಿಸುವ ಘಟನೆಯೊಂದು ಕೊಲ್ಲಂನಲ್ಲಿ ನಡೆದಿದೆ. ಇಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿನಿಯರು ಗುರುವಾರ (ಜನವರಿ 15) ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕ್ರೀಡಾ ಹಾಸ್ಟೆಲ್‌ನ ಒಂದೇ ಕೊಠಡಿಯಲ್ಲಿ ಇಬ್ಬರು ಯುವತಿಯರು ಶವವಾಗಿ ಪತ್ತೆಯಾಗಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ.

ಮೃತರನ್ನು 17 ವರ್ಷದ ಅಥ್ಲೆಟಿಕ್ಸ್ ಕ್ರೀಡಾಪಟು ಮತ್ತು 15 ವರ್ಷದ ಕಬಡ್ಡಿ ಆಟಗಾರ್ತಿ ಎಂದು ಗುರುತಿಸಲಾಗಿದೆ. ಇವರು ಕ್ರಮವಾಗಿ 12 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಪ್ರತಿದಿನದಂತೆ ಬೆಳಗಿನ ಜಾವದ ತರಬೇತಿಗೆ ಇವರು ಹಾಜರಾಗದಿದ್ದಾಗ ಅನುಮಾನಗೊಂಡ ಸಹಪಾಠಿಗಳು ಕೋಣೆಯ ಬಳಿ ಹೋಗಿ ನೋಡಿದ್ದಾರೆ. ಎಷ್ಟು ಬಾರಿ ಬಾಗಿಲು ತಟ್ಟಿದರೂ ಸ್ಪಂದನೆ ಸಿಗದಿದ್ದಾಗ, ಅಧಿಕಾರಿಗಳು ಬಾಗಿಲು ಒಡೆದು ಒಳಪ್ರವೇಶಿಸಿದಾಗ ಇಬ್ಬರೂ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪೊಲೀಸ್ ತನಿಖೆಯ ಪ್ರಕಾರ, 15 ವರ್ಷದ ಬಾಲಕಿ ತನ್ನ ಕೊಠಡಿಯನ್ನು ಬಿಟ್ಟು ಬುಧವಾರ ರಾತ್ರಿ ಗೆಳತಿಯ ಕೋಣೆಯಲ್ಲಿ ಉಳಿದುಕೊಂಡಿದ್ದಳು. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ. ಈ ಇಬ್ಬರು ಉದಯೋನ್ಮುಖ ಕ್ರೀಡಾಪಟುಗಳು ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.